Latest

ವಿಕ್ರಾಂತ್ ರೋಣ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡುವಾಗ ಮಧ್ಯದಲ್ಲಿ ಬೇಕಾದರೂ ಇಷ್ಟ ಬಂದ ಭಾಷೆಗೆ ಬದಲಾಯಿಸಿಕೊಂಡು ನೋಡಬಹುದು! ವಿಚಿತ್ರ ಎನಿಸಿದರೂ ಇದು ಸತ್ಯ!

ವಿಕ್ರಾಂತ್ ರೋಣ ಚಿತ್ರವನ್ನು ತಾವು ಯಾವುದೇ ಭಾಷೆಯಲ್ಲಿ ನೋಡಲು ಮುಂದಾದರು ಮದ್ಯದಲ್ಲಿ ತಮಗೆ ಇಷ್ಟಬಂದ ಭಾಷೆಗೆ ಬದಲಾಯಿಸಿಕೊಳ್ಳಬಹುದು ಹೌದು ವಿಕ್ರಾಂತ್ ರೋಣ ಚಿತ್ರವನ್ನು ಹೊಸ ತಂತ್ರಜ್ಞಾನದೊಂದಿಗೆ ಈ ರೀತಿಯ ಅವಕಾಶವನ್ನು ಸಿನಿಪ್ರಿಯರಿಗೆ ಮಾಡಿಕೊಟ್ಟಿದೆ. ವಿಕ್ರಾಂತ್ ರೋಣ ಚಿತ್ರವನ್ನು ಸಿನಿ ಡಬ್ ಮಾಡಲಾಗಿದೆ ಸಿನಿ ಡಬ್ ಎಂದರೆ ಚಿತ್ರಮಂದಿರದಲ್ಲಿ ತಾವು ವಿಕ್ರಾಂತ್ ರೋಣದ ಯಾವುದೇ ಭಾಷೆಯ ಆವೃತ್ತಿಯನ್ನು ನೋಡಲು ಹೋಗಿದ್ದರೂ ಸಹ ಮಧ್ಯದಲ್ಲಿ ತಾವು ಬೇರೆ ಭಾಷೆಯನ್ನು ನೋಡಲು ಇಚ್ಛಿಸಿದಾಗ ಮೊಬೈಲ್ ನಲ್ಲಿ ಅಪ್ಲಿಕೇಷನ್ ಬಳಸಿ ಹೆಡ್ ಫೋನ್ ಮೂಲಕ ತಮಗೆ ಬೇಕಾದ ಭಾಷೆಯಲ್ಲಿ ಸಿನಿಮಾದ ವಾಯ್ಸನ್ನು ಸೆಲೆಕ್ಟ್ ಮಾಡಿ ಕೇಳಬಹುದು. ಈ ಮೊಬೈಲ್ ಅಪ್ಲಿಕೇಶನ್ ಚಿತ್ರಮಂದಿರದ ಒಳಗೆ ಮಾತ್ರ ಕೆಲಸ ಮಾಡುತ್ತದೆ. ಅಂದರೆ ಚಿತ್ರಮಂದಿರದ ಒಳಗೆ ಇದ್ದಾಗ ಮಾತ್ರ ತಾವು ವೀಕ್ಷಿಸುತ್ತಿರುವ ಚಿತ್ರಮಂದಿರ ಹಾಗೂ ಸಮಯವನ್ನು ಹಾಕಿದಲ್ಲಿ ಮಾತ್ರ ಅದು ತಮಗೆ ಎಲ್ಲಾ ಭಾಷೆಗಳಲ್ಲಿ ಶಬ್ದಗಳನ್ನು ಕೇಳಲು ಅವಕಾಶ ನೀಡುತ್ತದೆ. ಈ ರೀತಿಯ ತಂತ್ರಜ್ಞಾನ ಬಳಸಿರುವುದು ಕನ್ನಡ ಚಿತ್ರರಂಗದಲ್ಲೇ ವಿಕ್ರಾಂತ್ ರೋಣ ಚಿತ್ರಕ್ಕೆ ಮೊದಲು. ಒಂದೇ ಚಿತ್ರಮಂದಿರದಲ್ಲಿ ಕುಳಿತು 6 ಭಾಷೆಗಳಲ್ಲಿ ಚಿತ್ರವನ್ನು ನೋಡಬಹುದು. ವಿಕ್ರಂ ರೋಣ ಚಿತ್ರವು ಬಿಡುಗಡೆಗೆ ಸಿದ್ದವಾಗಿದ್ದು ಬಿಡುಗಡೆಯ ದಿನಾಂಕ ಹತ್ತಿರ ಬರುತ್ತಿದ್ದಂತೆ ಚಿತ್ರತಂಡದಿಂದ ಹೊಸ ಹೊಸ ವಿಚಾರಗಳು ಹೊರ ಬರುತ್ತಿವೆ. ಇದರಿಂದ ನಿರೀಕ್ಷಿಸುತ್ತಿರುವ ಜನರಲ್ಲಿ ಹೊಸ ರೀತಿಯ ಕುತೂಹಲ ಹೆಚ್ಚುತ್ತಿದ್ದು ಚಿತ್ರವನ್ನು ನೋಡಲು ಕಾತುರದಿಂದ ಕಾಯುತ್ತಿರುವಾವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದೇ ತಿಂಗಳು 28 ರಂದು ಚಿತ್ರ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದ್ದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ.

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

5 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

5 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago