Latest

ನದಿಗೆ ನೂಕಿದ ಪತ್ನಿ? ಸೇತುವೆಯಿಂದ ನದಿಗೆ ಬಿದ್ದ ಪತಿಯನ್ನು ರಕ್ಷಿಸಿದ ಸಾರ್ವಜನಿಕರು

ರಾಯಚೂರು, ಜುಲೈ 12: ರಾಯಚೂರು ತಾಲೂಕಿನ ಗುರ್ಜಾಪುರ ಸಮೀಪದ ಕೃಷ್ಣಾ ನದಿಗೆ ಸೇತುವೆಯ ಮೇಲಿಂದ ಬಿದ್ದು ಜೀವಭಯದಲ್ಲಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಸಾಹಸಿಕವಾಗಿ ರಕ್ಷಿಸಿದ ಘಟನೆ ನಡೆದಿದೆ. ಘಟನೆಯು ಶನಿವಾರ ಸಂಜೆ ನಡೆದಿದ್ದು, ಪತಿ ನದಿಗೆ ಬಿದ್ದ ಹಿನ್ನಲೆಯಲ್ಲಿ ಪತ್ನಿಯ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

ಪ್ರಾಥಮಿಕ ಮಾಹಿತಿಯಂತೆ, ನವದಂಪತಿ ಸೇರಿ ಸೇತುವೆಯ ಹತ್ತಿರ ಫೋಟೋ ಸೆಶನ್‌ಗೆ ಆಗಮಿಸಿದ್ದರು. ಮೊದಲು ಪತ್ನಿಯ ಫೋಟೋ ತೆಗೆದ ಪತಿ, ಬಳಿಕ ತನ್ನ ಫೋಟೋ ತೆಗೆದುಕೊಳ್ಳಲು ಪತ್ನಿಯನ್ನು ಬೇಡಿಕೊಂಡಿದ್ದ. ಈ ಸಂದರ್ಭ ಪತಿ ಸೇತುವೆಯ ತುದಿಯಲ್ಲಿ ನಿಂತಾಗ, ಪತ್ನಿ ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನು ನದಿಗೆ ನೂಕಿದ್ದಾಳೆ ಎಂಬ ಆರೋಪ ಪತಿ ಮಾಡಿದ್ದಾರೆ.

ನದಿಯಲ್ಲಿ ನೀರಿನ ಪ್ರವಾಹ ಹೆಚ್ಚಾಗಿದ್ದರೂ, ಪತಿ ಈಜುತ್ತಾ ಮುಂದೆ ಹೋಗಿ ನದಿಯ ಮಧ್ಯಭಾಗದ ಕಲ್ಲು ಬಂಡೆಯಲ್ಲಿ ಆಶ್ರಯ ಪಡೆದುಕೊಂಡು ಜೀವ ಉಳಿಸಿಕೊಂಡಿದ್ದಾರೆ. ಅನಂತರ ಸಹಾಯಕ್ಕಾಗಿ ಕೂಗಾಡುತ್ತಿದ್ದ ಪತಿಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಹಗ್ಗದ ಸಹಾಯದಿಂದ ಸುಮಾರು ಎರಡು ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಹೊರತೆಗೆಯುವಲ್ಲಿ ಯಶಸ್ವಿಯಾದರು.

ಈ ಘಟನೆಗೆ ನಿಖರ ಕಾರಣ ಏನು ಎಂಬುದರ ಬಗ್ಗೆ ಸ್ಪಷ್ಟತೆ ಬಂದಿಲ್ಲ. ದಂಪತಿ ಯಾರು, ಎಲ್ಲಿಯವರು ಎಂಬ ವಿವರಗಳೂ ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಸ್ಥಳೀಯ ಪೊಲೀಸರು ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

16 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

20 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

20 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

20 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

20 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

1 day ago