Latest

ಜೊತೆಗೆ ಮಲಗಲು ಗಂಡನಿಗೆ 5 ಸಾವಿರ ರೇಟ್ ಫಿಕ್ಸ್ ಮಾಡಿದ ಪತ್ನಿ; ಟೆಕ್ಕಿಯ ಕಣ್ಣೀರಿನ ಕಥೆ

ಬೆಂಗಳೂರಿನಲ್ಲಿ ಮತ್ತೊಂದು ವಿವಾದಾತ್ಮಕ ಪ್ರಕರಣ ಬೆಳಕಿಗೆ ಬಂದಿದೆ. ಎಫ್‌ಐಆರ್ ಪ್ರಕಾರ, ಹೆಂಡತಿಯ ಕಿರುಕುಳದಿಂದ ಬಳಲಿದ ಟೆಕ್ಕಿಯೊಬ್ಬರು ಪತ್ನಿ ಮತ್ತು ಆಕೆಯ ಮನೆಯವರ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಟೆಕ್ಕಿಯ ಗಂಭೀರ ಆರೋಪಗಳು

2022ರ ಆಗಸ್ಟ್‌ನಲ್ಲಿ ಮದುವೆಯಾಗಿದ್ದ ಈ ಟೆಕ್ಕಿ, ಎರಡು ವರ್ಷಗಳಾದರೂ ಸರಿಯಾದ ದಾಂಪತ್ಯ ಜೀವನ ನಡೆಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಪತ್ನಿ ನಿರಂತರವಾಗಿ ಹಣದ ಬೇಡಿಕೆ ಇಟ್ಟಿದ್ದು, ದಿನನಿತ್ಯವೂ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾಳೆ ಎನ್ನುವುದು ಅವರ ದೂರು.

“ಬಲವಂತವಾಗಿ ಮುಟ್ಟಿದರೆ ಡೆತ್‌ನೋಟ್ ಬರೆದಿಟ್ಟು ಸಾಯುತ್ತೇನೆ ಎಂದು ಪತ್ನಿ ಬ್ಲಾಕ್ ಮೇಲ್ ಮಾಡುತ್ತಾಳೆ. ಜೊತೆ ಮಲಗಲು 5000 ರೂ. ಕೊಡಬೇಕು ಎಂದು ಕೇಳುತ್ತಾಳೆ. ಫೈನಾನ್ಷಿಯಲ್ ಶೋಷಣೆಯ ಜೊತೆಗೆ ದೈಹಿಕ ಹಲ್ಲೆಗೂ ಒಳಗಾದಿದ್ದೇನೆ. ಪತ್ನಿ ನನ್ನ ಮರ್ಮಾಂಗಕ್ಕೆ ಹೊಡೆದು ಕೊಲ್ಲಲು ಪ್ರಯತ್ನಿಸಿದ ಘಟನೆ ಸಹ ನಡೆದಿದೆ,” ಎಂದು ಅವರು ಆರೋಪಿಸಿದ್ದಾರೆ.

ಹಣಕ್ಕಾಗಿ ಪತ್ನಿ ಮತ್ತು ಮನೆಯವರ ಹಿಂಸೆ?

ದೂರು ಪ್ರಕಾರ, ಪತ್ನಿಯ ಮನೆಯವರು ಮನೆ ಕೊಂಡುಕೊಳ್ಳಲು ಲಕ್ಷಾಂತರ ರೂಪಾಯಿ ಬೇಡಿಕೆಯಿಟ್ಟಿದ್ದರು. ಟೆಕ್ಕಿಯು ಹಣ ನೀಡಲು ನಿರಾಕರಿಸಿದ ನಂತರ, ಪತ್ನಿಯ ಕಿರುಕುಳ ಹೆಚ್ಚಾಗಿದೆ.

“ನೀನು ಬದಲಾಯಿಸದ ಹಾದರೇ ನನ್ನ ಬಳಿ ಬರಲ್ಲ. 60 ವರ್ಷ ಆದ್ಮೇಲೆ ಮಾತ್ರ ಮಕ್ಕಳ ಬಗ್ಗೆ ಚಿಂತಿಸೋಣ,” ಎಂದು ಪತ್ನಿ ಹೇಳಿದರೆಂದು ಅವರು ದೂರಿದ್ದಾರೆ.

ಉದ್ಯೋಗ ಕಳೆದುಕೊಂಡ ಟೆಕ್ಕಿ

ಈ ದುಃಖಾಂತ್ಯದ ಪರಿಣಾಮವಾಗಿ, ಟೆಕ್ಕಿಯು ಖಾಸಗಿ ಕಂಪನಿಯೊಂದರಲ್ಲಿ ತನ್ನ ಸಾಫ್ಟ್‌ವೇರ್ ಉದ್ಯೋಗ ಕಳೆದುಕೊಂಡಿದ್ದಾರೆ. “ವರ್ಕ್ ಫ್ರಮ್ ಹೋಮ್ ವೇಳೆ ಪತ್ನಿ ನಿರಂತರವಾಗಿ ಜಗಳ ಮಾಡಿ, ಡ್ಯಾನ್ಸ್ ಮಾಡುತ್ತಾ ತೊಂದರೆ ಕೊಡುತ್ತಿದ್ದಳು. ಅದರಿಂದ ನನ್ನ ಉದ್ಯೋಗವೇ ಕೈ ತಪ್ಪಿತು. ವಿಚ್ಛೇದನ ಕೇಳಿದರೆ 45 ಲಕ್ಷ ರೂ. ನೀಡಬೇಕೆಂದು ಪತ್ನಿ ಬೇಡಿಕೆ ಇಟ್ಟಿದ್ದಾರೆ,” ಎಂದು ಅವರು ದೂರಿದ್ದಾರೆ.

ಪತ್ನಿಯ ಪ್ರತಿಕ್ರಿಯೆ

ಈ ಸಂಬಂಧ ಪೊಲೀಸರು ಪತ್ನಿಯ ಹೇಳಿಕೆ ಪಡೆದುಕೊಂಡಿದ್ದು, “ನಾನು ಆತನ ಜೊತೆ ಬಾಳಲು ಇಚ್ಛಿಸುತ್ತಿಲ್ಲ. ನಮಗೆ ಒಪ್ಪಂದ ಆಗದು,” ಎಂದು ಪ್ರತಿಕ್ರಿಯಿಸಿದ್ದಾಳೆ.

ಈ ಪ್ರಕರಣವು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಟೆಕ್ಕಿಗಳ ಮೇಲೆ ವರದಕ್ಷಿಣೆ ಕೇಸ್‌ಗಳು ಮತ್ತು ಮಾನಸಿಕ ಹಿಂಸೆ ಆರೋಪಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಈ ಘಟನೆಗೆ ನ್ಯಾಯ ಸಿಗಬಹುದಾ ಎಂಬ ಪ್ರಶ್ನೆ ಮೂಡಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago