Latest

ಚಿಕ್ಕ ಕುರುವತ್ತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳೇ ಎಲ್ಲಿದ್ದೀರಿ? ಗ್ರಾಮದ ಸ್ವಚ್ಛತೆಯ ಬಗ್ಗೆ ನಿಮಗೆ ಕಾಳಜಿನೇ ಇಲ್ವಾ?

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಿಕ್ಕ ಕುರುವತ್ತಿ ಗ್ರಾಮ ಪಂಚಾಯಿತಿಗೆ ಸೇರಿರುವ ಚೌಡದಾನಪುರ ಗ್ರಾಮದ ಹೊನ್ನಮ್ಮ ದೇವಿ ಕಟ್ಟೆ ಸಮೀಪ ಚರಂಡಿಯ ನೀರು ರಸ್ತೆ ಮೇಲೆ ಹರಿದು ಗಬ್ಬೆದ್ದು ನಾರುತ್ತಿದೆ ಇದರಿಂದ ಸುತ್ತಮುತ್ತಲಿನ ಪರಿಸರವು ಸಹ ಹಾಳಾಗುತ್ತಿದ್ದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾತ್ರ ಮೌನಕ್ಕೆ ಶರಣಾಗಿದ್ದಾರೆ.
ಹೌದು, ಚೌಡದಾನಪುರ ಗ್ರಾಮವೆಂದರೆ ಅದೊಂದು ಐತಿಹಾಸಿಕ ಪ್ರಸಿದ್ಧ ಗ್ರಾಮ ಈಗ ಅದು ಕೆಲವೊಂದಿಷ್ಟು ಅವಿವೇಕಿಗಳಿಂದ ತನ್ನ ಸೌಂದರ್ಯವನ್ನೇ ಕಳೆದುಕೊಳ್ಳುತ್ತಿದೆ.
ಗ್ರಾಮ ಪಂಚಾಯಿತಿಯ ಅನುದಾನದಿಂದ ಚರಂಡಿ ನಿರ್ಮಿಸಲಾಗಿದ್ದರೂ ಸಹ ಆ ಚರಂಡಿಯಲ್ಲಿ ನೀರು ಹರಿದು ಹೋಗುತ್ತಿಲ್ಲ ಬದಲಾಗಿ ರಸ್ತೆಯ ಮೇಲೆ ನಿಂತು ಗಬ್ಬು ವಾಸನೆ ಬರುತ್ತಿದೆ.ಕ್ರಿಮಿಕೀಟಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗದ ಭೀತಿಯು ಸಹ ಕಾಡುತ್ತಿದೆ.
ಅಂದಹಾಗೆ ನೀರು ರಸ್ತೆ ಮೇಲೆ ನಿಲ್ಲೊದ್ಯಾಕೆ?ಅಲ್ಲೊಬ್ಬ ಅವಿವೇಕಿ ವ್ಯಕ್ತಿ ತನ್ನ ಹೊಲಕ್ಕೆ ಚರಂಡಿ ನೀರು ಹೋಗಲು ಚರಂಡಿಗೆ ಮಣ್ಣನ್ನು ಸುರಿದು ಹಾಕಿದ್ದಾನಂತೆ.ಅದೇನೇ ಇರಲಿ ಯಾರೇ ಆಗಿರಲಿ ಆತ ತನ್ನ ಗದ್ದೆಗೆ ಆ ನೀರನ್ನು ಹಾಯಿಸಲೇಬೇಕೆಂದರೆ ಬೇರೆ ವಿಧಾನವನ್ನು ಕಂಡುಕೊಳ್ಳಬೇಕು ಆದರೆ ಅದನ್ನು ಬಿಟ್ಟು ಪಂಚಾಯಿತಿ ಅನುದಾನದಲ್ಲಿ ನಿರ್ಮಿಸಲಾದ ಚರಂಡಿಗೆ ಮಣ್ಣು ಹಾಕಿ ಮುಚ್ಚಿ ಆ ನೀರನ್ನು ರಸ್ತೆಯಲ್ಲಿ ನಿಲ್ಲಿಸಿ, ರಸ್ತೆಯನ್ನು ಗಬ್ಬೆದ್ದು ನಾರುವಂತೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುವ ಅಗತ್ಯವೇನಿದೆ ಎಂದು ಸ್ಥಳೀಯ ನಿವಾಸಿಗಳ ಪ್ರಶ್ನೆಯಾಗಿದೆ.
ಏನೇ ಇರಲಿ ಇಷ್ಟೆಲ್ಲ ಅವಾಂತರಗಳು ನಡೆದರೂ ಕಂಡು ಕಾಣದಂತೆ ಸುಮ್ಮನಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇನ್ನಾದರೂ ಎಚ್ಚೆತ್ತುಕೊಂಡು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ಆ ವ್ಯಕ್ತಿಯ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ, ಚರಂಡಿಯನ್ನು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಿದೆ
ವರದಿ:ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

3 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

3 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

3 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

3 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

8 hours ago

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

8 hours ago