ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಿಕ್ಕ ಕುರುವತ್ತಿ ಗ್ರಾಮ ಪಂಚಾಯಿತಿಗೆ ಸೇರಿರುವ ಚೌಡದಾನಪುರ ಗ್ರಾಮದ ಹೊನ್ನಮ್ಮ ದೇವಿ ಕಟ್ಟೆ ಸಮೀಪ ಚರಂಡಿಯ ನೀರು ರಸ್ತೆ ಮೇಲೆ ಹರಿದು ಗಬ್ಬೆದ್ದು ನಾರುತ್ತಿದೆ ಇದರಿಂದ ಸುತ್ತಮುತ್ತಲಿನ ಪರಿಸರವು ಸಹ ಹಾಳಾಗುತ್ತಿದ್ದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮಾತ್ರ ಮೌನಕ್ಕೆ ಶರಣಾಗಿದ್ದಾರೆ.
ಹೌದು, ಚೌಡದಾನಪುರ ಗ್ರಾಮವೆಂದರೆ ಅದೊಂದು ಐತಿಹಾಸಿಕ ಪ್ರಸಿದ್ಧ ಗ್ರಾಮ ಈಗ ಅದು ಕೆಲವೊಂದಿಷ್ಟು ಅವಿವೇಕಿಗಳಿಂದ ತನ್ನ ಸೌಂದರ್ಯವನ್ನೇ ಕಳೆದುಕೊಳ್ಳುತ್ತಿದೆ.
ಗ್ರಾಮ ಪಂಚಾಯಿತಿಯ ಅನುದಾನದಿಂದ ಚರಂಡಿ ನಿರ್ಮಿಸಲಾಗಿದ್ದರೂ ಸಹ ಆ ಚರಂಡಿಯಲ್ಲಿ ನೀರು ಹರಿದು ಹೋಗುತ್ತಿಲ್ಲ ಬದಲಾಗಿ ರಸ್ತೆಯ ಮೇಲೆ ನಿಂತು ಗಬ್ಬು ವಾಸನೆ ಬರುತ್ತಿದೆ.ಕ್ರಿಮಿಕೀಟಗಳು ಉತ್ಪತ್ತಿಯಾಗಿ ಸಾಂಕ್ರಾಮಿಕ ರೋಗದ ಭೀತಿಯು ಸಹ ಕಾಡುತ್ತಿದೆ.
ಅಂದಹಾಗೆ ನೀರು ರಸ್ತೆ ಮೇಲೆ ನಿಲ್ಲೊದ್ಯಾಕೆ?ಅಲ್ಲೊಬ್ಬ ಅವಿವೇಕಿ ವ್ಯಕ್ತಿ ತನ್ನ ಹೊಲಕ್ಕೆ ಚರಂಡಿ ನೀರು ಹೋಗಲು ಚರಂಡಿಗೆ ಮಣ್ಣನ್ನು ಸುರಿದು ಹಾಕಿದ್ದಾನಂತೆ.ಅದೇನೇ ಇರಲಿ ಯಾರೇ ಆಗಿರಲಿ ಆತ ತನ್ನ ಗದ್ದೆಗೆ ಆ ನೀರನ್ನು ಹಾಯಿಸಲೇಬೇಕೆಂದರೆ ಬೇರೆ ವಿಧಾನವನ್ನು ಕಂಡುಕೊಳ್ಳಬೇಕು ಆದರೆ ಅದನ್ನು ಬಿಟ್ಟು ಪಂಚಾಯಿತಿ ಅನುದಾನದಲ್ಲಿ ನಿರ್ಮಿಸಲಾದ ಚರಂಡಿಗೆ ಮಣ್ಣು ಹಾಕಿ ಮುಚ್ಚಿ ಆ ನೀರನ್ನು ರಸ್ತೆಯಲ್ಲಿ ನಿಲ್ಲಿಸಿ, ರಸ್ತೆಯನ್ನು ಗಬ್ಬೆದ್ದು ನಾರುವಂತೆ ಮಾಡಿ ಸಾರ್ವಜನಿಕರಿಗೆ ತೊಂದರೆ ಕೊಡುವ ಅಗತ್ಯವೇನಿದೆ ಎಂದು ಸ್ಥಳೀಯ ನಿವಾಸಿಗಳ ಪ್ರಶ್ನೆಯಾಗಿದೆ.
ಏನೇ ಇರಲಿ ಇಷ್ಟೆಲ್ಲ ಅವಾಂತರಗಳು ನಡೆದರೂ ಕಂಡು ಕಾಣದಂತೆ ಸುಮ್ಮನಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇನ್ನಾದರೂ ಎಚ್ಚೆತ್ತುಕೊಂಡು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ಆ ವ್ಯಕ್ತಿಯ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ, ಚರಂಡಿಯನ್ನು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕಿದೆ
ವರದಿ:ಮಂಜುನಾಥ ಹರಿಜನ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…