ವಿಜಯಪುರದ ಆಲಕುಂಟೆ ನಗರದಲ್ಲಿ ಪತ್ನಿ, ಪತಿ ಮೇಲೆ ಕೊಲೆ ಮಾಡಲು ಯತ್ನಿಸಿದ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ತೇಜು ರಾಠೋಡ್ ಎಂಬ ಮಹಿಳೆ, ತನ್ನ ಪತಿ ಅಜೀತ್ ರಾಠೋಡ್ ಅವರನ್ನು ಕೊಲೆ ಮಾಡಲು ಯತ್ನಿಸಿದ್ದಾಳೆ.
ಘಟನೆಯ ವಿವರಗಳಲ್ಲಿ, ಅಜೀತ್ ಗಾಢ ನಿದ್ರೆಯಲ್ಲಿ ಇದ್ದ ಸಂದರ್ಭದಲ್ಲಿ ತೇಜು ಅವರು ಚಾಕುವಿನಿಂದ ಅವರ ಕತ್ತಿಗೆ ಇರಿದಿದ್ದಾರೆ. ತಕ್ಷಣವೇ ನೋವಿನಿಂದ ಕಿರುಚಿದ ಅಜೀತ್ ಶಬ್ದ ಕೇಳಿ, ಮನೆಯವರ ಗಮನ ಸೆಳೆದಿದ್ದು, ಅವರು ಕೂಡಲೇ ಅಜೀತ್ ರನ್ನು ನಗರ ಬಿಎಲ್ಡಿಇ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರ ಪ್ರಕಾರ ಅಜೀತ್ ರ ಆರೋಗ್ಯ ಪ್ರಸ್ತುತ ಸ್ಥಿರವಾಗಿದೆ.
ಘಟನೆಗೆ ಹಿನ್ನಲೆಯಲ್ಲಿ, ಪತಿ ಅಜೀತ್ ತೇಜುಗೆ ಆಕೆಯ ಮೊಬೈಲ್ ಬಳಕೆ ಕುರಿತಾಗಿ ಬುದ್ಧಿವಾದ ನೀಡಿದ್ದ ಹಿನ್ನೆಲೆಯಲ್ಲಿ ಕೋಪಗೊಂಡ ತೇಜು ಈ ದಾಳಿಗೆ ಮುಂದಾಗಿದ್ದಾಳೆ ಎನ್ನಲಾಗಿದೆ. ತೇಜು ತಮ್ಮ ಮೊಬೈಲಿನಲ್ಲಿ ಅನ್ಯ ವ್ಯಕ್ತಿಗಳೊಂದಿಗೆ ನಿರಂತರ ಚಾಟಿಂಗ್ ಮಾಡುತ್ತಿದ್ದರಂತೆ. ಇದಕ್ಕೆ ತಡೆಯೊಡ್ಡಿದ ಅಜೀತ್ ರ ಕ್ರಮಕ್ಕೆ ತೇಜು ಆಕ್ರೋಶಗೊಂಡು ಈ ವಿಚಿತ್ರ ಕೃತ್ಯಕ್ಕೆ ಕೈ ಹಾಕಿದ್ದಾಳೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…