Latest

ವಿಕ್ರಾಂತ್ ರೋಣ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡುವಾಗ ಮಧ್ಯದಲ್ಲಿ ಬೇಕಾದರೂ ಇಷ್ಟ ಬಂದ ಭಾಷೆಗೆ ಬದಲಾಯಿಸಿಕೊಂಡು ನೋಡಬಹುದು! ವಿಚಿತ್ರ ಎನಿಸಿದರೂ ಇದು ಸತ್ಯ!

ವಿಕ್ರಾಂತ್ ರೋಣ ಚಿತ್ರವನ್ನು ತಾವು ಯಾವುದೇ ಭಾಷೆಯಲ್ಲಿ ನೋಡಲು ಮುಂದಾದರು ಮದ್ಯದಲ್ಲಿ ತಮಗೆ ಇಷ್ಟಬಂದ ಭಾಷೆಗೆ ಬದಲಾಯಿಸಿಕೊಳ್ಳಬಹುದು ಹೌದು ವಿಕ್ರಾಂತ್ ರೋಣ ಚಿತ್ರವನ್ನು ಹೊಸ ತಂತ್ರಜ್ಞಾನದೊಂದಿಗೆ ಈ ರೀತಿಯ ಅವಕಾಶವನ್ನು ಸಿನಿಪ್ರಿಯರಿಗೆ ಮಾಡಿಕೊಟ್ಟಿದೆ. ವಿಕ್ರಾಂತ್ ರೋಣ ಚಿತ್ರವನ್ನು ಸಿನಿ ಡಬ್ ಮಾಡಲಾಗಿದೆ ಸಿನಿ ಡಬ್ ಎಂದರೆ ಚಿತ್ರಮಂದಿರದಲ್ಲಿ ತಾವು ವಿಕ್ರಾಂತ್ ರೋಣದ ಯಾವುದೇ ಭಾಷೆಯ ಆವೃತ್ತಿಯನ್ನು ನೋಡಲು ಹೋಗಿದ್ದರೂ ಸಹ ಮಧ್ಯದಲ್ಲಿ ತಾವು ಬೇರೆ ಭಾಷೆಯನ್ನು ನೋಡಲು ಇಚ್ಛಿಸಿದಾಗ ಮೊಬೈಲ್ ನಲ್ಲಿ ಅಪ್ಲಿಕೇಷನ್ ಬಳಸಿ ಹೆಡ್ ಫೋನ್ ಮೂಲಕ ತಮಗೆ ಬೇಕಾದ ಭಾಷೆಯಲ್ಲಿ ಸಿನಿಮಾದ ವಾಯ್ಸನ್ನು ಸೆಲೆಕ್ಟ್ ಮಾಡಿ ಕೇಳಬಹುದು. ಈ ಮೊಬೈಲ್ ಅಪ್ಲಿಕೇಶನ್ ಚಿತ್ರಮಂದಿರದ ಒಳಗೆ ಮಾತ್ರ ಕೆಲಸ ಮಾಡುತ್ತದೆ. ಅಂದರೆ ಚಿತ್ರಮಂದಿರದ ಒಳಗೆ ಇದ್ದಾಗ ಮಾತ್ರ ತಾವು ವೀಕ್ಷಿಸುತ್ತಿರುವ ಚಿತ್ರಮಂದಿರ ಹಾಗೂ ಸಮಯವನ್ನು ಹಾಕಿದಲ್ಲಿ ಮಾತ್ರ ಅದು ತಮಗೆ ಎಲ್ಲಾ ಭಾಷೆಗಳಲ್ಲಿ ಶಬ್ದಗಳನ್ನು ಕೇಳಲು ಅವಕಾಶ ನೀಡುತ್ತದೆ. ಈ ರೀತಿಯ ತಂತ್ರಜ್ಞಾನ ಬಳಸಿರುವುದು ಕನ್ನಡ ಚಿತ್ರರಂಗದಲ್ಲೇ ವಿಕ್ರಾಂತ್ ರೋಣ ಚಿತ್ರಕ್ಕೆ ಮೊದಲು. ಒಂದೇ ಚಿತ್ರಮಂದಿರದಲ್ಲಿ ಕುಳಿತು 6 ಭಾಷೆಗಳಲ್ಲಿ ಚಿತ್ರವನ್ನು ನೋಡಬಹುದು. ವಿಕ್ರಂ ರೋಣ ಚಿತ್ರವು ಬಿಡುಗಡೆಗೆ ಸಿದ್ದವಾಗಿದ್ದು ಬಿಡುಗಡೆಯ ದಿನಾಂಕ ಹತ್ತಿರ ಬರುತ್ತಿದ್ದಂತೆ ಚಿತ್ರತಂಡದಿಂದ ಹೊಸ ಹೊಸ ವಿಚಾರಗಳು ಹೊರ ಬರುತ್ತಿವೆ. ಇದರಿಂದ ನಿರೀಕ್ಷಿಸುತ್ತಿರುವ ಜನರಲ್ಲಿ ಹೊಸ ರೀತಿಯ ಕುತೂಹಲ ಹೆಚ್ಚುತ್ತಿದ್ದು ಚಿತ್ರವನ್ನು ನೋಡಲು ಕಾತುರದಿಂದ ಕಾಯುತ್ತಿರುವಾವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದೇ ತಿಂಗಳು 28 ರಂದು ಚಿತ್ರ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದ್ದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ.

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago