ವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಗೊಳಸಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮದ ದರ್ಗಾದ ಎದುರುಗಡೆ ಇರುವ ನೀರಿನ ಟ್ಯಾಂಕ್ ಮತ್ತು ದೋಬಿ ಗಾಟ್ ಹತ್ತಿರ ಚರಂಡಿಯೆಲ್ಲಾ ತುಂಬಿ ಕೊಳಚೆಯಿಂದ ಹಾಗೂ ದುರ್ವಾಸನೆಯಿಂದ ಆವೃತವಾಗಿ ಸುತ್ತ ಮುತ್ತ ಇರುವ ಸಾರ್ವಜನಿಕರಿಗೆ ತೊಂದರೆಯಾಗುತಿದ್ದು, ದಿನಾಲೂ ಸಾರ್ವಜನಿಕರು ಓಡಾಡುವ ದಾರಿ ಸಹ ಇದಾಗಿದ್ದು. ಮೂಗು ಮುಚ್ಚಿಕೊಂಡು ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗೂ ಸರ್ಕಾರಿ ದವಾಖಾನೆಯ ಎದುರಗಡೆ ಗಾಣದ ಬಾರಿ ಓಣಿಯಲ್ಲಿಯು ಸಹ ಕಸದಿಂದ ಆವೃತವಾಗಿದೆ. ಈ ಅವ್ಯವಸ್ಥೆಯಿಂದ ಗ್ರಾಮದ ಜನರಿಗೆ ಹಲವು ರೋಗಗಳ ಭೀತಿ ಎದುರಿಸುವ ಪರಿಸ್ಥಿತಿ ಉಂಟಾಗಿದೆ.ಗ್ರಾಮ ಪಂಚಾಯತಿ ಮಟ್ಟದಲ್ಲಿ ಸ್ವಚ್ಚ ಗೊಳಿಸುವ ಸಲುವಾಗಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ. ಸ್ವಚ್ಛತೆ ಬಗ್ಗೆ ಸರ್ಕಾರವು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿರುತ್ತದೆ. ಗೊಳಸಂಗಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾದ ಎಸ್ ಎಂ ಬಿರಾದಾರ ರವರು ಗಮನಹರಿಸದೇ ಇರುವುದು ಈ ಅವ್ಯವಸ್ಥೆಗೆ ಕಾರಣವಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ದಿವ್ಯ ನಿರ್ಲಕ್ಷ ವಹಿಸುತ್ತಿದ್ದು ಗ್ರಾಮದ ಜನರು ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ. ವರದಿ ಕಂಡ ಮೇಲೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಬೇಟಿ ಕೊಟ್ಟು ಗ್ರಾಮಸ್ಥರ ಈ ತೊಂದರೆಯನ್ನು ಬಗೆ ಹರಿಸುವರೋ ಇಲ್ಲವೋ ಕಾದು ನೋಡೋಣ.
ವರದಿ:ಸಂಗಪ್ಪ ಚಲವಾದಿ
ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…