Categories: CrimeLatest

ನಾಮಕರಣ ತಡವಾಗಿ ಬಂದ ಪತ್ನಿ: ಮಗುವನ್ನು ನೆಲಕ್ಕೆ ಎಸೆದ ತಂದೆ, ತಲೆಬುರುಡೆ ಪುಡಿ..!

ಬೆಂಗಳೂರು: ನಾಮಕರಣ ಕಾರ್ಯಕ್ರಮಕ್ಕೆ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ನಿಗದಿತ ಸಮಯಕ್ಕಿಂತ ತಡವಾಗಿ ಬಂದಿದ್ದನ್ನು ಕಾರಣವಾಗಿಸಿಕೊಂಡು ಆಕ್ರೋಶಗೊಂಡ ಪತಿಯೊಬ್ಬ, ತನ್ನ 11 ತಿಂಗಳ ಸ್ವಂತ ಮಗುವನ್ನೇ ಬಲವಂತವಾಗಿ ಕಸಿದು ನೆಲಕ್ಕೆ ಎಸೆದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಮಗುವಿನ ತಲೆಬುರುಡೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿಯ ಪ್ರಕಾರ, ನಗರದ ಕಲ್ಯಾಣ ಮಂಟಪವೊಂದರಲ್ಲಿ ಬೆಳಿಗ್ಗೆ ನಾಮಕರಣ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಪತ್ನಿ ಹಾಗೂ ಆಕೆಯ ತವರು ಮನೆಯವರು ಸುಮಾರು ಒಂದು ಗಂಟೆ ತಡವಾಗಿ ಆಗಮಿಸಿದ್ದರಿಂದ ಪತಿ ತೀವ್ರ ಆಕ್ರೋಶಗೊಂಡಿದ್ದ ಎನ್ನಲಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಅತಿಥಿಗಳ ಸಮ್ಮುಖದಲ್ಲೇ ಪತಿ ಪತ್ನಿಯೊಂದಿಗೆ ವಾಗ್ವಾದ ಆರಂಭಿಸಿ, ಎಲ್ಲರ ಮುಂದೆ ತನ್ನನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾನೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾದ ಪತ್ನಿಯ ತಂದೆಯ ಮೇಲೂ ಆತ ಹಲ್ಲೆಗೆ ಯತ್ನಿಸಿದ್ದಾನೆ.

ಈ ವೇಳೆ ಮಾವನ ಕಂಕುಳಲ್ಲಿದ್ದ 11 ತಿಂಗಳ ಮಗುವನ್ನು ಬಲವಂತವಾಗಿ ಕಸಿದುಕೊಂಡು ನೆಲಕ್ಕೆ ಎಸೆದಿದ್ದಾನೆ. ಪರಿಣಾಮ ಮಗು ತೀವ್ರವಾಗಿ ಬಿದ್ದು ತಲೆಗೆ ಗಂಭೀರ ಗಾಯಗಳಾಗಿವೆ. ಗಲಾಟೆ ತಡೆಯಲು ಮುಂದಾದ ಹೋಟೆಲ್ ಸಿಬ್ಬಂದಿಯ ಮೇಲೂ ಆರೋಪಿ ಹಲ್ಲೆ ನಡೆಸಿದ್ದು, ಓರ್ವ ಸಿಬ್ಬಂದಿಗೆ ಕಚ್ಚಿ ಗಾಯಗೊಳಿಸಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ಬಳಿಕ ಮಗುವಿನ ತಾಯಿ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪತಿ ಹಾಗೂ ಘಟನೆಯಲ್ಲಿ ಪ್ರಚೋದನೆ ನೀಡಿದ ಆರೋಪದಡಿ ಅತ್ತೆಯ ವಿರುದ್ಧ ಜುವೆನೈಲ್ ಜಸ್ಟಿಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಗುವಿನ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದು, ಚಿಕಿತ್ಸೆ ಮುಂದುವರಿದಿದೆ.

ಭ್ರಷ್ಟರ ಬೇಟೆ

Recent Posts

ದಳಪತಿ ಹತ್ಯೆ; 17 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕನ್ಯಾಕೊಳೂರು ಗ್ರಾಮದಲ್ಲಿ 2014ರಲ್ಲಿ ನಡೆದಿದ್ದ ದಲಿತ ಮುಖಂಡ ದೇವೇಂದ್ರಪ್ಪ ಭೀಮಪ್ಪ ದಳಪತಿ ಹತ್ಯೆ ಪ್ರಕರಣಕ್ಕೆ…

4 hours ago

₹15 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಗದಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ

ಗದಗ: ಹೊರಗುತ್ತಿಗೆ ಆಧಾರದ ಉದ್ಯೋಗ ನೀಡುವ ನೆಪದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.…

5 hours ago

ಪ್ರಿಯಕರನೊಂದಿಗೆ ಸೇರಿ ಮನೆಯಲ್ಲೇ ₹69 ಲಕ್ಷಕ್ಕೂ ಹೆಚ್ಚು ಕಳ್ಳತನ; ಸೊಸೆ ಸೇರಿ ಇಬ್ಬರನ್ನೂ ಒಂದೇ ದಿನದಲ್ಲಿ ಬಂಧಿಸಿದ ಹಾಸನ ಪೊಲೀಸರು

ಹಾಸನ: ಹಾಡುಹಗಲೇ ನಡೆದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣವನ್ನು ಹಾಸನ ಗ್ರಾಮಾಂತರ ಪೊಲೀಸರು ಕೇವಲ…

5 hours ago

ಟ್ರೋಲ್‌ಗಳಿಂದ ಬೇಸತ್ತ ಬಿಗ್ ಬಾಸ್ ಖ್ಯಾತಿಯ ಧ್ರುವಂತ್; ಪೊಲೀಸರ ಮೊರೆ ಹೋದ ನಟ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಿರಂತರವಾಗಿ ಬರುತ್ತಿರುವ ನೆಗೆಟಿವ್ ಕಾಮೆಂಟ್‌ಗಳು ಹಾಗೂ ಅವಹೇಳನಕಾರಿ ಟ್ರೋಲ್‌ಗಳಿಂದ ಬೇಸತ್ತಿರುವ ಬಿಗ್ ಬಾಸ್…

5 hours ago

ಡ್ರೈವರ್ ಸಹವಾಸ, ಗಂಡು ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಪೋಕ್ಸೋ ಪ್ರಕರಣ ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ…

5 hours ago

ಮೊದಲ ಪತ್ನಿ ಇರುವಾಗಲೇ ಎರಡನೇ ಮದುವೆಗೆ ಸಿದ್ಧನಾದ ಭೂಪ, ಮಂಟಪಕ್ಕೆ ನುಗ್ಗಿ ಮೊದಲ ಪತ್ನಿ ಮಾಡಿದ ಕೆಲಸಕ್ಕೆ ಆಗಿದೆ ಬೇರೆ..?

ಉತ್ತರ ಪ್ರದೇಶ: ಕಾನೂನಾತ್ಮಕವಾಗಿ ವಿಚ್ಛೇದನ (ತಲಾಖ್) ನೀಡದೇ ರಹಸ್ಯವಾಗಿ ಎರಡನೇ ಮದುವೆಗೆ ಮುಂದಾಗಿದ್ದ ಪತಿಯ ಮದುವೆಯನ್ನು ಮೊದಲ ಪತ್ನಿಯೇ ಮಂಟಪಕ್ಕೆ…

5 hours ago