Crime

ಪತ್ನಿ ಕಿರುಕುಳಕ್ಕೆ, ಪತಿ ಆತ್ಮಹತ್ಯೆ.

ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಒಂದು ದುರ್ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು 35 ವರ್ಷದ ಶಿವರಾಜ್ ಎತ್ತಿನ ಗುಡ್ಡ ಎಂದು ಗುರುತಿಸಲಾಗಿದೆ. ಕಳೆದ ನವೆಂಬರ್ 16ರಂದು ಶಿವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದರು, ಪ್ರಾರಂಭದಲ್ಲಿ ಗರಗ್ ಪೊಲೀಸ್ ಠಾಣೆಯ ಪೊಲೀಸರು ಇದು ಒಂದು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಡೆತ್ ನೋಟ್ ಶಿವರಾಜನೇ ಬರೆದಿದ್ದು ಎಂದು ಎಫ್ ಎಸ್ ಎಲ್ ವರದಿ ಬಂದ ಹಿನ್ನೆಲೆಯಲ್ಲಿ ಪತ್ನಿ ಸಾವಿಗೆ ಕಾರಣ ಎಂದು ಗರಗ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಶಿವರಾಜ್ ಎತ್ತಿನ ಗುಡ್ಡ ಕಳೆದ 2024ರ ಜುಲೈನಲ್ಲಿ ಮದುವೆಯಾಗಿದ್ದರು, ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಹೈಸ್ಕೂಲ್ ಶಿಕ್ಷಕಿ ಎಲ್ಲವ್ವ ಬೆಂಗೇರಿ ಎಂಬುವವಳ ಜೊತೆ ಮದುವೆಯಾಗಿದ್ದರು. ಮದುವೆಯಾದ 15 ದಿನದಲ್ಲಿ ಎಲ್ಲವ್ವ ತವರು ಮನೆಗೆ ಹೋಗಿದ್ದರು. ಶಿವರಾಜ್ ಆಗ ಪತ್ನಿಗೆ ಮನೆಗೆ ಕರೆ ತರಲು ಸಾಕಷ್ಟು ಪ್ರಯತ್ನ ಮಾಡಿದ್ದರು, ಆದರೆ ಧಾರವಾಡದಲ್ಲಿ ಬೇರೆ ಮನೆ ಮಾಡಿದರೆ ಮಾತ್ರ ನಾನು ವಾಪಸ್ ಬರುತ್ತೇನೆ ಎಂದು ಎಲ್ಲವ್ವ ಹೇಳಿದ್ದರು.
ಮನೆ ಬೇರೆ ಮಾಡಿದರೂ ಪತ್ನಿ ಬರಲೇ ಇಲ್ಲ. ಹೀಗಾಗಿ ನನ್ನ ಸಾವಿಗೆ ನನ್ನ ಪತ್ನಿ ಎಲ್ಲವ್ವ ಳೇ ಕಾರಣ, ನನ್ನ ಸಾವಿನ ನಂತರ ಅವಳಿಗೆ ಶಿಕ್ಷೆ ಆಗಬೇಕು ಎಂದು ಶಿವರಾಜ್ ಡೆತ್ ನೋಟ್ ಬರೆದಿಟ್ಟಿದ್ದರು. ಮದುವೆಯ ನಂತರ ಎಲ್ಲವ್ವ ಸರಿಯಾಗಿ ಜೀವನ ನಡೆಸದೆ ಶಿವರಾಜ್ ನನ್ನು ಬಿಟ್ಟು ತವರು ಮನೆಗೆ ಹೋಗಿದ್ದರು. ಆಸ್ತಿಗಾಗಿ ನನ್ನ ಸಹೋದರನಿಗೆ ಕಿರುಕುಳ ಕೊಟ್ಟಿದ್ದಕ್ಕೆ, ಅವನು ಅಸಹಾಯಕನಾಗಿ ನೇಣು ಹಾಕಿಕೊಂಡಿದ್ದಾನೆ. ಎಂದು ಮೃತ ಶಿವರಾಜ್ ನ ಸಹೋದರಿಯರು ಆರೋಪಿಸುತ್ತಿದ್ದಾರೆ.

ವರದಿ: ಶಿವರಾಜ್ ಪಿ.ಆರ್

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

10 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

10 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

10 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

11 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

11 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago