Categories: Latest

20 ದಿನಗಳಿಂದ ನೀರಿನ ಬವಣೆ: ಮುತ್ತಗಿ ಗ್ರಾಮಸ್ಥರ ಆಕ್ರೋಶ, ಹೋರಾಟದ ಎಚ್ಚರಿಕೆ

ಮುತ್ತಗಿ: ಬಸವನ ಬಾಗೇವಾಡಿ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಳೆದ ಸುಮಾರು 20 ದಿನಗಳಿಂದ ಗ್ರಾಮಸ್ಥರು ಕುಡಿಯಲು ಹಾಗೂ ದಿನನಿತ್ಯದ ಬಳಕೆಗೆ ಅಗತ್ಯವಾದ ನೀರಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ.

ಗ್ರಾಮದ ಎರಡನೇ ಮತ್ತು ನಾಲ್ಕನೇ ವಾರ್ಡ್‌ಗಳಲ್ಲಿ ನೀರಿನ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

“ನಾಳೆ ನೀರು ಬಿಡುತ್ತೇವೆ, ನಾಡಿದ್ದು ನೀರು ಪೂರೈಸುತ್ತೇವೆ” ಎಂಬ ಭರವಸೆಗಳನ್ನು ಅಧಿಕಾರಿಗಳು ನೀಡುತ್ತಿದ್ದರೂ, ಇದುವರೆಗೆ ಸಮರ್ಪಕವಾಗಿ ನೀರು ಸರಬರಾಜು ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಸ್ತಗಿರಾಸಾಬ್ ಬಿಳೇಕುದರಿ ಸೇರಿದಂತೆ ಪಂಚಾಯತ್ ಅಧಿಕಾರಿಗಳು ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಸಮಸ್ಯೆ ಇದೇ ರೀತಿ ಮುಂದುವರಿದರೆ ಗ್ರಾಮ ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದು ಗ್ರಾಮ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇನ್ನಾದರೂ ಗ್ರಾಮ ಪಂಚಾಯತ್ ಅಧಿಕಾರಿಗಳು ಎಚ್ಚೆತ್ತುಕೊಂಡು ಮುತ್ತಗಿ ಗ್ರಾಮದ ಜನತೆಗೆ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

11 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

11 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

11 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

11 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

12 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

12 hours ago