Latest

ಹೋಗಿದ್ದು ಪೊಲೀಸರ ಜೊತೆ; ಸಿಕ್ಕಿದ್ದು ಫುಟ್ಪಾತ್ ನಲ್ಲಿ ಹೆಣವಾಗಿ!

ಮಕ್ಕಳ ಕಳ್ಳರ ಬಗ್ಗೆ ಸಾಕಷ್ಟು ಜಿಲ್ಲೆಗಳಲ್ಲಿ ವದಂತಿ ಎದ್ದಿದ್ದು ಬೆಂಗಳೂರಿನಲ್ಲೂ ಸಹ ಇದು ಹಬ್ಬಿದೆ. ಕಳೆದ ತಿಂಗಳು ರಾಮ್ ಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಹೊತ್ತು ಓಡಾಡುತ್ತಿದ್ದ ಕುಡುಕನೋರವನಿಗೆ ಸ್ಥಳೀಯರೆಲ್ಲ ಸೇರಿ ಮಕ್ಕಳ ಕಳ್ಳನೆಂದು ಹಿಗ್ಗ ಮುಗ್ಗ ತಳಿಸಿರುತ್ತಾರೆ. ನಂತರ ಆತನನ್ನು ಪೊಲೀಸರ ವಶಕ್ಕೆ ಒಪ್ಪಿಸಿರುತ್ತಾರೆ.

ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗಿದೆ ಇದರ ಮುಂದುವರಿದ ಭಾಗವೇನೆಂದರೆ ಪೊಲೀಸರ ವಶಕ್ಕೆ ಒಪ್ಪಿಸಿದ ಮುಂದಿನ ದಿನ ಆತ ಫುಟ್ಬಾತ್ ನಲ್ಲಿ ಹೆಣವಾಗಿ ಪತ್ತೆಯಾಗಿದ್ದಾನೆ. ಸ್ಥಳೀಯರು ಆತನಿಗೆ ಹಿಗ್ಗ ಮುಗ್ಗ ತಳಿಸಿದ ನಂತರ ರಾಮ್ ಮೂರ್ತಿ ನಗರ ಪೊಲೀಸರ ಹೊಯ್ಸಳ ವಾಹನದೊಳಕ್ಕೆ ಹತ್ತಿಸಿರುವ ವಿಡಿಯೋ ಸ್ಥಳೀಯರು ಚಿತ್ರಿಸಿಕೊಂಡಿರುತ್ತಾರೆ. ಅಂದರೆ ಇಲ್ಲಿ ಸ್ಪಷ್ಟವಾಗುವುದೇನೆಂದರೆ ಆತನನ್ನು ಪೊಲೀಸರು ಕರೆದುಕೊಂಡು ಹೋಗಿರುತ್ತಾರೆ. ಪೊಲೀಸರ ವಾಹನದೊಳಕ್ಕೆ ಅವನೇ ನಡೆದುಕೊಂಡು ಹೋಗಿ ಹತ್ತಿರುತ್ತಾನೆ.

ಆಚಾರ್ಯ ವಿಚಾರವೇನೆಂದರೆ ಅವರು ಕರೆದುಕೊಂಡು ಹೋದ ಮುಂದಿನ ದಿನ ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫುಟ್ ಬಾತ್ ಒಂದರ ಮೇಲೆ ಅನಾಮ ದೇಹ ವ್ಯಕ್ತಿಯ ಹೆಣ ಸಿಕ್ಕಿರುತ್ತದೆ ಎಂದು ಪ್ರಕಟಣೆ ನೀಡಿರುತ್ತಾರೆ. ಅ ಹೆಣವು ರಾಮಮೂರ್ತಿ ನಗರ ಪೊಲೀಸರು ಕರೆದುಕೊಂಡು ಹೋಗಿದ್ದಂತವನದ್ದೇ ಆಗಿರುತ್ತದೆ. ಪೊಲೀಸರು ಹೇಳುವ ಪ್ರಕಾರ ಅವನು ಮಕ್ಕಳ ಕಳ್ಳನಲ್ಲ ಕುಡಿದು ಓಡಾಡುತ್ತಿದ್ದ, ಸ್ಥಳೀಯರು ತಪ್ಪಾಗಿ ತಿಳಿದು ಹೊಡೆದಿದ್ದರೂ ಅದಕ್ಕಾಗಿ ಅವನನ್ನು ಬಿಟ್ಟು ಕಳುಹಿಸಿದ್ದೇವೆ ಎಂದು ಹೇಳಿರುತ್ತಾರೆ. ಯಾವುದಾದರೂ ಅನಾಮದೇಯ ಹೆಣ ಸಿಕ್ಕ ಬಳಿಕ ಪೊಲೀಸರು ಎಲ್ಲ ಪೊಲೀಸ್ ಠಾಣೆಗಳಿಗೂ ಮಾಹಿತಿ ನೀಡುತ್ತಾರೆ ಹಾಗೂ ಪ್ರಕಟಣೆಗಳನ್ನು ನೀಡುತ್ತಾರೆ.

