ಮತದಾರರ ಮಾಹಿತಿ ಕಳವು ಪ್ರಕರಣ ಸಂಬಂಧ ಬಿಬಿಎಂಪಿ ವ್ಯಾಪ್ತಿಯ ಮೂವರು ಕಂದಾಯ ಅಧಿಕಾರಿಗಳನ್ನು ಅಮಾನತು ಮಾಡಿ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ.
ಸೋಮವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ತುಷಾರ್ ಗಿರಿನಾಥ್, ‘ಮತದಾರರ ಮಾಹಿತಿ ಕಳವು ಆರೋಪ ಪ್ರಕರಣ ಸಂಬಂಧ ನಾವು ತನಿಖೆ ನಡೆಸಿದ ವರದಿ ಕೈಸೇರಿದ್ದು, ಇದರನ್ವಯ ಕರ್ತವ್ಯ ಲೋಕವೆಸಗಿರುವ ಆರೋಪದಡಿ ಇಲ್ಲಿನ ಚಿಕ್ಕಪೇಟೆ ಆರ್ ಒ ಭೀಮಶಂಕರ್, ಮಹಾದೇವಪುರ ಆರ್.ಚಂದ್ರಶೇಖರ್, ಶಿವಾಜಿನಗರ ಸುಹೈಲ್ ಅಹ್ಮದ್ ಅವರನ್ನು ಅಮಾನತು ಮಾಡಲಾಗಿದೆ’ ಎಂದರು.
‘ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿ ಲೋಕಸಭಾ ಕ್ಷೇತ್ರಕ್ಕೆ ಒಂದೊಂದು ಸೇರಿದಂತೆ ನಾಲ್ಕು ತಂಡ ರಚನೆ ಮಾಡಲಾಗಿತ್ತು. ಜತೆಗೆ, ಅಪರ ಜಿಲ್ಲಾ ಚುನಾವಣಾಧಿಕಾರಿ ನೇತೃತ್ವದಲ್ಲಿ ತನಿಖೆ ನಡೆದಿತ್ತು. ಸದ್ಯ ತನಿಖೆಯ ವರದಿ ಬಿಬಿಎಂಪಿ ಕೈ ಸೇರಿದ್ದು, ಈ ಸಂಬಂಧ ಕರ್ತವ್ಯಲೋಪ ಹಿನ್ನೆಲೆ ಆರ್.ಒಗಳನ್ನು ಅಮಾನತು ಮಾಡಲಾಗಿದೆ’ ಎಂದು ಅವರು ವಿವರಿಸಿದರು.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…