ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡಿದ್ದೇನೆ.
ಸಾರಿಗೆ ನೌಕರರ ಜೊತೆಗೆ ಒಂದು ಸುತ್ತಿನ ಮಾತುಕತೆ ಮಾಡಿದ್ದೇನೆ. ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುತ್ತೇವೆ. ಸಾರಿಗೆ ನೌಕರರ ವೇತನ ಹೆಚ್ಚಳದ ಬಗ್ಗೆ ಮಾತುಕತೆ ನಡೆಯುತ್ತಿದೆ. ಸಾರಿಗೆ ನೌಕರರು ಮುಷ್ಕರ ಮಾಡುವುದಿಲ್ಲ ಅನ್ನೋ ವಿಶ್ವಾಸವಿದೆ. ಸಿಎಂ ಜೊತೆಗೆ ಚರ್ಚೆ ಮಾಡಿ ಅಂತಿಮವಾಗಿ ತೀರ್ಮಾನ ಮಾಡುತ್ತೇವೆ. ಸಾರಿಗೆ ನೌಕರರ ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆ ಆಗಲ್ಲ ಎಂದು ತಿಳಿಸಿದ್ದಾರೆ.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾರ್ಚ್ 21 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರು ಮುಂದಾಗಿದ್ದಾರೆ. ಈ ಮುಷ್ಕರಕ್ಕೆ 4 ನಿಗಮಗಳ ನೌಕರರು ಬೆಂಬಲ ವ್ಯಕ್ತಪಡಿಸಿದ್ದು, ಅಂದಿನಿಂದ 23,000 ಕೆಎಸ್ಆರ್ಟಿಸಿ ಬಸ್ಗಳು ರಸ್ತೆಗೆ ಇಳಿಯುವುದಿಲ್ಲ ಎಂದು ಸಾರಿಗೆ ನೌಕರರ ಸಂಘ ಹೇಳಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…