Latest

ಜೊತೆಗೆ ಮಲಗಲು ಗಂಡನಿಗೆ 5 ಸಾವಿರ ರೇಟ್ ಫಿಕ್ಸ್ ಮಾಡಿದ ಪತ್ನಿ; ಟೆಕ್ಕಿಯ ಕಣ್ಣೀರಿನ ಕಥೆ

ಬೆಂಗಳೂರಿನಲ್ಲಿ ಮತ್ತೊಂದು ವಿವಾದಾತ್ಮಕ ಪ್ರಕರಣ ಬೆಳಕಿಗೆ ಬಂದಿದೆ. ಎಫ್‌ಐಆರ್ ಪ್ರಕಾರ, ಹೆಂಡತಿಯ ಕಿರುಕುಳದಿಂದ ಬಳಲಿದ ಟೆಕ್ಕಿಯೊಬ್ಬರು ಪತ್ನಿ ಮತ್ತು ಆಕೆಯ ಮನೆಯವರ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಟೆಕ್ಕಿಯ ಗಂಭೀರ ಆರೋಪಗಳು

2022ರ ಆಗಸ್ಟ್‌ನಲ್ಲಿ ಮದುವೆಯಾಗಿದ್ದ ಈ ಟೆಕ್ಕಿ, ಎರಡು ವರ್ಷಗಳಾದರೂ ಸರಿಯಾದ ದಾಂಪತ್ಯ ಜೀವನ ನಡೆಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಪತ್ನಿ ನಿರಂತರವಾಗಿ ಹಣದ ಬೇಡಿಕೆ ಇಟ್ಟಿದ್ದು, ದಿನನಿತ್ಯವೂ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾಳೆ ಎನ್ನುವುದು ಅವರ ದೂರು.

“ಬಲವಂತವಾಗಿ ಮುಟ್ಟಿದರೆ ಡೆತ್‌ನೋಟ್ ಬರೆದಿಟ್ಟು ಸಾಯುತ್ತೇನೆ ಎಂದು ಪತ್ನಿ ಬ್ಲಾಕ್ ಮೇಲ್ ಮಾಡುತ್ತಾಳೆ. ಜೊತೆ ಮಲಗಲು 5000 ರೂ. ಕೊಡಬೇಕು ಎಂದು ಕೇಳುತ್ತಾಳೆ. ಫೈನಾನ್ಷಿಯಲ್ ಶೋಷಣೆಯ ಜೊತೆಗೆ ದೈಹಿಕ ಹಲ್ಲೆಗೂ ಒಳಗಾದಿದ್ದೇನೆ. ಪತ್ನಿ ನನ್ನ ಮರ್ಮಾಂಗಕ್ಕೆ ಹೊಡೆದು ಕೊಲ್ಲಲು ಪ್ರಯತ್ನಿಸಿದ ಘಟನೆ ಸಹ ನಡೆದಿದೆ,” ಎಂದು ಅವರು ಆರೋಪಿಸಿದ್ದಾರೆ.

ಹಣಕ್ಕಾಗಿ ಪತ್ನಿ ಮತ್ತು ಮನೆಯವರ ಹಿಂಸೆ?

ದೂರು ಪ್ರಕಾರ, ಪತ್ನಿಯ ಮನೆಯವರು ಮನೆ ಕೊಂಡುಕೊಳ್ಳಲು ಲಕ್ಷಾಂತರ ರೂಪಾಯಿ ಬೇಡಿಕೆಯಿಟ್ಟಿದ್ದರು. ಟೆಕ್ಕಿಯು ಹಣ ನೀಡಲು ನಿರಾಕರಿಸಿದ ನಂತರ, ಪತ್ನಿಯ ಕಿರುಕುಳ ಹೆಚ್ಚಾಗಿದೆ.

“ನೀನು ಬದಲಾಯಿಸದ ಹಾದರೇ ನನ್ನ ಬಳಿ ಬರಲ್ಲ. 60 ವರ್ಷ ಆದ್ಮೇಲೆ ಮಾತ್ರ ಮಕ್ಕಳ ಬಗ್ಗೆ ಚಿಂತಿಸೋಣ,” ಎಂದು ಪತ್ನಿ ಹೇಳಿದರೆಂದು ಅವರು ದೂರಿದ್ದಾರೆ.

ಉದ್ಯೋಗ ಕಳೆದುಕೊಂಡ ಟೆಕ್ಕಿ

ಈ ದುಃಖಾಂತ್ಯದ ಪರಿಣಾಮವಾಗಿ, ಟೆಕ್ಕಿಯು ಖಾಸಗಿ ಕಂಪನಿಯೊಂದರಲ್ಲಿ ತನ್ನ ಸಾಫ್ಟ್‌ವೇರ್ ಉದ್ಯೋಗ ಕಳೆದುಕೊಂಡಿದ್ದಾರೆ. “ವರ್ಕ್ ಫ್ರಮ್ ಹೋಮ್ ವೇಳೆ ಪತ್ನಿ ನಿರಂತರವಾಗಿ ಜಗಳ ಮಾಡಿ, ಡ್ಯಾನ್ಸ್ ಮಾಡುತ್ತಾ ತೊಂದರೆ ಕೊಡುತ್ತಿದ್ದಳು. ಅದರಿಂದ ನನ್ನ ಉದ್ಯೋಗವೇ ಕೈ ತಪ್ಪಿತು. ವಿಚ್ಛೇದನ ಕೇಳಿದರೆ 45 ಲಕ್ಷ ರೂ. ನೀಡಬೇಕೆಂದು ಪತ್ನಿ ಬೇಡಿಕೆ ಇಟ್ಟಿದ್ದಾರೆ,” ಎಂದು ಅವರು ದೂರಿದ್ದಾರೆ.

ಪತ್ನಿಯ ಪ್ರತಿಕ್ರಿಯೆ

ಈ ಸಂಬಂಧ ಪೊಲೀಸರು ಪತ್ನಿಯ ಹೇಳಿಕೆ ಪಡೆದುಕೊಂಡಿದ್ದು, “ನಾನು ಆತನ ಜೊತೆ ಬಾಳಲು ಇಚ್ಛಿಸುತ್ತಿಲ್ಲ. ನಮಗೆ ಒಪ್ಪಂದ ಆಗದು,” ಎಂದು ಪ್ರತಿಕ್ರಿಯಿಸಿದ್ದಾಳೆ.

ಈ ಪ್ರಕರಣವು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಟೆಕ್ಕಿಗಳ ಮೇಲೆ ವರದಕ್ಷಿಣೆ ಕೇಸ್‌ಗಳು ಮತ್ತು ಮಾನಸಿಕ ಹಿಂಸೆ ಆರೋಪಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಈ ಘಟನೆಗೆ ನ್ಯಾಯ ಸಿಗಬಹುದಾ ಎಂಬ ಪ್ರಶ್ನೆ ಮೂಡಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

9 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago