ನವದೆಹಲಿ: ಚುನಾವಣಾ ಆಯೋಗದ ವಿರುದ್ಧ “ಮತಗಳ್ಳತನ” ಆರೋಪ ಹೊರಿಸಿ ವಿರೋಧ ಪಕ್ಷಗಳು ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ಗದ್ದಲ ಸೃಷ್ಟಿಯಾಯಿತು. ಈ ಮೆರವಣಿಗೆಯ ನೇತೃತ್ವ ವಹಿಸಿದ್ದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮೆರವಣಿಗೆಯಲ್ಲಿ ರಾಹುಲ್ ಗಾಂಧಿ ಜೊತೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಡಿಎಂಕೆ ಸಂಸದೆ ಕನಿಮೊಳಿ ಸೇರಿದಂತೆ ಹಲವಾರು ವಿರೋಧ ಪಕ್ಷದ ಸಂಸದರು ಭಾಗವಹಿಸಿದ್ದರು.
ಮತ ಕಳ್ಳತನದ ಆರೋಪದ ವಿಚಾರದಲ್ಲಿ ಚುನಾವಣಾ ಆಯೋಗದ ಕಚೇರಿಯತ್ತ ತೆರಳಿದ ಪ್ರತಿಭಟನಾ ಮೆರವಣಿಗೆಯನ್ನು ಪೊಲೀಸರು ಮಧ್ಯೆ ತಡೆದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ಉಂಟಾಯಿತು. ತಡೆಯೊಡ್ಡಿದರೂ ರಾಹುಲ್ ಗಾಂಧಿ ಮತ್ತು ಇತರ ನಾಯಕರು ಮೆರವಣಿಗೆಯನ್ನು ಮುಂದುವರಿಸಲು ಪ್ರಯತ್ನಿಸಿದ ಪರಿಣಾಮ, ಪೊಲೀಸರು ಅವರನ್ನು ಬಂಧಿಸಿದರು.
ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ಉಂಟಾಯಿತು. ವಿರೋಧ ಪಕ್ಷದ ನಾಯಕರು, “ಜನರ ಮತ ಹಕ್ಕಿಗೆ ಧಕ್ಕೆಯಾಗಿದೆ” ಎಂದು ಆರೋಪಿಸಿ, ಚುನಾವಣೆ ಪ್ರಕ್ರಿಯೆಯ ಪಾರದರ್ಶಕತೆಗೆ ಒತ್ತಾಯ ವ್ಯಕ್ತಪಡಿಸಿದ್ದಾರೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…