ಬೆಂಗಳೂರು ನಗರದ ವೈಟ್ಫೀಲ್ಡ್ ಬಳಿ ನಗೋಂಡನಹಳ್ಳಿ ಪ್ರದೇಶದಲ್ಲಿ ಮನಕಲಕಿಸುವ ದುರಂತವೊಂದು ವರದಿಯಾಗಿದೆ. ತಾಯಿ ಮತ್ತು ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಆತ್ಮಹತ್ಯೆ ಮಾಡಿಕೊಂಡವರು ಆಂಧ್ರ ಪ್ರದೇಶ ಮೂಲದ ರಚಿತಾ ರೆಡ್ಡಿ (46) ಮತ್ತು ಅವರ ಮಗಳು ಶ್ರೀಜಾ ರೆಡ್ಡಿ (24) ಎಂದು ಗುರುತಿಸಲಾಗಿದೆ. ಇಬ್ಬರು ನಗೋಂಡನಹಳ್ಳಿಯ ಬಾಡಿಗೆ ಮನೆಗಳಲ್ಲಿ ವಾಸವಿದ್ದು, ಮಗಳು ಶ್ರೀಜಾ ಖಾಸಗಿ ಕಂಪನಿಯೊಂದರಲ್ಲಿ ಡೇಟಾ ಅನಾಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು.
ಪ್ರಾಥಮಿಕ ಮಾಹಿತಿ ಪ್ರಕಾರ, ಇಂದು ಬೆಳಿಗ್ಗೆ ಮೊದಲು ಶ್ರೀಜಾ ನೇಣುಬಿಗಿದು ಆತ್ಮಹತ್ಯೆಗೆ ಶರಣಾದರು. ಇದನ್ನು ಕಂಡ ತಾಯಿ ರಚಿತಾ ತೀವ್ರ ಆಘಾತಕ್ಕೆ ಒಳಗಾಗಿದ್ದು, ಈ ಸುದ್ದಿಯನ್ನು ತಮ್ಮ ಅಳಿಯನಿಗೆ ತಿಳಿಸಿದ ತಕ್ಷಣವೇ “ಬದುಕಲು ಇಚ್ಛೆ ಇಲ್ಲ” ಎಂದು ಹೇಳಿ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ವಿವರ ತಿಳಿಯುತ್ತಿದ್ದಂತೆಯೇ ವೈಟ್ಫೀಲ್ಡ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರೂ ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನಷ್ಟೇ ತಿಳಿಯಬೇಕಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಈ ದುರಂತದಿಂದ ಸ್ಥಳೀಯರಲ್ಲೂ ಬೇಸರ ಮತ್ತು ತೀವ್ರ ಬೇಧನೆ ಮೂಡಿದೆ. ತಾಯಿ–ಮಗಳ ನಡುವೆ ಏನಾದರೂ ಸಮಸ್ಯೆ ಇದೆಯೇ ಎಂಬುದರ ಬಗ್ಗೆ ಪ್ರಶ್ನೆಗಳು ಕೇಳಿ ಬರುತ್ತಿವೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…