ವಿಜಯಪುರದ ಆಲಕುಂಟೆ ನಗರದಲ್ಲಿ ಪತ್ನಿ, ಪತಿ ಮೇಲೆ ಕೊಲೆ ಮಾಡಲು ಯತ್ನಿಸಿದ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ತೇಜು ರಾಠೋಡ್ ಎಂಬ ಮಹಿಳೆ, ತನ್ನ ಪತಿ ಅಜೀತ್ ರಾಠೋಡ್ ಅವರನ್ನು ಕೊಲೆ ಮಾಡಲು ಯತ್ನಿಸಿದ್ದಾಳೆ.
ಘಟನೆಯ ವಿವರಗಳಲ್ಲಿ, ಅಜೀತ್ ಗಾಢ ನಿದ್ರೆಯಲ್ಲಿ ಇದ್ದ ಸಂದರ್ಭದಲ್ಲಿ ತೇಜು ಅವರು ಚಾಕುವಿನಿಂದ ಅವರ ಕತ್ತಿಗೆ ಇರಿದಿದ್ದಾರೆ. ತಕ್ಷಣವೇ ನೋವಿನಿಂದ ಕಿರುಚಿದ ಅಜೀತ್ ಶಬ್ದ ಕೇಳಿ, ಮನೆಯವರ ಗಮನ ಸೆಳೆದಿದ್ದು, ಅವರು ಕೂಡಲೇ ಅಜೀತ್ ರನ್ನು ನಗರ ಬಿಎಲ್ಡಿಇ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ಪ್ರಕಾರ ಅಜೀತ್ ರ ಆರೋಗ್ಯ ಪ್ರಸ್ತುತ ಸ್ಥಿರವಾಗಿದೆ.
ಘಟನೆಗೆ ಹಿನ್ನಲೆಯಲ್ಲಿ, ಪತಿ ಅಜೀತ್ ತೇಜುಗೆ ಆಕೆಯ ಮೊಬೈಲ್ ಬಳಕೆ ಕುರಿತಾಗಿ ಬುದ್ಧಿವಾದ ನೀಡಿದ್ದ ಹಿನ್ನೆಲೆಯಲ್ಲಿ ಕೋಪಗೊಂಡ ತೇಜು ಈ ದಾಳಿಗೆ ಮುಂದಾಗಿದ್ದಾಳೆ ಎನ್ನಲಾಗಿದೆ. ತೇಜು ತಮ್ಮ ಮೊಬೈಲಿನಲ್ಲಿ ಅನ್ಯ ವ್ಯಕ್ತಿಗಳೊಂದಿಗೆ ನಿರಂತರ ಚಾಟಿಂಗ್ ಮಾಡುತ್ತಿದ್ದರಂತೆ. ಇದಕ್ಕೆ ತಡೆಯೊಡ್ಡಿದ ಅಜೀತ್ ರ ಕ್ರಮಕ್ಕೆ ತೇಜು ಆಕ್ರೋಶಗೊಂಡು ಈ ವಿಚಿತ್ರ ಕೃತ್ಯಕ್ಕೆ ಕೈ ಹಾಕಿದ್ದಾಳೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…
ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…
ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…
ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ್ಯಾಪಿಡೋ ಚಾಲಕನಿಂದ ಮಹಿಳೆಯ…
ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…
ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…