Latest

ವಿ.ವಿ.ಪುರಂ ಪೊಲೀಸರಿಂದ ಸ್ವತ್ತು ಕಳುವು ಪ್ರಕರಣದಲ್ಲಿ ಭಾಗಿಯಾಗಿದ್ದ ಕಾನೂನು ಸಂಘರ್ಷಕ್ಕೊಳಗಾದ ಮೂವರು ಬಾಲಕರ ವಶ.

ದಿನಾಂಕ: ೧೭/೦೬/೨೦೨೨ ರಂದು ಬೆಳಿಗ್ಗೆ ವಿ.ವಿ.ಪುರಂ ಠಾಣಾ ಪೊಲೀಸ್ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ಯಾದವಗಿರಿಯ ಬ್ರಿಡ್ಞ್ ಬಳಿ ಶುಭೋದಯ ಪಾಯಿಂಟ್ ಕರ್ತವ್ಯದಲ್ಲಿದ್ದಾಗ, ನಂಬರ್ ಪ್ಲೇಟ್ ಇಲ್ಲದ ಒಂದು ಸ್ಕೂಟರ್‌ನಲ್ಲಿ ಬಂದ ೦೩ ಜನ ಬಾಲಕರನ್ನು ನಿಲ್ಲಿಸಿ ಪ್ರಶ್ನಿಸಲಾಗಿ ಸಮಂಜಸವಾದ ಉತ್ತರವನ್ನು ನೀಡದಿದ್ದಾಗ ಅನುಮಾನ ಬಂದು ವಾಹನವನ್ನು ಪರಿಶೀಲಿಸಲಾಗಿ ಸದರಿ ದ್ವಿಚಕ್ರ ವಾಹನವು ಠಾಣೆಯಲ್ಲಿ ದಾಖಲಾಗಿದ್ದ ಕಳುವು ಪ್ರಕರಣಕ್ಕೆ ಸಂಬಂಧಿಸಿದ್ದರಿಂದ ಸದರಿಯವರನ್ನು ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದಾಗ ಬಾಲಕರು ಮೈಸೂರು ನಗರ ಮತ್ತು ಹಾಸನ ಜಿಲ್ಲಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿದರ ಮೇರೆಗೆ ಸದರಿ ಕಾನೂನಿನ ಸಂಘರ್ಷಕ್ಕೆ ಒಳಗಾದ ೦೩ ಬಾಲಕರನ್ನು ವಶಕ್ಕೆ ಪಡೆದು, ಇವರಿಂದ ರೂ ೩,೨೫,೦೦೦/- ಬೆಲೆ ಬಾಳುವ ೫ ದ್ವಿ ಚಕ್ರ ವಾಹನಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತದೆ. ಈ ಪತ್ತೆ ಕಾರ್ಯದಿಂದ ಮೈಸೂರು ನಗರ ವಿ.ವಿ.ಪುರಂ ಪೊಲೀಸ್ ಠಾಣೆಯ-೦೧, ನರಸಿಂಹರಾಜ ಪೊಲೀಸ್ ಠಾಣೆಯ-೦೨, ಉದಯಗಿರಿ ಪೊಲೀಸ್ ಠಾಣೆಯ-೦೧ ಮತ್ತು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯ-೦೧ ಕಳುವು ಪ್ರಕರಣಗಳು ಪತ್ತೆಯಾಗಿರುತ್ತವೆ. ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿಸಿಪಿ, ಕೇಂದ್ರಸ್ಥಾನ ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ನರಸಿಂಹರಾಜ ವಿಭಾಗದ ಎ.ಸಿ.ಪಿ ರವರಾದ ಶ್ರೀ ಶಿವಶಂಕರ್ ರವರ ಉಸ್ತುವಾರಿಯಲ್ಲಿ ವಿ.ವಿ.ಪುರಂ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ಜಯಕುಮಾರ. ಎನ್ ಪಿ.ಎಸ್.ಐ ಶ್ರೀ. ಲೇಪಾಕ್ಷ. ಕೆ, ಎ.ಎಸ್.ಐ ಸಿದ್ದರಾಜು.ಹೆಚ್. ಸಿಬ್ಬಂದಿಗಳಾದ ರವಿಗೌಡ. ಎಸ್, ಚಾಮುಂಡಮ್ಮ, ಮಹೇಶ.ಎಸ್, ಪರಶುರಾಮ ರಾಠೋಡ, ಈರಣ್ಣ ಎನ್.ವಿ, ಉಮೇಶ ರವರುಗಳು ಮಾಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

14 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

15 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

15 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

15 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

15 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago