Latest

ವಿ.ವಿ.ಪುರಂ ಪೊಲೀಸರಿಂದ ಸ್ವತ್ತು ಕಳುವು ಪ್ರಕರಣದಲ್ಲಿ ಭಾಗಿಯಾಗಿದ್ದ ಕಾನೂನು ಸಂಘರ್ಷಕ್ಕೊಳಗಾದ ಮೂವರು ಬಾಲಕರ ವಶ.

ದಿನಾಂಕ: ೧೭/೦೬/೨೦೨೨ ರಂದು ಬೆಳಿಗ್ಗೆ ವಿ.ವಿ.ಪುರಂ ಠಾಣಾ ಪೊಲೀಸ್ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ಯಾದವಗಿರಿಯ ಬ್ರಿಡ್ಞ್ ಬಳಿ ಶುಭೋದಯ ಪಾಯಿಂಟ್ ಕರ್ತವ್ಯದಲ್ಲಿದ್ದಾಗ, ನಂಬರ್ ಪ್ಲೇಟ್ ಇಲ್ಲದ ಒಂದು ಸ್ಕೂಟರ್‌ನಲ್ಲಿ ಬಂದ ೦೩ ಜನ ಬಾಲಕರನ್ನು ನಿಲ್ಲಿಸಿ ಪ್ರಶ್ನಿಸಲಾಗಿ ಸಮಂಜಸವಾದ ಉತ್ತರವನ್ನು ನೀಡದಿದ್ದಾಗ ಅನುಮಾನ ಬಂದು ವಾಹನವನ್ನು ಪರಿಶೀಲಿಸಲಾಗಿ ಸದರಿ ದ್ವಿಚಕ್ರ ವಾಹನವು ಠಾಣೆಯಲ್ಲಿ ದಾಖಲಾಗಿದ್ದ ಕಳುವು ಪ್ರಕರಣಕ್ಕೆ ಸಂಬಂಧಿಸಿದ್ದರಿಂದ ಸದರಿಯವರನ್ನು ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದಾಗ ಬಾಲಕರು ಮೈಸೂರು ನಗರ ಮತ್ತು ಹಾಸನ ಜಿಲ್ಲಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿದರ ಮೇರೆಗೆ ಸದರಿ ಕಾನೂನಿನ ಸಂಘರ್ಷಕ್ಕೆ ಒಳಗಾದ ೦೩ ಬಾಲಕರನ್ನು ವಶಕ್ಕೆ ಪಡೆದು, ಇವರಿಂದ ರೂ ೩,೨೫,೦೦೦/- ಬೆಲೆ ಬಾಳುವ ೫ ದ್ವಿ ಚಕ್ರ ವಾಹನಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತದೆ. ಈ ಪತ್ತೆ ಕಾರ್ಯದಿಂದ ಮೈಸೂರು ನಗರ ವಿ.ವಿ.ಪುರಂ ಪೊಲೀಸ್ ಠಾಣೆಯ-೦೧, ನರಸಿಂಹರಾಜ ಪೊಲೀಸ್ ಠಾಣೆಯ-೦೨, ಉದಯಗಿರಿ ಪೊಲೀಸ್ ಠಾಣೆಯ-೦೧ ಮತ್ತು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯ-೦೧ ಕಳುವು ಪ್ರಕರಣಗಳು ಪತ್ತೆಯಾಗಿರುತ್ತವೆ. ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿಸಿಪಿ, ಕೇಂದ್ರಸ್ಥಾನ ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ನರಸಿಂಹರಾಜ ವಿಭಾಗದ ಎ.ಸಿ.ಪಿ ರವರಾದ ಶ್ರೀ ಶಿವಶಂಕರ್ ರವರ ಉಸ್ತುವಾರಿಯಲ್ಲಿ ವಿ.ವಿ.ಪುರಂ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ಜಯಕುಮಾರ. ಎನ್ ಪಿ.ಎಸ್.ಐ ಶ್ರೀ. ಲೇಪಾಕ್ಷ. ಕೆ, ಎ.ಎಸ್.ಐ ಸಿದ್ದರಾಜು.ಹೆಚ್. ಸಿಬ್ಬಂದಿಗಳಾದ ರವಿಗೌಡ. ಎಸ್, ಚಾಮುಂಡಮ್ಮ, ಮಹೇಶ.ಎಸ್, ಪರಶುರಾಮ ರಾಠೋಡ, ಈರಣ್ಣ ಎನ್.ವಿ, ಉಮೇಶ ರವರುಗಳು ಮಾಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago