ಶಿವಮೊಗ್ಗ: ವರದಕ್ಷಿಣೆಗಾಗಿ ಪತ್ನಿಯನ್ನು ಹತ್ಯೆ ಮಾಡಿದ್ದ ಗಂಭೀರ ಪ್ರಕರಣದಲ್ಲಿ, ಶಿವಮೊಗ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಗೆ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ₹1.85 ಲಕ್ಷ ದಂಡ ಕೂಡಾ ವಿಧಿಸಿದೆ.
ತುಮ್ಮಳ್ಳಿಯ ನಿವಾಸಿ ಕರುಣಾಕರ್ (36) ಎಂಬವರು 2022ರ ಸೆಪ್ಟೆಂಬರ್ 20ರಂದು ತನ್ನ ಪತ್ನಿ ಅಮಿತಾ (27) ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಪತ್ನಿ ಅಮಿತಾ ಅವರಿಗೆ ಆರ್ಥಿಕವಾಗಿ ಹಾಗೂ ಮಾನಸಿಕವಾಗಿ ನಿತ್ಯ ಕಿರುಕುಳ ನೀಡುತ್ತಿದ್ದ ಎನ್ನಲಾಗಿದ್ದು, ಕೊನೆಗೆ ಕೊಲೆ ಮಾಡಿ ಓಡಿಹೋಗಿದ್ದ.
ಈ ಕುರಿತು ಅಮಿತಾ ಅವರ ತಾಯಿ ತುಂಗಾ ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಮೇಲೆ ಪ್ರಕರಣ ದಾಖಲಾಗಿತ್ತು. ನಂತರ ತನಿಖೆಗೆ ಕಸರುಮಾಡಿದ್ದ ಅಂದಿನ ಇನ್ಸ್ಪೆಕ್ಟರ್ ಬಿ. ಮಂಜುನಾಥ್ ಹಾಗೂ ಡಿವೈಎಸ್ಪಿ ಬಾಲರಾಜ್ ಅವರು ಆರೋಪಿಗೆ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಆರ್. ಪಲ್ಲವಿ, ಪ್ರಕರಣದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಕರುಣಾಕರ್ ವಿರುದ್ಧ ಜೀವಾವಧಿ ಶಿಕ್ಷೆ ಹಾಗೂ ₹1.85 ಲಕ್ಷ ದಂಡ ವಿಧಿಸಿದರು. ಈ ಪ್ರಕರಣದಲ್ಲಿ ಸರ್ಕಾರಿ ವಕೀಲರಾಗಿ ಪಿ.ಒ. ಪುಷ್ಪಾ ವಾದ ಮಂಡಿಸಿದ್ದರು.
ನ್ಯಾಯಾಲಯದ ತೀರ್ಪು ವರದಕ್ಷಿಣೆಗಾಗಿ ನಡೆಯುವ ಕ್ರೂರತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದ್ದು, ಈ ತೀರ್ಪು ಇತರರಿಗೆ ಎಚ್ಚರವಾಗಲಿ ಎಂಬುದೇ ನ್ಯಾಯಮೂರ್ತಿಯ ಉದ್ದೇಶ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…