ಉತ್ತರ ಪ್ರದೇಶ: ಕಾನೂನಾತ್ಮಕವಾಗಿ ವಿಚ್ಛೇದನ (ತಲಾಖ್) ನೀಡದೇ ರಹಸ್ಯವಾಗಿ ಎರಡನೇ ಮದುವೆಗೆ ಮುಂದಾಗಿದ್ದ ಪತಿಯ ಮದುವೆಯನ್ನು ಮೊದಲ ಪತ್ನಿಯೇ ಮಂಟಪಕ್ಕೆ ನುಗ್ಗಿ ತಡೆದ ಘಟನೆ ಉತ್ತರ ಪ್ರದೇಶದ ಕಾನ್ಪುರದ ಶ್ಯಾಮನಗರದಲ್ಲಿ ನಡೆದಿದೆ. ಈ ಘಟನೆಯಿಂದ ಮದುವೆ ಮಂಟಪದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿಯ ಪ್ರಕಾರ, ಆಶಿಫ್ ಎಂಬಾತ 2022ರಲ್ಲಿ ಪ್ರೇಮ ವಿವಾಹವಾಗಿದ್ದ. ಆದರೆ ವೈವಾಹಿಕ ಜೀವನದಲ್ಲಿ ಭಿನ್ನಾಭಿಪ್ರಾಯಗಳು ಉಂಟಾದ ಹಿನ್ನೆಲೆಯಲ್ಲಿ ದಂಪತಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಈ ನಡುವೆ ವಿಚ್ಛೇದನ ಸಂಬಂಧಿತ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಆಶಿಫ್ ಮತ್ತೊಂದು ಮದುವೆಗೆ ರಹಸ್ಯವಾಗಿ ಸಿದ್ಧತೆ ನಡೆಸಿದ್ದಾನೆ ಎನ್ನಲಾಗಿದೆ.

ಪತಿಯ ಎರಡನೇ ಮದುವೆಯ ವಿಷಯವನ್ನು ನೆರೆಹೊರೆಯವರಿಂದ ತಿಳಿದುಕೊಂಡ ಮೊದಲ ಪತ್ನಿ ಶುಕ್ರವಾರ ರಾತ್ರಿ ನೇರವಾಗಿ ಕಲ್ಯಾಣ ಮಂಟಪಕ್ಕೆ ತೆರಳಿ ಮದುವೆಯನ್ನು ತಡೆದಿದ್ದಾರೆ. ಈ ವೇಳೆ ಎರಡೂ ಕುಟುಂಬಗಳ ನಡುವೆ ವಾಗ್ವಾದ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಯಿತು.

ಘಟನೆಯ ಮಾಹಿತಿ ತಿಳಿದ ಚಕೇರಿ ಪೊಲೀಸ್ ಠಾಣೆಯ ಪೊಲೀಸರು ತಕ್ಷಣ ಸ್ಥಳಕ್ಕಾಗಮಿಸಿ ಆಶಿಫ್‌ನನ್ನು ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ. ಪ್ರಕರಣದ ಎಲ್ಲಾ ಆಯಾಮಗಳನ್ನು ಪರಿಶೀಲಿಸುತ್ತಿರುವ ಪೊಲೀಸರು, ಕಾನೂನು ಪ್ರಕ್ರಿಯೆಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Related News

error: Content is protected !!