ಬಂಟ್ವಾಳ: ಅಕ್ರಮ ಜುಗಾರಿ ಅಡ್ಡೆ ಮೇಲೆ ದಾಳಿ ನಡೆಸಿದ ನಂತರ ಹಣದ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ವಿಟ್ಲ ಠಾಣೆಯ ಉಪನಿರೀಕ್ಷಕ (ಎಸ್ಐ) ಕೌಶಿಕ್ ಬಿ.ಸಿ. ಅವರನ್ನು ಅಮಾನತು ಮಾಡಲಾಗಿದೆ.
ಮೇ 8ರಂದು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಗಾರಿ ನಡೆಯುತ್ತಿದೆ ಎಂಬ ಗುಪ್ತ ಮಾಹಿತಿ ಮೇರೆಗೆ ಎಸ್ಐ ಕೌಶಿಕ್ ನೇತೃತ್ವದಲ್ಲಿ ದಾಳಿ ನಡೆದಿತ್ತು. ಜುಗಾರಿ ಆಟದಲ್ಲಿ ತೊಡಗಿದ್ದ ಹಲವರು ಸ್ಥಳದಲ್ಲೇ ಪತ್ತೆಯಾಗಿದ್ದು, ಜೊತೆಗೆ ಒಂದು ಮೋಟಾರ್ಸೈಕಲ್ ಸಹ ವಶಕ್ಕೆ ಸಿಕ್ಕಿತ್ತು.
ಆದರೆ, ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕಾದಾಗ ಎಸ್ಐ ಕೌಶಿಕ್ ಅವರು ಆರೋಪಿಗಳನ್ನು ಬಂಧಿಸುವ ಬದಲು, ಬೈಕ್ ಮಾಲಿಕನಿಗೆ ಕರೆಮಾಡಿ ಠಾಣೆಗೆ ಬರಮಾಡಿದ್ದರು. ಬಳಿಕ ಮೂರನೇ ವ್ಯಕ್ತಿಯ ಮೂಲಕ ಹಣದ ಬೇಡಿಕೆ ಇಟ್ಟಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧದ ಆಡಿಯೋ ಕ್ಲಿಪ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.
ಘಟನೆ ಹಿನ್ನೆಲೆಯಲ್ಲಿ, ಮೇ 12ರಂದು ಇಲಾಖಾತ್ಮಕ ಶಿಸ್ತು ಕ್ರಮದಡಿಯಲ್ಲಿ ಎಸ್ಐ ಕೌಶಿಕ್ ಬಿ.ಸಿ. ಅವರನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಆರೋಪದಿಂದ ಪೊಲೀಸ್ ಇಲಾಖೆಯ ಇಮೇಜ್ ಮಸಿ ಹೊಡೆಯುತ್ತಿರುವುದರಿಂದ, ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹೆಚ್ಚಿನ ತನಿಖೆ ಮುಂದುವರೆದಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…