Latest

ವಿಕ್ರಾಂತ್ ರೋಣ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡುವಾಗ ಮಧ್ಯದಲ್ಲಿ ಬೇಕಾದರೂ ಇಷ್ಟ ಬಂದ ಭಾಷೆಗೆ ಬದಲಾಯಿಸಿಕೊಂಡು ನೋಡಬಹುದು! ವಿಚಿತ್ರ ಎನಿಸಿದರೂ ಇದು ಸತ್ಯ!

ವಿಕ್ರಾಂತ್ ರೋಣ ಚಿತ್ರವನ್ನು ತಾವು ಯಾವುದೇ ಭಾಷೆಯಲ್ಲಿ ನೋಡಲು ಮುಂದಾದರು ಮದ್ಯದಲ್ಲಿ ತಮಗೆ ಇಷ್ಟಬಂದ ಭಾಷೆಗೆ ಬದಲಾಯಿಸಿಕೊಳ್ಳಬಹುದು ಹೌದು ವಿಕ್ರಾಂತ್ ರೋಣ ಚಿತ್ರವನ್ನು ಹೊಸ ತಂತ್ರಜ್ಞಾನದೊಂದಿಗೆ ಈ ರೀತಿಯ ಅವಕಾಶವನ್ನು ಸಿನಿಪ್ರಿಯರಿಗೆ ಮಾಡಿಕೊಟ್ಟಿದೆ. ವಿಕ್ರಾಂತ್ ರೋಣ ಚಿತ್ರವನ್ನು ಸಿನಿ ಡಬ್ ಮಾಡಲಾಗಿದೆ ಸಿನಿ ಡಬ್ ಎಂದರೆ ಚಿತ್ರಮಂದಿರದಲ್ಲಿ ತಾವು ವಿಕ್ರಾಂತ್ ರೋಣದ ಯಾವುದೇ ಭಾಷೆಯ ಆವೃತ್ತಿಯನ್ನು ನೋಡಲು ಹೋಗಿದ್ದರೂ ಸಹ ಮಧ್ಯದಲ್ಲಿ ತಾವು ಬೇರೆ ಭಾಷೆಯನ್ನು ನೋಡಲು ಇಚ್ಛಿಸಿದಾಗ ಮೊಬೈಲ್ ನಲ್ಲಿ ಅಪ್ಲಿಕೇಷನ್ ಬಳಸಿ ಹೆಡ್ ಫೋನ್ ಮೂಲಕ ತಮಗೆ ಬೇಕಾದ ಭಾಷೆಯಲ್ಲಿ ಸಿನಿಮಾದ ವಾಯ್ಸನ್ನು ಸೆಲೆಕ್ಟ್ ಮಾಡಿ ಕೇಳಬಹುದು. ಈ ಮೊಬೈಲ್ ಅಪ್ಲಿಕೇಶನ್ ಚಿತ್ರಮಂದಿರದ ಒಳಗೆ ಮಾತ್ರ ಕೆಲಸ ಮಾಡುತ್ತದೆ. ಅಂದರೆ ಚಿತ್ರಮಂದಿರದ ಒಳಗೆ ಇದ್ದಾಗ ಮಾತ್ರ ತಾವು ವೀಕ್ಷಿಸುತ್ತಿರುವ ಚಿತ್ರಮಂದಿರ ಹಾಗೂ ಸಮಯವನ್ನು ಹಾಕಿದಲ್ಲಿ ಮಾತ್ರ ಅದು ತಮಗೆ ಎಲ್ಲಾ ಭಾಷೆಗಳಲ್ಲಿ ಶಬ್ದಗಳನ್ನು ಕೇಳಲು ಅವಕಾಶ ನೀಡುತ್ತದೆ. ಈ ರೀತಿಯ ತಂತ್ರಜ್ಞಾನ ಬಳಸಿರುವುದು ಕನ್ನಡ ಚಿತ್ರರಂಗದಲ್ಲೇ ವಿಕ್ರಾಂತ್ ರೋಣ ಚಿತ್ರಕ್ಕೆ ಮೊದಲು. ಒಂದೇ ಚಿತ್ರಮಂದಿರದಲ್ಲಿ ಕುಳಿತು 6 ಭಾಷೆಗಳಲ್ಲಿ ಚಿತ್ರವನ್ನು ನೋಡಬಹುದು. ವಿಕ್ರಂ ರೋಣ ಚಿತ್ರವು ಬಿಡುಗಡೆಗೆ ಸಿದ್ದವಾಗಿದ್ದು ಬಿಡುಗಡೆಯ ದಿನಾಂಕ ಹತ್ತಿರ ಬರುತ್ತಿದ್ದಂತೆ ಚಿತ್ರತಂಡದಿಂದ ಹೊಸ ಹೊಸ ವಿಚಾರಗಳು ಹೊರ ಬರುತ್ತಿವೆ. ಇದರಿಂದ ನಿರೀಕ್ಷಿಸುತ್ತಿರುವ ಜನರಲ್ಲಿ ಹೊಸ ರೀತಿಯ ಕುತೂಹಲ ಹೆಚ್ಚುತ್ತಿದ್ದು ಚಿತ್ರವನ್ನು ನೋಡಲು ಕಾತುರದಿಂದ ಕಾಯುತ್ತಿರುವಾವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದೇ ತಿಂಗಳು 28 ರಂದು ಚಿತ್ರ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದ್ದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ.

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

9 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

11 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

22 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

22 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

22 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

23 hours ago