Latest

ವಿಕ್ರಾಂತ್ ರೋಣ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡುವಾಗ ಮಧ್ಯದಲ್ಲಿ ಬೇಕಾದರೂ ಇಷ್ಟ ಬಂದ ಭಾಷೆಗೆ ಬದಲಾಯಿಸಿಕೊಂಡು ನೋಡಬಹುದು! ವಿಚಿತ್ರ ಎನಿಸಿದರೂ ಇದು ಸತ್ಯ!

ವಿಕ್ರಾಂತ್ ರೋಣ ಚಿತ್ರವನ್ನು ತಾವು ಯಾವುದೇ ಭಾಷೆಯಲ್ಲಿ ನೋಡಲು ಮುಂದಾದರು ಮದ್ಯದಲ್ಲಿ ತಮಗೆ ಇಷ್ಟಬಂದ ಭಾಷೆಗೆ ಬದಲಾಯಿಸಿಕೊಳ್ಳಬಹುದು ಹೌದು ವಿಕ್ರಾಂತ್ ರೋಣ ಚಿತ್ರವನ್ನು ಹೊಸ ತಂತ್ರಜ್ಞಾನದೊಂದಿಗೆ ಈ ರೀತಿಯ ಅವಕಾಶವನ್ನು ಸಿನಿಪ್ರಿಯರಿಗೆ ಮಾಡಿಕೊಟ್ಟಿದೆ. ವಿಕ್ರಾಂತ್ ರೋಣ ಚಿತ್ರವನ್ನು ಸಿನಿ ಡಬ್ ಮಾಡಲಾಗಿದೆ ಸಿನಿ ಡಬ್ ಎಂದರೆ ಚಿತ್ರಮಂದಿರದಲ್ಲಿ ತಾವು ವಿಕ್ರಾಂತ್ ರೋಣದ ಯಾವುದೇ ಭಾಷೆಯ ಆವೃತ್ತಿಯನ್ನು ನೋಡಲು ಹೋಗಿದ್ದರೂ ಸಹ ಮಧ್ಯದಲ್ಲಿ ತಾವು ಬೇರೆ ಭಾಷೆಯನ್ನು ನೋಡಲು ಇಚ್ಛಿಸಿದಾಗ ಮೊಬೈಲ್ ನಲ್ಲಿ ಅಪ್ಲಿಕೇಷನ್ ಬಳಸಿ ಹೆಡ್ ಫೋನ್ ಮೂಲಕ ತಮಗೆ ಬೇಕಾದ ಭಾಷೆಯಲ್ಲಿ ಸಿನಿಮಾದ ವಾಯ್ಸನ್ನು ಸೆಲೆಕ್ಟ್ ಮಾಡಿ ಕೇಳಬಹುದು. ಈ ಮೊಬೈಲ್ ಅಪ್ಲಿಕೇಶನ್ ಚಿತ್ರಮಂದಿರದ ಒಳಗೆ ಮಾತ್ರ ಕೆಲಸ ಮಾಡುತ್ತದೆ. ಅಂದರೆ ಚಿತ್ರಮಂದಿರದ ಒಳಗೆ ಇದ್ದಾಗ ಮಾತ್ರ ತಾವು ವೀಕ್ಷಿಸುತ್ತಿರುವ ಚಿತ್ರಮಂದಿರ ಹಾಗೂ ಸಮಯವನ್ನು ಹಾಕಿದಲ್ಲಿ ಮಾತ್ರ ಅದು ತಮಗೆ ಎಲ್ಲಾ ಭಾಷೆಗಳಲ್ಲಿ ಶಬ್ದಗಳನ್ನು ಕೇಳಲು ಅವಕಾಶ ನೀಡುತ್ತದೆ. ಈ ರೀತಿಯ ತಂತ್ರಜ್ಞಾನ ಬಳಸಿರುವುದು ಕನ್ನಡ ಚಿತ್ರರಂಗದಲ್ಲೇ ವಿಕ್ರಾಂತ್ ರೋಣ ಚಿತ್ರಕ್ಕೆ ಮೊದಲು. ಒಂದೇ ಚಿತ್ರಮಂದಿರದಲ್ಲಿ ಕುಳಿತು 6 ಭಾಷೆಗಳಲ್ಲಿ ಚಿತ್ರವನ್ನು ನೋಡಬಹುದು. ವಿಕ್ರಂ ರೋಣ ಚಿತ್ರವು ಬಿಡುಗಡೆಗೆ ಸಿದ್ದವಾಗಿದ್ದು ಬಿಡುಗಡೆಯ ದಿನಾಂಕ ಹತ್ತಿರ ಬರುತ್ತಿದ್ದಂತೆ ಚಿತ್ರತಂಡದಿಂದ ಹೊಸ ಹೊಸ ವಿಚಾರಗಳು ಹೊರ ಬರುತ್ತಿವೆ. ಇದರಿಂದ ನಿರೀಕ್ಷಿಸುತ್ತಿರುವ ಜನರಲ್ಲಿ ಹೊಸ ರೀತಿಯ ಕುತೂಹಲ ಹೆಚ್ಚುತ್ತಿದ್ದು ಚಿತ್ರವನ್ನು ನೋಡಲು ಕಾತುರದಿಂದ ಕಾಯುತ್ತಿರುವಾವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದೇ ತಿಂಗಳು 28 ರಂದು ಚಿತ್ರ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದ್ದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ.

ಭ್ರಷ್ಟರ ಬೇಟೆ

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

15 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

15 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

16 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

18 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

18 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

21 hours ago