ದಿನಾಂಕ: ೧೭/೦೬/೨೦೨೨ ರಂದು ಬೆಳಿಗ್ಗೆ ವಿ.ವಿ.ಪುರಂ ಠಾಣಾ ಪೊಲೀಸ್ ಸಿಬ್ಬಂದಿಗಳು ಠಾಣಾ ವ್ಯಾಪ್ತಿಯ ಯಾದವಗಿರಿಯ ಬ್ರಿಡ್ಞ್ ಬಳಿ ಶುಭೋದಯ ಪಾಯಿಂಟ್ ಕರ್ತವ್ಯದಲ್ಲಿದ್ದಾಗ, ನಂಬರ್ ಪ್ಲೇಟ್ ಇಲ್ಲದ ಒಂದು ಸ್ಕೂಟರ್ನಲ್ಲಿ ಬಂದ ೦೩ ಜನ ಬಾಲಕರನ್ನು ನಿಲ್ಲಿಸಿ ಪ್ರಶ್ನಿಸಲಾಗಿ ಸಮಂಜಸವಾದ ಉತ್ತರವನ್ನು ನೀಡದಿದ್ದಾಗ ಅನುಮಾನ ಬಂದು ವಾಹನವನ್ನು ಪರಿಶೀಲಿಸಲಾಗಿ ಸದರಿ ದ್ವಿಚಕ್ರ ವಾಹನವು ಠಾಣೆಯಲ್ಲಿ ದಾಖಲಾಗಿದ್ದ ಕಳುವು ಪ್ರಕರಣಕ್ಕೆ ಸಂಬಂಧಿಸಿದ್ದರಿಂದ ಸದರಿಯವರನ್ನು ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಿದಾಗ ಬಾಲಕರು ಮೈಸೂರು ನಗರ ಮತ್ತು ಹಾಸನ ಜಿಲ್ಲಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ದ್ವಿ ಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದಾಗಿ ತಿಳಿಸಿದರ ಮೇರೆಗೆ ಸದರಿ ಕಾನೂನಿನ ಸಂಘರ್ಷಕ್ಕೆ ಒಳಗಾದ ೦೩ ಬಾಲಕರನ್ನು ವಶಕ್ಕೆ ಪಡೆದು, ಇವರಿಂದ ರೂ ೩,೨೫,೦೦೦/- ಬೆಲೆ ಬಾಳುವ ೫ ದ್ವಿ ಚಕ್ರ ವಾಹನಗಳನ್ನು ಅಮಾನತ್ತು ಪಡಿಸಿಕೊಂಡಿರುತ್ತದೆ. ಈ ಪತ್ತೆ ಕಾರ್ಯದಿಂದ ಮೈಸೂರು ನಗರ ವಿ.ವಿ.ಪುರಂ ಪೊಲೀಸ್ ಠಾಣೆಯ-೦೧, ನರಸಿಂಹರಾಜ ಪೊಲೀಸ್ ಠಾಣೆಯ-೦೨, ಉದಯಗಿರಿ ಪೊಲೀಸ್ ಠಾಣೆಯ-೦೧ ಮತ್ತು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯ-೦೧ ಕಳುವು ಪ್ರಕರಣಗಳು ಪತ್ತೆಯಾಗಿರುತ್ತವೆ. ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿಸಿಪಿ, ಕೇಂದ್ರಸ್ಥಾನ ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ನರಸಿಂಹರಾಜ ವಿಭಾಗದ ಎ.ಸಿ.ಪಿ ರವರಾದ ಶ್ರೀ ಶಿವಶಂಕರ್ ರವರ ಉಸ್ತುವಾರಿಯಲ್ಲಿ ವಿ.ವಿ.ಪುರಂ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ಜಯಕುಮಾರ. ಎನ್ ಪಿ.ಎಸ್.ಐ ಶ್ರೀ. ಲೇಪಾಕ್ಷ. ಕೆ, ಎ.ಎಸ್.ಐ ಸಿದ್ದರಾಜು.ಹೆಚ್. ಸಿಬ್ಬಂದಿಗಳಾದ ರವಿಗೌಡ. ಎಸ್, ಚಾಮುಂಡಮ್ಮ, ಮಹೇಶ.ಎಸ್, ಪರಶುರಾಮ ರಾಠೋಡ, ಈರಣ್ಣ ಎನ್.ವಿ, ಉಮೇಶ ರವರುಗಳು ಮಾಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…