Latest

ವಿಕ್ರಾಂತ್ ರೋಣ ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡುವಾಗ ಮಧ್ಯದಲ್ಲಿ ಬೇಕಾದರೂ ಇಷ್ಟ ಬಂದ ಭಾಷೆಗೆ ಬದಲಾಯಿಸಿಕೊಂಡು ನೋಡಬಹುದು! ವಿಚಿತ್ರ ಎನಿಸಿದರೂ ಇದು ಸತ್ಯ!

ವಿಕ್ರಾಂತ್ ರೋಣ ಚಿತ್ರವನ್ನು ತಾವು ಯಾವುದೇ ಭಾಷೆಯಲ್ಲಿ ನೋಡಲು ಮುಂದಾದರು ಮದ್ಯದಲ್ಲಿ ತಮಗೆ ಇಷ್ಟಬಂದ ಭಾಷೆಗೆ ಬದಲಾಯಿಸಿಕೊಳ್ಳಬಹುದು ಹೌದು ವಿಕ್ರಾಂತ್ ರೋಣ ಚಿತ್ರವನ್ನು ಹೊಸ ತಂತ್ರಜ್ಞಾನದೊಂದಿಗೆ ಈ ರೀತಿಯ ಅವಕಾಶವನ್ನು ಸಿನಿಪ್ರಿಯರಿಗೆ ಮಾಡಿಕೊಟ್ಟಿದೆ. ವಿಕ್ರಾಂತ್ ರೋಣ ಚಿತ್ರವನ್ನು ಸಿನಿ ಡಬ್ ಮಾಡಲಾಗಿದೆ ಸಿನಿ ಡಬ್ ಎಂದರೆ ಚಿತ್ರಮಂದಿರದಲ್ಲಿ ತಾವು ವಿಕ್ರಾಂತ್ ರೋಣದ ಯಾವುದೇ ಭಾಷೆಯ ಆವೃತ್ತಿಯನ್ನು ನೋಡಲು ಹೋಗಿದ್ದರೂ ಸಹ ಮಧ್ಯದಲ್ಲಿ ತಾವು ಬೇರೆ ಭಾಷೆಯನ್ನು ನೋಡಲು ಇಚ್ಛಿಸಿದಾಗ ಮೊಬೈಲ್ ನಲ್ಲಿ ಅಪ್ಲಿಕೇಷನ್ ಬಳಸಿ ಹೆಡ್ ಫೋನ್ ಮೂಲಕ ತಮಗೆ ಬೇಕಾದ ಭಾಷೆಯಲ್ಲಿ ಸಿನಿಮಾದ ವಾಯ್ಸನ್ನು ಸೆಲೆಕ್ಟ್ ಮಾಡಿ ಕೇಳಬಹುದು. ಈ ಮೊಬೈಲ್ ಅಪ್ಲಿಕೇಶನ್ ಚಿತ್ರಮಂದಿರದ ಒಳಗೆ ಮಾತ್ರ ಕೆಲಸ ಮಾಡುತ್ತದೆ. ಅಂದರೆ ಚಿತ್ರಮಂದಿರದ ಒಳಗೆ ಇದ್ದಾಗ ಮಾತ್ರ ತಾವು ವೀಕ್ಷಿಸುತ್ತಿರುವ ಚಿತ್ರಮಂದಿರ ಹಾಗೂ ಸಮಯವನ್ನು ಹಾಕಿದಲ್ಲಿ ಮಾತ್ರ ಅದು ತಮಗೆ ಎಲ್ಲಾ ಭಾಷೆಗಳಲ್ಲಿ ಶಬ್ದಗಳನ್ನು ಕೇಳಲು ಅವಕಾಶ ನೀಡುತ್ತದೆ. ಈ ರೀತಿಯ ತಂತ್ರಜ್ಞಾನ ಬಳಸಿರುವುದು ಕನ್ನಡ ಚಿತ್ರರಂಗದಲ್ಲೇ ವಿಕ್ರಾಂತ್ ರೋಣ ಚಿತ್ರಕ್ಕೆ ಮೊದಲು. ಒಂದೇ ಚಿತ್ರಮಂದಿರದಲ್ಲಿ ಕುಳಿತು 6 ಭಾಷೆಗಳಲ್ಲಿ ಚಿತ್ರವನ್ನು ನೋಡಬಹುದು. ವಿಕ್ರಂ ರೋಣ ಚಿತ್ರವು ಬಿಡುಗಡೆಗೆ ಸಿದ್ದವಾಗಿದ್ದು ಬಿಡುಗಡೆಯ ದಿನಾಂಕ ಹತ್ತಿರ ಬರುತ್ತಿದ್ದಂತೆ ಚಿತ್ರತಂಡದಿಂದ ಹೊಸ ಹೊಸ ವಿಚಾರಗಳು ಹೊರ ಬರುತ್ತಿವೆ. ಇದರಿಂದ ನಿರೀಕ್ಷಿಸುತ್ತಿರುವ ಜನರಲ್ಲಿ ಹೊಸ ರೀತಿಯ ಕುತೂಹಲ ಹೆಚ್ಚುತ್ತಿದ್ದು ಚಿತ್ರವನ್ನು ನೋಡಲು ಕಾತುರದಿಂದ ಕಾಯುತ್ತಿರುವಾವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಇದೇ ತಿಂಗಳು 28 ರಂದು ಚಿತ್ರ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದ್ದು ದೊಡ್ಡ ಮಟ್ಟದಲ್ಲಿ ಸದ್ದು ಮಾಡುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ.

ಭ್ರಷ್ಟರ ಬೇಟೆ

Recent Posts

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

4 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

4 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

4 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

4 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

9 hours ago

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

9 hours ago