ಬೆಂಗಳೂರು ನಗರದ ವೈಟ್ಫೀಲ್ಡ್ ಬಳಿ ನಗೋಂಡನಹಳ್ಳಿ ಪ್ರದೇಶದಲ್ಲಿ ಮನಕಲಕಿಸುವ ದುರಂತವೊಂದು ವರದಿಯಾಗಿದೆ. ತಾಯಿ ಮತ್ತು ಮಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.
ಆತ್ಮಹತ್ಯೆ ಮಾಡಿಕೊಂಡವರು ಆಂಧ್ರ ಪ್ರದೇಶ ಮೂಲದ ರಚಿತಾ ರೆಡ್ಡಿ (46) ಮತ್ತು ಅವರ ಮಗಳು ಶ್ರೀಜಾ ರೆಡ್ಡಿ (24) ಎಂದು ಗುರುತಿಸಲಾಗಿದೆ. ಇಬ್ಬರು ನಗೋಂಡನಹಳ್ಳಿಯ ಬಾಡಿಗೆ ಮನೆಗಳಲ್ಲಿ ವಾಸವಿದ್ದು, ಮಗಳು ಶ್ರೀಜಾ ಖಾಸಗಿ ಕಂಪನಿಯೊಂದರಲ್ಲಿ ಡೇಟಾ ಅನಾಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು.
ಪ್ರಾಥಮಿಕ ಮಾಹಿತಿ ಪ್ರಕಾರ, ಇಂದು ಬೆಳಿಗ್ಗೆ ಮೊದಲು ಶ್ರೀಜಾ ನೇಣುಬಿಗಿದು ಆತ್ಮಹತ್ಯೆಗೆ ಶರಣಾದರು. ಇದನ್ನು ಕಂಡ ತಾಯಿ ರಚಿತಾ ತೀವ್ರ ಆಘಾತಕ್ಕೆ ಒಳಗಾಗಿದ್ದು, ಈ ಸುದ್ದಿಯನ್ನು ತಮ್ಮ ಅಳಿಯನಿಗೆ ತಿಳಿಸಿದ ತಕ್ಷಣವೇ “ಬದುಕಲು ಇಚ್ಛೆ ಇಲ್ಲ” ಎಂದು ಹೇಳಿ ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆ ವಿವರ ತಿಳಿಯುತ್ತಿದ್ದಂತೆಯೇ ವೈಟ್ಫೀಲ್ಡ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರೂ ಆತ್ಮಹತ್ಯೆಗೆ ಕಾರಣ ಏನೆಂಬುದು ಇನ್ನಷ್ಟೇ ತಿಳಿಯಬೇಕಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಈ ದುರಂತದಿಂದ ಸ್ಥಳೀಯರಲ್ಲೂ ಬೇಸರ ಮತ್ತು ತೀವ್ರ ಬೇಧನೆ ಮೂಡಿದೆ. ತಾಯಿ–ಮಗಳ ನಡುವೆ ಏನಾದರೂ ಸಮಸ್ಯೆ ಇದೆಯೇ ಎಂಬುದರ ಬಗ್ಗೆ ಪ್ರಶ್ನೆಗಳು ಕೇಳಿ ಬರುತ್ತಿವೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…