Categories: Latest

20 ದಿನಗಳಿಂದ ನೀರಿನ ಬವಣೆ: ಮುತ್ತಗಿ ಗ್ರಾಮಸ್ಥರ ಆಕ್ರೋಶ, ಹೋರಾಟದ ಎಚ್ಚರಿಕೆ

ಮುತ್ತಗಿ: ಬಸವನ ಬಾಗೇವಾಡಿ ತಾಲ್ಲೂಕಿನ ಮುತ್ತಗಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಳೆದ ಸುಮಾರು 20 ದಿನಗಳಿಂದ ಗ್ರಾಮಸ್ಥರು ಕುಡಿಯಲು ಹಾಗೂ ದಿನನಿತ್ಯದ ಬಳಕೆಗೆ ಅಗತ್ಯವಾದ ನೀರಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ.

ಗ್ರಾಮದ ಎರಡನೇ ಮತ್ತು ನಾಲ್ಕನೇ ವಾರ್ಡ್‌ಗಳಲ್ಲಿ ನೀರಿನ ಸರಬರಾಜು ಸಂಪೂರ್ಣವಾಗಿ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರು ಪರದಾಡುವಂತಾಗಿದೆ. ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರವಾಣಿ ಮೂಲಕ ಮಾಹಿತಿ ನೀಡಿದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

“ನಾಳೆ ನೀರು ಬಿಡುತ್ತೇವೆ, ನಾಡಿದ್ದು ನೀರು ಪೂರೈಸುತ್ತೇವೆ” ಎಂಬ ಭರವಸೆಗಳನ್ನು ಅಧಿಕಾರಿಗಳು ನೀಡುತ್ತಿದ್ದರೂ, ಇದುವರೆಗೆ ಸಮರ್ಪಕವಾಗಿ ನೀರು ಸರಬರಾಜು ಮಾಡುವಲ್ಲಿ ವಿಫಲರಾಗಿದ್ದಾರೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಸ್ತಗಿರಾಸಾಬ್ ಬಿಳೇಕುದರಿ ಸೇರಿದಂತೆ ಪಂಚಾಯತ್ ಅಧಿಕಾರಿಗಳು ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಸಮಸ್ಯೆ ಇದೇ ರೀತಿ ಮುಂದುವರಿದರೆ ಗ್ರಾಮ ಮಹಿಳೆಯರು ಖಾಲಿ ಕೊಡಗಳನ್ನು ಹಿಡಿದು ಗ್ರಾಮ ಪಂಚಾಯತ್ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇನ್ನಾದರೂ ಗ್ರಾಮ ಪಂಚಾಯತ್ ಅಧಿಕಾರಿಗಳು ಎಚ್ಚೆತ್ತುಕೊಂಡು ಮುತ್ತಗಿ ಗ್ರಾಮದ ಜನತೆಗೆ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ವರದಿ: ಸಂಗಪ್ಪ ಚಲವಾದಿ

ಭ್ರಷ್ಟರ ಬೇಟೆ

Recent Posts

10 ದಿನಗಳಿಂದ ನೀರಿಲ್ಲದೆ ಪರದಾಟ: ಮುಂಡಳ್ಳಿ ಗ್ರಾಮ ಪಂಚಾಯಿತಿ ಕಚೇರಿಗೆ ಗ್ರಾಮಸ್ಥರ ಮುತ್ತಿಗೆ

ಭಟ್ಕಳ: ಕುಡಿಯುವ ನೀರಿನ ತೀವ್ರ ಸಮಸ್ಯೆಯಿಂದ ಬೇಸತ್ತ ಭಟ್ಕಳ ತಾಲೂಕಿನ ಮುಂಡಳ್ಳಿ ಗ್ರಾಮದ ಕೋಟಿ ಖಜಾನೆ ಮನೆ ಪ್ರದೇಶದ ನಿವಾಸಿಗಳು…

2 minutes ago

2 ಕೋಟಿ ವಿಮೆಗಾಗಿ ಮಾಜಿ ಸೈನಿಕನ ಹತ್ಯೆ? ಪ್ರಿಯಕರನ ಸೆಲ್ಫಿ ವಿಡಿಯೋದಿಂದ ಬಯಲಾಯ್ತು ಭೀಕರ ರಹಸ್ಯ!

ಬೆಳಗಾವಿಯಲ್ಲಿ ಮಾಜಿ ಸೈನಿಕನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ತಿರುವು ಸಿಕ್ಕಿದ್ದು, ಮೃತನ ಪತ್ನಿಯ ಪ್ರಿಯಕರನೊಬ್ಬ ಬಿಡುಗಡೆ ಮಾಡಿದ…

5 hours ago

₹11.82 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಜಪ್ತಿ: ‘ಮಿಸೆಸ್ ಕೇರಳ 2025’ ವಿಜೇತೆ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ

ಮುಂಬೈ: ಹೈಡ್ರೋಪೋನಿಕ್ ಗಾಂಜಾವನ್ನು ಅಕ್ರಮವಾಗಿ ಭಾರತಕ್ಕೆ ಸಾಗಿಸುತ್ತಿದ್ದ ಆರೋಪದ ಮೇಲೆ 28 ವರ್ಷದ ಮಾಡೆಲ್ ಹಾಗೂ ‘ಮಿಸೆಸ್ ಕೇರಳ 2025’…

9 hours ago

ಪ್ರತಿ ಅಂತ್ಯಸಂಸ್ಕಾರದಲ್ಲೂ ತಪ್ಪದೆ ಹಾಜರಿ! ಡಂಬಳ ಗ್ರಾಮದ ಬಿಳಿ ನಾಯಿ ಮೂಡಿಸಿದ ವಿಸ್ಮಯ

ಡಂಬಳ: ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಗ್ರಾಮದಲ್ಲಿ ಅಪರೂಪದ ಹಾಗೂ ವಿಸ್ಮಯಕಾರಿ ಘಟನೆಯೊಂದು ಗ್ರಾಮಸ್ಥರ ಗಮನ ಸೆಳೆಯುತ್ತಿದೆ. ಗ್ರಾಮದ…

9 hours ago

ದಿನಕ್ಕೆ ₹2000 ಆದಾಯ ಕೇಳಿ ಶಾಕ್ ಆದ ಯುವತಿ; ಆಟೋ ಚಾಲಕನನ್ನೇ ಗಂಡನಾಗಿ ಆಯ್ಕೆ!

ಜೀವನದಲ್ಲಿ ನಮ್ಮ ಜೀವನ ಸಂಗಾತಿ ಯಾರು ಆಗುತ್ತಾರೆ ಎಂಬುದನ್ನು ಮುಂಚಿತವಾಗಿ ಊಹಿಸುವುದು ಅಸಾಧ್ಯ. ಕೆಲವೊಮ್ಮೆ ಒಂದು ಸಣ್ಣ ಘಟನೆ ಅಥವಾ…

10 hours ago

₹10 ಸಾವಿರ ಲಂಚಕ್ಕೆ ಬೇಡಿಕೆ: ಠಾಣೆಯಲ್ಲೇ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಎಎಸ್‌ಐ ಶಿವಕುಮಾರ್!

ಮಂಡ್ಯ ಜಿಲ್ಲೆಯ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಲಂಚ ಸ್ವೀಕರಿಸುತ್ತಿದ್ದ ವೇಳೆ ಸಹಾಯಕ ಪೊಲೀಸ್…

1 day ago