
ಮತದಾರರ ಮಾಹಿತಿ ಕಳವು ಪ್ರಕರಣ ಸಂಬಂಧ ಬಿಬಿಎಂಪಿ ವ್ಯಾಪ್ತಿಯ ಮೂವರು ಕಂದಾಯ ಅಧಿಕಾರಿಗಳನ್ನು ಅಮಾನತು ಮಾಡಿ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಸೋಮವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ತುಷಾರ್ ಗಿರಿನಾಥ್, ‘ಮತದಾರರ ಮಾಹಿತಿ ಕಳವು ಆರೋಪ ಪ್ರಕರಣ ಸಂಬಂಧ ನಾವು ತನಿಖೆ ನಡೆಸಿದ ವರದಿ ಕೈಸೇರಿದ್ದು, ಇದರನ್ವಯ ಕರ್ತವ್ಯ ಲೋಕವೆಸಗಿರುವ ಆರೋಪದಡಿ ಇಲ್ಲಿನ ಚಿಕ್ಕಪೇಟೆ ಆರ್ ಒ ಭೀಮಶಂಕರ್, ಮಹಾದೇವಪುರ ಆರ್.ಚಂದ್ರಶೇಖರ್, ಶಿವಾಜಿನಗರ ಸುಹೈಲ್ ಅಹ್ಮದ್ ಅವರನ್ನು ಅಮಾನತು ಮಾಡಲಾಗಿದೆ’ ಎಂದರು.
‘ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಒಂದೊಂದು ಸೇರಿದಂತೆ ನಾಲ್ಕು ತಂಡ ರಚನೆ ಮಾಡಲಾಗಿತ್ತು. ಜತೆಗೆ, ಅಪರ ಜಿಲ್ಲಾ ಚುನಾವಣಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆದಿತ್ತು. ಸದ್ಯ ತನಿಖೆಯ ವರದಿ ಬಿಬಿಎಂಪಿ ಕೈ ಸೇರಿದ್ದು, ಈ ಸಂಬಂಧ ಕರ್ತವ್ಯಲೋಪ ಹಿನ್ನೆಲೆ ಆರ್.ಒಗಳನ್ನು ಅಮಾನತು ಮಾಡಲಾಗಿದೆ’ ಎಂದು ಅವರು ವಿವರಿಸಿದರು.
Maruthi