ಹೀಗೆ ಮಾಹಿತಿ ನೀಡಿದ ನಂತರವೂ ಸಹ ಬೆಂಗಳೂರಿನಲ್ಲೇ ಇರುವಂತಹ ಮತ್ತೊಂದು ಠಾಣೆಯ ಪೊಲೀಸರಿಗೆ ತಲುಪಲಿಲ್ಲವ? ಅಥವಾ ಪೊಲೀಸರೇ ಈತನನ್ನು ಅನಾಮದೇಯ ವ್ಯಕ್ತಿಯ ಹೆಣವೆಂದು ಬಿಂಬಿಸಲು ಮುಂದಾದಾರ? ಈ ಎಲ್ಲಾ ಪ್ರಶ್ನೆಗಳು ಮೂಡಲು ಕಾರಣ ಒಂದಿದೆ ಅದೇನೆಂದರೆ ಇ ಘಟನೆ ನಡೆದು ಸುಮಾರು 14 ರಿಂದ 15 ದಿನಗಳು ಕಳೆದಿವೆ ಆದರೂ ಸಹ ಅಂದಿನ ದಿನ ಆತನನ್ನು ತಳಿಸಿದ ಸಾರ್ವಜನಿಕರನ್ನು ಸಹ ಪ್ರಶ್ನಿಸಿರುವುದಿಲ್ಲ ಹಾಗೂ ಕರೆದುಕೊಂಡ ಹೋದ ಪೊಲೀಸರ ವಿರುದ್ಧವು ಯಾವುದೇ ರೀತಿಯ ತನಿಖೆ ನಡೆದಿರುವುದಿಲ್ಲ. ಅಂದರೆ ಇಲ್ಲಿ ಪೊಲೀಸರು ಆತನದ್ದು ಅನಾಥ ಶವವೆಂದು ಬಿಂಬಿಸಲು ಮುಂದಾಗಿದ್ದಾರೆ ಎಂಬುದು ತಿಳಿಯುತ್ತದೆ.
ಕೆಲವು ದಿನಗಳ ಹಿಂದೆ ಸಾಮಾಜಿಕ ಹೋರಾಟಗಾರರು ಹಾಗೂ ಕೆಲವು ಸಂಘಟನೆಗಳು ಇದರ ವಿರುದ್ಧ ಧ್ವನಿ ಎತ್ತಿ ನ್ಯಾಯಕ್ಕಾಗಿ ಕೋರ್ಟಿನ ಮೊರೆ ಹೋದಂತಹ ಸಂದರ್ಭದಲ್ಲಿ ಪೊಲೀಸರು ಅಂದಿನ ದಿನ ಆತನಿಗೆ ತಳಿಸಿರುವಂತಹ ವ್ಯಕ್ತಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುತ್ತಾರೆ. ಇಷ್ಟು ದಿನ ಪೊಲೀಸರು ಸುಮ್ಮನಿದ್ದು ಈ ರೀತಿ ದಿಡೀರನೆ ಇಂತಹ ನಿರ್ಧಾರ ತೆಗೆದುಕೊಳ್ಳಲು ಕಾರಣವೇನು. ಆ ದಿನ ಪೊಲೀಸರು ಆತನನ್ನು ಕರೆದುಕೊಂಡ ಹೋದ ಮೇಲೆ ಮಾಡಿದ್ದಾದರೂ ಏನು? ನಿಜಕ್ಕೂ ಆ ದಿನ ಸಾಯುವ ಹಾಗೆ ಒದೆ ತಿಂದವನನ್ನು ಪೊಲೀಸರು ಬಿಟ್ಟು ಕಳುಹಿಸಿದ್ದರಾ? ಸಾಯುವ ಸ್ಥಿತಿಯಲ್ಲಿ ಇದ್ದವನನ್ನು ಪೊಲೀಸರು ಆಸ್ಪತ್ರೆಗೆ ಏಕೆ ಸೇರಿಸಿರುವುದಿಲ್ಲ? ಪೊಲೀಸರಿಗೆ ಮನುಷ್ಯತ್ವ ಇಲ್ಲವಾ? ಅಥವಾ ಹಿಂದೆ ನಡೆದಿರುವ ಕಥೆಯೇ ಬೇರೆನಾ?
ಈ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಕ್ಕರು ಸಿಗದಿದ್ದರೂ ಹೋದ ಅಮಾಯಕನ ಜೀವ ಹಿಂತಿರುಗಿ ಬರುವುದಿಲ್ಲ. ಸ್ಥಳೀಯ ಜನರ ಮುಂದೆ ತಮ್ಮ ಪೌರುಷವನ್ನು ತೋರಿಸಲು ಹೋಗಿ ಅಮಾಯಕನೋರವನಿಗೆ ತಳಿಸಿದ ಮೂವರು ಈಗ ಕೊಲೆಯ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದಾರೆ.
ನ್ಯಾಯಾಲಯದಲ್ಲಾದರೂ ಈ ಪ್ರಕರಣದ ಅಸಲಿ ಸತ್ಯ ಹೊರಬರುತ್ತದೆಯೋ ಅಥವಾ ಸಾಕಷ್ಟು ಪ್ರಕರಣಗಳಂತೆ ಇದು ಸಹ ಮೂಲೆಗುಂಪಾಗುತ್ತದೆಯೋ ಕಾದು ನೋಡಬೇಕು.

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

1 hour ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

1 hour ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

5 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

5 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

5 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

5 hours ago