ಬೆಂಗಳೂರಿನಲ್ಲಿ ಮತ್ತೊಂದು ವಿವಾದಾತ್ಮಕ ಪ್ರಕರಣ ಬೆಳಕಿಗೆ ಬಂದಿದೆ. ಎಫ್ಐಆರ್ ಪ್ರಕಾರ, ಹೆಂಡತಿಯ ಕಿರುಕುಳದಿಂದ ಬಳಲಿದ ಟೆಕ್ಕಿಯೊಬ್ಬರು ಪತ್ನಿ ಮತ್ತು ಆಕೆಯ ಮನೆಯವರ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಟೆಕ್ಕಿಯ ಗಂಭೀರ ಆರೋಪಗಳು
2022ರ ಆಗಸ್ಟ್ನಲ್ಲಿ ಮದುವೆಯಾಗಿದ್ದ ಈ ಟೆಕ್ಕಿ, ಎರಡು ವರ್ಷಗಳಾದರೂ ಸರಿಯಾದ ದಾಂಪತ್ಯ ಜೀವನ ನಡೆಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಪತ್ನಿ ನಿರಂತರವಾಗಿ ಹಣದ ಬೇಡಿಕೆ ಇಟ್ಟಿದ್ದು, ದಿನನಿತ್ಯವೂ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾಳೆ ಎನ್ನುವುದು ಅವರ ದೂರು.
“ಬಲವಂತವಾಗಿ ಮುಟ್ಟಿದರೆ ಡೆತ್ನೋಟ್ ಬರೆದಿಟ್ಟು ಸಾಯುತ್ತೇನೆ ಎಂದು ಪತ್ನಿ ಬ್ಲಾಕ್ ಮೇಲ್ ಮಾಡುತ್ತಾಳೆ. ಜೊತೆ ಮಲಗಲು 5000 ರೂ. ಕೊಡಬೇಕು ಎಂದು ಕೇಳುತ್ತಾಳೆ. ಫೈನಾನ್ಷಿಯಲ್ ಶೋಷಣೆಯ ಜೊತೆಗೆ ದೈಹಿಕ ಹಲ್ಲೆಗೂ ಒಳಗಾದಿದ್ದೇನೆ. ಪತ್ನಿ ನನ್ನ ಮರ್ಮಾಂಗಕ್ಕೆ ಹೊಡೆದು ಕೊಲ್ಲಲು ಪ್ರಯತ್ನಿಸಿದ ಘಟನೆ ಸಹ ನಡೆದಿದೆ,” ಎಂದು ಅವರು ಆರೋಪಿಸಿದ್ದಾರೆ.
ಹಣಕ್ಕಾಗಿ ಪತ್ನಿ ಮತ್ತು ಮನೆಯವರ ಹಿಂಸೆ?
ದೂರು ಪ್ರಕಾರ, ಪತ್ನಿಯ ಮನೆಯವರು ಮನೆ ಕೊಂಡುಕೊಳ್ಳಲು ಲಕ್ಷಾಂತರ ರೂಪಾಯಿ ಬೇಡಿಕೆಯಿಟ್ಟಿದ್ದರು. ಟೆಕ್ಕಿಯು ಹಣ ನೀಡಲು ನಿರಾಕರಿಸಿದ ನಂತರ, ಪತ್ನಿಯ ಕಿರುಕುಳ ಹೆಚ್ಚಾಗಿದೆ.
“ನೀನು ಬದಲಾಯಿಸದ ಹಾದರೇ ನನ್ನ ಬಳಿ ಬರಲ್ಲ. 60 ವರ್ಷ ಆದ್ಮೇಲೆ ಮಾತ್ರ ಮಕ್ಕಳ ಬಗ್ಗೆ ಚಿಂತಿಸೋಣ,” ಎಂದು ಪತ್ನಿ ಹೇಳಿದರೆಂದು ಅವರು ದೂರಿದ್ದಾರೆ.
ಉದ್ಯೋಗ ಕಳೆದುಕೊಂಡ ಟೆಕ್ಕಿ
ಈ ದುಃಖಾಂತ್ಯದ ಪರಿಣಾಮವಾಗಿ, ಟೆಕ್ಕಿಯು ಖಾಸಗಿ ಕಂಪನಿಯೊಂದರಲ್ಲಿ ತನ್ನ ಸಾಫ್ಟ್ವೇರ್ ಉದ್ಯೋಗ ಕಳೆದುಕೊಂಡಿದ್ದಾರೆ. “ವರ್ಕ್ ಫ್ರಮ್ ಹೋಮ್ ವೇಳೆ ಪತ್ನಿ ನಿರಂತರವಾಗಿ ಜಗಳ ಮಾಡಿ, ಡ್ಯಾನ್ಸ್ ಮಾಡುತ್ತಾ ತೊಂದರೆ ಕೊಡುತ್ತಿದ್ದಳು. ಅದರಿಂದ ನನ್ನ ಉದ್ಯೋಗವೇ ಕೈ ತಪ್ಪಿತು. ವಿಚ್ಛೇದನ ಕೇಳಿದರೆ 45 ಲಕ್ಷ ರೂ. ನೀಡಬೇಕೆಂದು ಪತ್ನಿ ಬೇಡಿಕೆ ಇಟ್ಟಿದ್ದಾರೆ,” ಎಂದು ಅವರು ದೂರಿದ್ದಾರೆ.
ಪತ್ನಿಯ ಪ್ರತಿಕ್ರಿಯೆ
ಈ ಸಂಬಂಧ ಪೊಲೀಸರು ಪತ್ನಿಯ ಹೇಳಿಕೆ ಪಡೆದುಕೊಂಡಿದ್ದು, “ನಾನು ಆತನ ಜೊತೆ ಬಾಳಲು ಇಚ್ಛಿಸುತ್ತಿಲ್ಲ. ನಮಗೆ ಒಪ್ಪಂದ ಆಗದು,” ಎಂದು ಪ್ರತಿಕ್ರಿಯಿಸಿದ್ದಾಳೆ.
ಈ ಪ್ರಕರಣವು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಟೆಕ್ಕಿಗಳ ಮೇಲೆ ವರದಕ್ಷಿಣೆ ಕೇಸ್ಗಳು ಮತ್ತು ಮಾನಸಿಕ ಹಿಂಸೆ ಆರೋಪಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಈ ಘಟನೆಗೆ ನ್ಯಾಯ ಸಿಗಬಹುದಾ ಎಂಬ ಪ್ರಶ್ನೆ ಮೂಡಿದೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…