Latest

ವೈಟ್‌ಫೀಲ್ಡ್‌ ದುರಂತ: ತಾಯಿ–ಮಗಳು ಆತ್ಮಹತ್ಯೆ, ಕುಟುಂಬದಲ್ಲಿ ಆಘಾತ

ಬೆಂಗಳೂರು ನಗರದ ವೈಟ್‌ಫೀಲ್ಡ್ ಬಳಿ ನಗೋಂಡನಹಳ್ಳಿ ಪ್ರದೇಶದಲ್ಲಿ ಮನಕಲಕಿಸುವ ದುರಂತವೊಂದು ವರದಿಯಾಗಿದೆ. ತಾಯಿ ಮತ್ತು ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.

ಆತ್ಮಹತ್ಯೆ ಮಾಡಿಕೊಂಡವರು ಆಂಧ್ರ ಪ್ರದೇಶ ಮೂಲದ ರಚಿತಾ ರೆಡ್ಡಿ (46) ಮತ್ತು ಅವರ ಮಗಳು ಶ್ರೀಜಾ ರೆಡ್ಡಿ (24) ಎಂದು ಗುರುತಿಸಲಾಗಿದೆ. ಇಬ್ಬರು ನಗೋಂಡನಹಳ್ಳಿಯ ಬಾಡಿಗೆ ಮನೆಗಳಲ್ಲಿ ವಾಸವಿದ್ದು, ಮಗಳು ಶ್ರೀಜಾ ಖಾಸಗಿ ಕಂಪನಿಯೊಂದರಲ್ಲಿ ಡೇಟಾ ಅನಾಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು.

ಪ್ರಾಥಮಿಕ ಮಾಹಿತಿ ಪ್ರಕಾರ, ಇಂದು ಬೆಳಿಗ್ಗೆ ಮೊದಲು ಶ್ರೀಜಾ ನೇಣುಬಿಗಿದು ಆತ್ಮಹತ್ಯೆಗೆ ಶರಣಾದರು. ಇದನ್ನು ಕಂಡ ತಾಯಿ ರಚಿತಾ ತೀವ್ರ ಆಘಾತಕ್ಕೆ ಒಳಗಾಗಿದ್ದು, ಈ ಸುದ್ದಿಯನ್ನು ತಮ್ಮ ಅಳಿಯನಿಗೆ ತಿಳಿಸಿದ ತಕ್ಷಣವೇ “ಬದುಕಲು ಇಚ್ಛೆ ಇಲ್ಲ” ಎಂದು ಹೇಳಿ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ವಿವರ ತಿಳಿಯುತ್ತಿದ್ದಂತೆಯೇ ವೈಟ್‌ಫೀಲ್ಡ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರೂ ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನಷ್ಟೇ ತಿಳಿಯಬೇಕಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ದುರಂತದಿಂದ ಸ್ಥಳೀಯರಲ್ಲೂ ಬೇಸರ ಮತ್ತು ತೀವ್ರ ಬೇಧನೆ ಮೂಡಿದೆ. ತಾಯಿ–ಮಗಳ ನಡುವೆ ಏನಾದರೂ ಸಮಸ್ಯೆ ಇದೆಯೇ ಎಂಬುದರ ಬಗ್ಗೆ ಪ್ರಶ್ನೆಗಳು ಕೇಳಿ ಬರುತ್ತಿವೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago