Categories: Latest

ವಿಧವೆಗೆ ಸುಳ್ಳು ಪ್ರೀತಿಯ ಜಾಲ: ಲಕ್ಷಾಂತರ ರೂ. ವಂಚನೆ – ಮೋಸಗಾರನ ವಿರುದ್ಧ ಪ್ರಕರಣ ದಾಖಲು

ಯಾದಗಿರಿ: ಯುವಕನೊಬ್ಬ ವಿಧವೆಯೊಂದನ್ನು ಮದುವೆಯಾಗುವುದಾಗಿ ನಂಬಿಸಿ, ಪ್ರೀತಿಯ ನಾಟಕವಾಡಿ, ದೈಹಿಕ ಸಂಬಂಧ ಬೆಳೆಸಿ, ಆಕೆಯಿಂದ ಲಕ್ಷಾಂತರ ರೂಪಾಯಿ ಹಣ ವಂಚಿಸಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಬಸವಂತಪುರ ಗ್ರಾಮದಲ್ಲಿ ನಡೆದಿದೆ.

ವಿಧವೆಯ ಸಂಕಷ್ಟಕ್ಕೆ ನಕಲಿ ಸಹಾನುಭೂತಿ

ಬಸವಂತಪುರ ಗ್ರಾಮದ ಮಹಿಳೆ ಹತ್ತು ವರ್ಷಗಳ ಹಿಂದೆ ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ತಾಲ್ಲೂಕಿನ ಅಮೀನಾಪುರ ಗ್ರಾಮದ ಬಸನಗೌಡ ಎಂಬುವರಿಗೆ ವಿವಾಹವಾದರು. ಮದುವೆಯೊಂದೇ ವರ್ಷದಲ್ಲಿ ದಂಪತಿಗೆ ಗಂಡು ಮಗು ಜನಿಸಿತು. ಸಂಸಾರ ಸುಖವಾಗಿ ಸಾಗುತ್ತಿರುವಾಗಲೇ ಗಂಡ ಪಾರ್ಶ್ವವಾಯುವಿನಿಂದ ಮೃತಪಟ್ಟಿದ್ದು, ಇದರಿಂದಾಗಿ ಆಕೆ ಆರ್ಥಿಕ ಮತ್ತು ಮಾನಸಿಕ ಸಂಕಷ್ಟಕ್ಕೆ ಒಳಗಾದರು.

ಗಂಡನ ಅಗಲಿಕೆಯಿಂದ ತವರು ಮನೆಗೆ ಮರಳಿದ ಮಹಿಳೆ, ತಮ್ಮ ಬದುಕಿನ ಸಮಸ್ಯೆಗಳಿಗೆ ಪರಿಹಾರಕ್ಕಾಗಿ ಅಬ್ಬೆತುಮಕೂರಿನ ಸ್ವಾಮೀಜಿಯವರನ್ನು ಭೇಟಿ ಮಾಡಿದರು. ಸ್ವಾಮೀಜಿ ಆಕೆಗೆ ಸಾಂತ್ವನ ಹೇಳಿ ದೇವರ ಆಶೀರ್ವಾದ ಕೋರಿದರು. ಈ ಸಂದರ್ಭ ಅಬ್ಬೆತುಮಕೂರಿನ ಮಠದಲ್ಲಿ ಮಾಳಪ್ಪ ಹತ್ತಿಕುಣಿ ಎಂಬಾತನ ಪರಿಚಯವಾಯಿತು.

ನಂಬಿಕೆ, ಪ್ರೇಮದ ನಾಟಕ ಮತ್ತು ಹಣ ವಂಚನೆ

ಮಾಳಪ್ಪ, ತನ್ನ ಸಿಹಿ ಮಾತುಗಳ ಮೂಲಕ ವಿಧವೆಯ ನಂಬಿಕೆ ಗೆಲ್ಲಲು ಪ್ರಾರಂಭಿಸಿದ. ‘‘ನೀನು ಏಕಾಕಿಯಾಗಿರುವೆ, ನಿನಗೆ ಗಂಡನ ಸ್ಥಾನ ನಾನು ಕೊಡುತ್ತೇನೆ. ನಾವಿಬ್ಬರೂ ಸಂತೋಷದಿಂದ ಸಂಸಾರ ಮಾಡೋಣ’’ ಎಂಬಂತೆ ಭರವಸೆ ನೀಡಿ ಪ್ರೀತಿಯ ನಾಟಕವಾಡಿದ. ಆತನ ಮಾತುಗಳಿಗೆ ಮರುಳಾದ ಮಹಿಳೆ, ತನ್ನ ತೆಲಂಗಾಣದಲ್ಲಿದ್ದ 4.5 ಎಕರೆ ಜಮೀನನ್ನು ಮಾರಾಟ ಮಾಡಿ, ಅಂದಾಜು 80 ಲಕ್ಷ ರೂ. ಹಣ ಪಡೆದರು.

ಆ ಹಣವನ್ನು ಮಾಳಪ್ಪ ಸ್ವತಃ ತೆಗೆದುಕೊಂಡು, ಜೊತೆಗೆ ಮಹಿಳೆಯ ಹಳೆಯ ಆಸ್ತಿ, ಬಂಗಾರಗಳನ್ನು ಸಹ ಮಾರಿಸಿ ಹಣವನ್ನೂ ಲೂಟಿ ಮಾಡಿದ್ದಾನೆ. ಈ ಎಲ್ಲ ವಂಚನೆಯ ನಂತರ ಮಾಳಪ್ಪ ಹೆಜ್ಜೆಹಾಕಿದ್ದು, ಮಹಿಳೆಯನ್ನು ನಿರಾಶೆಗೊಳಿಸಿದ.

ಪೋಲಿಸರಿಗೆ ದೂರು – ನ್ಯಾಯಕ್ಕಾಗಿ ಧರಣಿ

ನ್ಯಾಯಕ್ಕಾಗಿ ಮಹಿಳೆ ಶಹಾಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಲಾಗಿದೆ. ಆದರೆ ಇದುವರೆಗೆ ಆರೋಪಿಯ ಬಂಧನವಾಗಿಲ್ಲ. ನ್ಯಾಯ ಪಡೆಯದೇ ಹಿಂತಿರುಗುವುದಿಲ್ಲವೆಂದು ಮಹಿಳೆ ಯಾದಗಿರಿ ಎಸ್‌ಪಿ ಕಚೇರಿ ಎದುರು ಧರಣಿ ನಡೆಸಿದ್ದಾಳೆ. ‘‘ನ್ಯಾಯ ಸಿಗದಿದ್ದರೆ ಡಿಸೇಲ್ ಸುರಿದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ’’ ಎಂದು ಎಚ್ಚರಿಸಿದ್ದಾಳೆ.

ಈ ಪ್ರಕರಣ ಸಂಬಂಧ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಬೇಕಾಗಿದೆ. ವಂಚಿತ ಮಹಿಳೆಗೆ ನ್ಯಾಯ ದೊರೆಯಲು ಸ್ಥಳೀಯರು ಸಹ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

11 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

11 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

11 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

11 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago