Categories: CrimeLatest

ಹಾಡುಹಗಲೇ ಹೆಂಡತಿ ಹತ್ಯೆ: ರಸ್ತೆ ಮಧ್ಯೆ ಪತ್ನಿಯನ್ನು ಕೊಂದು ಕಾರು ಹತ್ತಿಸಿ ಪತಿ ಕ್ರೌರ್ಯ

ಕಲಬುರಗಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಪತಿಯೊಬ್ಬ ತನ್ನ ಪತ್ನಿಯನ್ನೇ ನಡುರಸ್ತೆಯಲ್ಲಿ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ ಘಟನೆ ಜನರನ್ನು ಶಾಕ್‌ಗೆ ಗುರಿಮಾಡಿದೆ.

ಅಫಜಲಪುರ ತಾಲೂಕಿನ ಬಳುರಗಿ ಗ್ರಾಮದ ಬಳಿ ಮಾರ್ಚ್ 26ರಂದು ಮಧ್ಯಾಹ್ನ ಸುಮಾರಿಗೆ ಈ ಘಟನೆ ನಡೆದಿದೆ. ಮಹಾರಾಷ್ಟ್ರದ ಬಾರಾಮತಿ ಮೂಲದ ಶೈಲಾ (28) ಎಂಬ ಮಹಿಳೆ, ತನ್ನ ಪತಿ ಅಕ್ಷಯ್ ಜಾಧವ್ ಜೊತೆ ಗಾಣಗಾಪುರಕ್ಕೆ ದರ್ಶನಕ್ಕೆ ಬರುತ್ತಿದ್ದ ವೇಳೆ ಈ ದಾರುಣ ಘಟನೆ ನಡೆದಿದೆ.

ಮಧ್ಯದಲ್ಲಿ ಕಾರು ನಿಲ್ಲಿಸಿದ ಅಕ್ಷಯ್, ಪತ್ನಿಯ ಕೂದಲನ್ನು ಹಿಡಿದು ನೆಲಕ್ಕೆ ಬೀಳಿಸಿ, ತನ್ನ ಬಳಿಯಿದ್ದ ಆಯುಧದಿಂದ ಕತ್ತನ್ನು ಕತ್ತರಿಸಿ ಕೊಲೆ ಮಾಡಿದ್ದಾನೆ. ಮಹಿಳೆ ಜೀವ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೂ, ಜನರ ಮುಂದೆ ಪ್ರಾಣ ಬಿಟ್ಟಿದ್ದಾಳೆ.

ಇಷ್ಟಕ್ಕೂ ತೃಪ್ತಿಗೊಳ್ಳದ ಪತಿ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿಯ ಮೇಲೆ ಕಾರು ಹತ್ತಿಸಿ ಮತ್ತಷ್ಟು ಕ್ರೌರ್ಯ ಮೆರೆದಿದ್ದಾನೆ. ಈ ಘಟನೆ ಹಲವು ಜನರ ಸಮ್ಮುಖದಲ್ಲೇ ನಡೆದಿದ್ದರೂ, ಯಾರೊಬ್ಬರೂ ಮಧ್ಯ ಪ್ರವೇಶ ಮಾಡದೇ ಕೇವಲ ನೋಡುತ್ತಾ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿರುವುದು ಸಮಾಜದ ನಿರ್ಲಕ್ಷ್ಯವನ್ನು ತೋರಿಸಿದೆ.

ಘಟನೆಯ ವೇಳೆ ಕಾರಿನಲ್ಲಿ ಆರೋಪಿಯ ತಂದೆ-ತಾಯಿ ಸೇರಿದಂತೆ ಸಂಬಂಧಿಕರು ಇದ್ದರೂ, ಅವರು ಕೂಡ ಮೌನವಾಗಿರುವ ಮೂಲಕ ಈ ದಾರುಣ ಕೃತ್ಯಕ್ಕೆ ಪರೋಕ್ಷವಾಗಿ ಕಾರಣರಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿ ಅಕ್ಷಯ್ ಜಾಧವ್‌ನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಈ ಕೊಲೆಯ ನಿಖರ ಕಾರಣದ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಹಾಡುಹಗಲೇ ನಡೆದ ಈ ಭೀಕರ ಘಟನೆ ಕಲಬುರಗಿ ಜನತೆಯನ್ನು ಬೆಚ್ಚಿಬೀಳಿಸಿದ್ದು, ಸಮಯಕ್ಕೆ ಸರಿಯಾಗಿ ಯಾರಾದರೂ ತಡೆದಿದ್ದರೆ ಮಹಿಳೆಯ ಜೀವ ಉಳಿಯಬಹುದಿತ್ತು ಎಂಬ ಮಾತುಗಳು ಕೇಳಿಬರುತ್ತಿವೆ.

ಭ್ರಷ್ಟರ ಬೇಟೆ

Recent Posts

ವಿವಾಹಿತೆಯೊಂದಿಗೆ ಯುವಕ ಪರಾರಿ: ಸಿಟ್ಟಿಗೆದ್ದ ಗುಂಪಿನಿಂದ ಮನೆ ಮೇಲೆ ಮಾರಣಾಂತಿಕ ದಾಳಿ

ಬೆಳಗಾವಿ ಜಿಲ್ಲೆಯಲ್ಲಿ ಪ್ರೇಮ ಪ್ರಕರಣವೊಂದು ಹಿಂಸಾತ್ಮಕ ತಿರುವು ಪಡೆದಿದ್ದು, ವಿವಾಹಿತೆಯೊಂದಿಗೆ ಯುವಕ ಓಡಿಹೋದ ಹಿನ್ನೆಲೆ ಆತನ ಮನೆಯ ಮೇಲೆ ಗುಂಪೊಂದು…

15 hours ago

ಪಕ್ಕದ ಮನೆ ಯುವತಿಯೊಂದಿಗೆ ಅನೈತಿಕ ಸಂಬಂಧ; ಪ್ರಶ್ನಿಸಿದ್ದಕ್ಕೆ ಕಬ್ಬಿಣದ ರಾಡ್‌ನಿಂದ ಹೊಡೆದು ಪತ್ನಿಯ ಹತ್ಯೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಪತ್ನಿಯೇ ಪತಿಯ ಕ್ರೌರ್ಯಕ್ಕೆ ಬಲಿಯಾದ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಪಕ್ಕದ ಮನೆಯ ಯುವತಿಯೊಂದಿಗೆ ಹೊಂದಿದ್ದ…

15 hours ago

ಮಕ್ಕಳಾಗಿಲ್ಲ ಎಂಬ ವಿಚಾರಕ್ಕೆ ಗಂಡನ ಹತ್ಯೆ: ಪತ್ನಿ ಬಂಧನ

ಮೈಸೂರಿನಲ್ಲಿ ದಂಪತಿ ನಡುವಿನ ಕುಟುಂಬ ಕಲಹ ದಾರುಣ ಅಂತ್ಯ ಕಂಡಿದ್ದು, ಮಕ್ಕಳಾಗಿಲ್ಲ ಎಂಬ ವಿಚಾರಕ್ಕೆ ಉಂಟಾದ ಜಗಳದಲ್ಲಿ ಪತ್ನಿಯೇ ಗಂಡನನ್ನು…

19 hours ago

ಸತತ 3 ಬಾರಿ UPSC ಫೇಲ್.. ಒಂದೇ ಅಭ್ಯಾಸ ಬದಲಿಸಿ 24ನೇ ವಯಸ್ಸಿಗೆ IAS ಆದ ನೇಹಾ ಬ್ಯಾಡ್ವಲ್!

UPSC ಪರೀಕ್ಷೆಯಲ್ಲಿ ಯಶಸ್ಸು ಸಾಧಿಸುವ ಕನಸು ಲಕ್ಷಾಂತರ ಯುವಕರದ್ದಾಗಿದ್ದರೂ, ಅದನ್ನು ನನಸು ಮಾಡುವುದು ಕೆಲವೇ ಮಂದಿಗೆ ಸಾಧ್ಯವಾಗುತ್ತದೆ. ಹಲವು ಮಂದಿ…

19 hours ago

ಹಳ್ಳಿಯ ಹುಡುಗಿಯಿಂದ ಐಎಎಸ್‌ ಅಧಿಕಾರಿ ತನಕ: ಪ್ರಿಯಾ ರಾಣಿ ಅವರ ಸ್ಪೂರ್ತಿದಾಯಕ ಸಾಧನೆ

ಬಿಹಾರದ ಒಂದು ಸಣ್ಣ ಹಳ್ಳಿಯಿಂದ ಆರಂಭವಾದ ಪ್ರಯಾಣ, ಇಂದು ದೇಶದ ಅತ್ಯುನ್ನತ ನಾಗರಿಕ ಸೇವೆಯಾದ ಐಎಎಸ್‌ ಹುದ್ದೆ ತಲುಪಿದೆ. ದೃಢ…

19 hours ago

ಆರೋಪಿಯ ಬಾಯಿಗೆ ಮರ್ಮಾಂಗ ಇರಿಸಿ ವಿಕೃತ ಮೆರೆದಿದ್ದ ಪಿಎಸ್ಐ ಅರೆಸ್ಟ್..!

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಸಾರ್ವಜನಿಕರ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸಬೇಕಿದ್ದ ಪೊಲೀಸ್ ಅಧಿಕಾರಿಯೇ ಅಪ್ರಾಪ್ತ ಬಾಲಕರ…

19 hours ago