Crime

ಪತ್ನಿ ಕಿರುಕುಳಕ್ಕೆ, ಪತಿ ಆತ್ಮಹತ್ಯೆ.

ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಒಂದು ದುರ್ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು 35 ವರ್ಷದ ಶಿವರಾಜ್ ಎತ್ತಿನ ಗುಡ್ಡ ಎಂದು ಗುರುತಿಸಲಾಗಿದೆ. ಕಳೆದ ನವೆಂಬರ್ 16ರಂದು ಶಿವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದರು, ಪ್ರಾರಂಭದಲ್ಲಿ ಗರಗ್ ಪೊಲೀಸ್ ಠಾಣೆಯ ಪೊಲೀಸರು ಇದು ಒಂದು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಡೆತ್ ನೋಟ್ ಶಿವರಾಜನೇ ಬರೆದಿದ್ದು ಎಂದು ಎಫ್ ಎಸ್ ಎಲ್ ವರದಿ ಬಂದ ಹಿನ್ನೆಲೆಯಲ್ಲಿ ಪತ್ನಿ ಸಾವಿಗೆ ಕಾರಣ ಎಂದು ಗರಗ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಶಿವರಾಜ್ ಎತ್ತಿನ ಗುಡ್ಡ ಕಳೆದ 2024ರ ಜುಲೈನಲ್ಲಿ ಮದುವೆಯಾಗಿದ್ದರು, ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಹೈಸ್ಕೂಲ್ ಶಿಕ್ಷಕಿ ಎಲ್ಲವ್ವ ಬೆಂಗೇರಿ ಎಂಬುವವಳ ಜೊತೆ ಮದುವೆಯಾಗಿದ್ದರು. ಮದುವೆಯಾದ 15 ದಿನದಲ್ಲಿ ಎಲ್ಲವ್ವ ತವರು ಮನೆಗೆ ಹೋಗಿದ್ದರು. ಶಿವರಾಜ್ ಆಗ ಪತ್ನಿಗೆ ಮನೆಗೆ ಕರೆ ತರಲು ಸಾಕಷ್ಟು ಪ್ರಯತ್ನ ಮಾಡಿದ್ದರು, ಆದರೆ ಧಾರವಾಡದಲ್ಲಿ ಬೇರೆ ಮನೆ ಮಾಡಿದರೆ ಮಾತ್ರ ನಾನು ವಾಪಸ್ ಬರುತ್ತೇನೆ ಎಂದು ಎಲ್ಲವ್ವ ಹೇಳಿದ್ದರು.
ಮನೆ ಬೇರೆ ಮಾಡಿದರೂ ಪತ್ನಿ ಬರಲೇ ಇಲ್ಲ. ಹೀಗಾಗಿ ನನ್ನ ಸಾವಿಗೆ ನನ್ನ ಪತ್ನಿ ಎಲ್ಲವ್ವ ಳೇ ಕಾರಣ, ನನ್ನ ಸಾವಿನ ನಂತರ ಅವಳಿಗೆ ಶಿಕ್ಷೆ ಆಗಬೇಕು ಎಂದು ಶಿವರಾಜ್ ಡೆತ್ ನೋಟ್ ಬರೆದಿಟ್ಟಿದ್ದರು. ಮದುವೆಯ ನಂತರ ಎಲ್ಲವ್ವ ಸರಿಯಾಗಿ ಜೀವನ ನಡೆಸದೆ ಶಿವರಾಜ್ ನನ್ನು ಬಿಟ್ಟು ತವರು ಮನೆಗೆ ಹೋಗಿದ್ದರು. ಆಸ್ತಿಗಾಗಿ ನನ್ನ ಸಹೋದರನಿಗೆ ಕಿರುಕುಳ ಕೊಟ್ಟಿದ್ದಕ್ಕೆ, ಅವನು ಅಸಹಾಯಕನಾಗಿ ನೇಣು ಹಾಕಿಕೊಂಡಿದ್ದಾನೆ. ಎಂದು ಮೃತ ಶಿವರಾಜ್ ನ ಸಹೋದರಿಯರು ಆರೋಪಿಸುತ್ತಿದ್ದಾರೆ.

ವರದಿ: ಶಿವರಾಜ್ ಪಿ.ಆರ್

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

5 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

3 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

4 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

1 month ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago