Crime

ಪತ್ನಿ ಕಿರುಕುಳಕ್ಕೆ, ಪತಿ ಆತ್ಮಹತ್ಯೆ.

ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಒಂದು ದುರ್ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು 35 ವರ್ಷದ ಶಿವರಾಜ್ ಎತ್ತಿನ ಗುಡ್ಡ ಎಂದು ಗುರುತಿಸಲಾಗಿದೆ. ಕಳೆದ ನವೆಂಬರ್ 16ರಂದು ಶಿವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದರು, ಪ್ರಾರಂಭದಲ್ಲಿ ಗರಗ್ ಪೊಲೀಸ್ ಠಾಣೆಯ ಪೊಲೀಸರು ಇದು ಒಂದು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಡೆತ್ ನೋಟ್ ಶಿವರಾಜನೇ ಬರೆದಿದ್ದು ಎಂದು ಎಫ್ ಎಸ್ ಎಲ್ ವರದಿ ಬಂದ ಹಿನ್ನೆಲೆಯಲ್ಲಿ ಪತ್ನಿ ಸಾವಿಗೆ ಕಾರಣ ಎಂದು ಗರಗ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಶಿವರಾಜ್ ಎತ್ತಿನ ಗುಡ್ಡ ಕಳೆದ 2024ರ ಜುಲೈನಲ್ಲಿ ಮದುವೆಯಾಗಿದ್ದರು, ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಹೈಸ್ಕೂಲ್ ಶಿಕ್ಷಕಿ ಎಲ್ಲವ್ವ ಬೆಂಗೇರಿ ಎಂಬುವವಳ ಜೊತೆ ಮದುವೆಯಾಗಿದ್ದರು. ಮದುವೆಯಾದ 15 ದಿನದಲ್ಲಿ ಎಲ್ಲವ್ವ ತವರು ಮನೆಗೆ ಹೋಗಿದ್ದರು. ಶಿವರಾಜ್ ಆಗ ಪತ್ನಿಗೆ ಮನೆಗೆ ಕರೆ ತರಲು ಸಾಕಷ್ಟು ಪ್ರಯತ್ನ ಮಾಡಿದ್ದರು, ಆದರೆ ಧಾರವಾಡದಲ್ಲಿ ಬೇರೆ ಮನೆ ಮಾಡಿದರೆ ಮಾತ್ರ ನಾನು ವಾಪಸ್ ಬರುತ್ತೇನೆ ಎಂದು ಎಲ್ಲವ್ವ ಹೇಳಿದ್ದರು.
ಮನೆ ಬೇರೆ ಮಾಡಿದರೂ ಪತ್ನಿ ಬರಲೇ ಇಲ್ಲ. ಹೀಗಾಗಿ ನನ್ನ ಸಾವಿಗೆ ನನ್ನ ಪತ್ನಿ ಎಲ್ಲವ್ವ ಳೇ ಕಾರಣ, ನನ್ನ ಸಾವಿನ ನಂತರ ಅವಳಿಗೆ ಶಿಕ್ಷೆ ಆಗಬೇಕು ಎಂದು ಶಿವರಾಜ್ ಡೆತ್ ನೋಟ್ ಬರೆದಿಟ್ಟಿದ್ದರು. ಮದುವೆಯ ನಂತರ ಎಲ್ಲವ್ವ ಸರಿಯಾಗಿ ಜೀವನ ನಡೆಸದೆ ಶಿವರಾಜ್ ನನ್ನು ಬಿಟ್ಟು ತವರು ಮನೆಗೆ ಹೋಗಿದ್ದರು. ಆಸ್ತಿಗಾಗಿ ನನ್ನ ಸಹೋದರನಿಗೆ ಕಿರುಕುಳ ಕೊಟ್ಟಿದ್ದಕ್ಕೆ, ಅವನು ಅಸಹಾಯಕನಾಗಿ ನೇಣು ಹಾಕಿಕೊಂಡಿದ್ದಾನೆ. ಎಂದು ಮೃತ ಶಿವರಾಜ್ ನ ಸಹೋದರಿಯರು ಆರೋಪಿಸುತ್ತಿದ್ದಾರೆ.

ವರದಿ: ಶಿವರಾಜ್ ಪಿ.ಆರ್

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago