Latest

ಜೊತೆಗೆ ಮಲಗಲು ಗಂಡನಿಗೆ 5 ಸಾವಿರ ರೇಟ್ ಫಿಕ್ಸ್ ಮಾಡಿದ ಪತ್ನಿ; ಟೆಕ್ಕಿಯ ಕಣ್ಣೀರಿನ ಕಥೆ

ಬೆಂಗಳೂರಿನಲ್ಲಿ ಮತ್ತೊಂದು ವಿವಾದಾತ್ಮಕ ಪ್ರಕರಣ ಬೆಳಕಿಗೆ ಬಂದಿದೆ. ಎಫ್‌ಐಆರ್ ಪ್ರಕಾರ, ಹೆಂಡತಿಯ ಕಿರುಕುಳದಿಂದ ಬಳಲಿದ ಟೆಕ್ಕಿಯೊಬ್ಬರು ಪತ್ನಿ ಮತ್ತು ಆಕೆಯ ಮನೆಯವರ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಟೆಕ್ಕಿಯ ಗಂಭೀರ ಆರೋಪಗಳು

2022ರ ಆಗಸ್ಟ್‌ನಲ್ಲಿ ಮದುವೆಯಾಗಿದ್ದ ಈ ಟೆಕ್ಕಿ, ಎರಡು ವರ್ಷಗಳಾದರೂ ಸರಿಯಾದ ದಾಂಪತ್ಯ ಜೀವನ ನಡೆಸಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ. ಪತ್ನಿ ನಿರಂತರವಾಗಿ ಹಣದ ಬೇಡಿಕೆ ಇಟ್ಟಿದ್ದು, ದಿನನಿತ್ಯವೂ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡುತ್ತಿದ್ದಾಳೆ ಎನ್ನುವುದು ಅವರ ದೂರು.

“ಬಲವಂತವಾಗಿ ಮುಟ್ಟಿದರೆ ಡೆತ್‌ನೋಟ್ ಬರೆದಿಟ್ಟು ಸಾಯುತ್ತೇನೆ ಎಂದು ಪತ್ನಿ ಬ್ಲಾಕ್ ಮೇಲ್ ಮಾಡುತ್ತಾಳೆ. ಜೊತೆ ಮಲಗಲು 5000 ರೂ. ಕೊಡಬೇಕು ಎಂದು ಕೇಳುತ್ತಾಳೆ. ಫೈನಾನ್ಷಿಯಲ್ ಶೋಷಣೆಯ ಜೊತೆಗೆ ದೈಹಿಕ ಹಲ್ಲೆಗೂ ಒಳಗಾದಿದ್ದೇನೆ. ಪತ್ನಿ ನನ್ನ ಮರ್ಮಾಂಗಕ್ಕೆ ಹೊಡೆದು ಕೊಲ್ಲಲು ಪ್ರಯತ್ನಿಸಿದ ಘಟನೆ ಸಹ ನಡೆದಿದೆ,” ಎಂದು ಅವರು ಆರೋಪಿಸಿದ್ದಾರೆ.

ಹಣಕ್ಕಾಗಿ ಪತ್ನಿ ಮತ್ತು ಮನೆಯವರ ಹಿಂಸೆ?

ದೂರು ಪ್ರಕಾರ, ಪತ್ನಿಯ ಮನೆಯವರು ಮನೆ ಕೊಂಡುಕೊಳ್ಳಲು ಲಕ್ಷಾಂತರ ರೂಪಾಯಿ ಬೇಡಿಕೆಯಿಟ್ಟಿದ್ದರು. ಟೆಕ್ಕಿಯು ಹಣ ನೀಡಲು ನಿರಾಕರಿಸಿದ ನಂತರ, ಪತ್ನಿಯ ಕಿರುಕುಳ ಹೆಚ್ಚಾಗಿದೆ.

“ನೀನು ಬದಲಾಯಿಸದ ಹಾದರೇ ನನ್ನ ಬಳಿ ಬರಲ್ಲ. 60 ವರ್ಷ ಆದ್ಮೇಲೆ ಮಾತ್ರ ಮಕ್ಕಳ ಬಗ್ಗೆ ಚಿಂತಿಸೋಣ,” ಎಂದು ಪತ್ನಿ ಹೇಳಿದರೆಂದು ಅವರು ದೂರಿದ್ದಾರೆ.

ಉದ್ಯೋಗ ಕಳೆದುಕೊಂಡ ಟೆಕ್ಕಿ

ಈ ದುಃಖಾಂತ್ಯದ ಪರಿಣಾಮವಾಗಿ, ಟೆಕ್ಕಿಯು ಖಾಸಗಿ ಕಂಪನಿಯೊಂದರಲ್ಲಿ ತನ್ನ ಸಾಫ್ಟ್‌ವೇರ್ ಉದ್ಯೋಗ ಕಳೆದುಕೊಂಡಿದ್ದಾರೆ. “ವರ್ಕ್ ಫ್ರಮ್ ಹೋಮ್ ವೇಳೆ ಪತ್ನಿ ನಿರಂತರವಾಗಿ ಜಗಳ ಮಾಡಿ, ಡ್ಯಾನ್ಸ್ ಮಾಡುತ್ತಾ ತೊಂದರೆ ಕೊಡುತ್ತಿದ್ದಳು. ಅದರಿಂದ ನನ್ನ ಉದ್ಯೋಗವೇ ಕೈ ತಪ್ಪಿತು. ವಿಚ್ಛೇದನ ಕೇಳಿದರೆ 45 ಲಕ್ಷ ರೂ. ನೀಡಬೇಕೆಂದು ಪತ್ನಿ ಬೇಡಿಕೆ ಇಟ್ಟಿದ್ದಾರೆ,” ಎಂದು ಅವರು ದೂರಿದ್ದಾರೆ.

ಪತ್ನಿಯ ಪ್ರತಿಕ್ರಿಯೆ

ಈ ಸಂಬಂಧ ಪೊಲೀಸರು ಪತ್ನಿಯ ಹೇಳಿಕೆ ಪಡೆದುಕೊಂಡಿದ್ದು, “ನಾನು ಆತನ ಜೊತೆ ಬಾಳಲು ಇಚ್ಛಿಸುತ್ತಿಲ್ಲ. ನಮಗೆ ಒಪ್ಪಂದ ಆಗದು,” ಎಂದು ಪ್ರತಿಕ್ರಿಯಿಸಿದ್ದಾಳೆ.

ಈ ಪ್ರಕರಣವು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಟೆಕ್ಕಿಗಳ ಮೇಲೆ ವರದಕ್ಷಿಣೆ ಕೇಸ್‌ಗಳು ಮತ್ತು ಮಾನಸಿಕ ಹಿಂಸೆ ಆರೋಪಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಈ ಘಟನೆಗೆ ನ್ಯಾಯ ಸಿಗಬಹುದಾ ಎಂಬ ಪ್ರಶ್ನೆ ಮೂಡಿದೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

3 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

10 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

10 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago