Latest

ಬೆಂಗಳೂರು ಆಟೋ ಚಾಲಕರಿಗೆ ಎಚ್ಚರಿಕೆ: ಜಾಹೀರಾತು ಅಂಟಿಸಿದರೆ ಕಠಿಣ ದಂಡ.!

ಬೆಂಗಳೂರು: ನಗರದಲ್ಲಿ ಆಟೋ ಚಾಲಕರಿಗೆ ಸಾರ್ವಜನಿಕ ಖಾಸಗಿ ಕಂಪನಿಗಳ ಜಾಹೀರಾತುಗಳನ್ನಾ ಆಟೋಗಳ ಹಿಂಭಾಗದಲ್ಲಿ ಅಂಟಿಸುವುದು ಇನ್ನುಮೇಲೆ ದಂಡನೀಯ ಅಪರಾಧವಾಗಲಿದೆ. ನಿಯಮಿತ ಅನುಮತಿ ಇಲ್ಲದೆ ಜಾಹೀರಾತು ಹಾಕಿರುವ ಚಾಲಕರ ಮೇಲೆ ಸಾರಿಗೆ ಇಲಾಖೆ ಈಗಾಗಲೇ ಕ್ರಮ ಕೈಗೊಂಡಿದೆ.

ಬೆಂಗಳೂರು ನಗರದಲ್ಲಿ ಹಲವು ಆಟೋಗಳಲ್ಲಿ “ಪ್ಲೇ ಗೇಮ್, ಶಾಪಿಂಗ್ ಆಪ್, ಇನ್ಸ್ಟಿಟ್ಯೂಟ್” ಮುಂತಾದ ಜಾಹೀರಾತು ಪೋಸ್ಟರ್‌ಗಳನ್ನು ಹಿಂಭಾಗದ ಗಾಜಿನಲ್ಲಿ ಅಥವಾ ಮೈದೆಯಲ್ಲಿ ಅಂಟಿಸಿಕೊಂಡು ಓಡಾಡುತ್ತಿರುವ ದೃಶ್ಯಗಳು ಸಾಮಾನ್ಯವಾಗಿವೆ. ಈ ವರದಿಗಳನ್ನು ಗಂಭೀರವಾಗಿ ಪರಿಗಣಿಸಿದ ಸಾರಿಗೆ ಇಲಾಖೆ, ಕೆಲವೇ ದಿನಗಳಲ್ಲಿ ಹಲವು ಆಟೋಗಳಿಗೆ ದಂಡ ವಿಧಿಸಿದೆ.

ನಿಯಮದ ಪ್ರಕಾರ:

ಆಟೋಗಳಲ್ಲಿ ಜಾಹೀರಾತು ಪ್ರದರ್ಶಿಸಲು ಸರ್ಕಾರದಿಂದ ವಾರ್ಷಿಕ ಅನುಮತಿ ಪಡೆಯುವುದು ಕಡ್ಡಾಯ. ಇದಕ್ಕಾಗಿ ಆಟೋ ಚಾಲಕರು ವರ್ಷಕ್ಕೆ ₹5000 ರೂ. ಹಣವನ್ನು ತೆರಲಾಗುತ್ತದೆ. ಅನುಮತಿ ಇಲ್ಲದೆ ಜಾಹೀರಾತು ಹಾಕುವುದು ನಿಯಮ ಉಲ್ಲಂಘನೆಗೆ ಸಮಾನ, ಮತ್ತು ಇದರಿಂದ ಸಾರ್ವಜನಿಕ ವಾಹನದ ನಿಟ್ಟಿನಲ್ಲಿ ಸುರಕ್ಷತೆಗೂ ಧಕ್ಕೆಯಾಗುವ ಸಾಧ್ಯತೆ ಇದೆ.

ಸಾರಿಗೆ ಇಲಾಖೆ ಎಚ್ಚರಿಕೆ:

“ಯಾರೇ ಆಟೋ ಚಾಲಕರು ನಿರ್ಬಂಧವಿಲ್ಲದೆ ತಮ್ಮ ವಾಹನಗಳಲ್ಲಿ ಜಾಹೀರಾತುಗಳನ್ನು ಅಂಟಿಸಿಕೊಂಡು ಓಡಾಡಿದರೆ, ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜಾರಿಗೆ ಬರಲಿದೆ. ಕಾನೂನನ್ನು ಮೀರಿ ಹಣದ ಆಸೆಗಾಗಿ ಜಾಹೀರಾತು ಹಾಕುವುದು ಗೌರವಯುತ ವ್ಯವಹಾರವಲ್ಲ,” ಎಂದು ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

11 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

11 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

11 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

11 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago