ರಾಯಚೂರು, ಜುಲೈ 12: ರಾಯಚೂರು ತಾಲೂಕಿನ ಗುರ್ಜಾಪುರ ಸಮೀಪದ ಕೃಷ್ಣಾ ನದಿಗೆ ಸೇತುವೆಯ ಮೇಲಿಂದ ಬಿದ್ದು ಜೀವಭಯದಲ್ಲಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಸಾಹಸಿಕವಾಗಿ ರಕ್ಷಿಸಿದ ಘಟನೆ ನಡೆದಿದೆ. ಘಟನೆಯು ಶನಿವಾರ ಸಂಜೆ ನಡೆದಿದ್ದು, ಪತಿ ನದಿಗೆ ಬಿದ್ದ ಹಿನ್ನಲೆಯಲ್ಲಿ ಪತ್ನಿಯ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.
ಪ್ರಾಥಮಿಕ ಮಾಹಿತಿಯಂತೆ, ನವದಂಪತಿ ಸೇರಿ ಸೇತುವೆಯ ಹತ್ತಿರ ಫೋಟೋ ಸೆಶನ್ಗೆ ಆಗಮಿಸಿದ್ದರು. ಮೊದಲು ಪತ್ನಿಯ ಫೋಟೋ ತೆಗೆದ ಪತಿ, ಬಳಿಕ ತನ್ನ ಫೋಟೋ ತೆಗೆದುಕೊಳ್ಳಲು ಪತ್ನಿಯನ್ನು ಬೇಡಿಕೊಂಡಿದ್ದ. ಈ ಸಂದರ್ಭ ಪತಿ ಸೇತುವೆಯ ತುದಿಯಲ್ಲಿ ನಿಂತಾಗ, ಪತ್ನಿ ಫೋಟೋ ತೆಗೆಯುವ ನೆಪದಲ್ಲಿ ಪತಿಯನ್ನು ನದಿಗೆ ನೂಕಿದ್ದಾಳೆ ಎಂಬ ಆರೋಪ ಪತಿ ಮಾಡಿದ್ದಾರೆ.
ನದಿಯಲ್ಲಿ ನೀರಿನ ಪ್ರವಾಹ ಹೆಚ್ಚಾಗಿದ್ದರೂ, ಪತಿ ಈಜುತ್ತಾ ಮುಂದೆ ಹೋಗಿ ನದಿಯ ಮಧ್ಯಭಾಗದ ಕಲ್ಲು ಬಂಡೆಯಲ್ಲಿ ಆಶ್ರಯ ಪಡೆದುಕೊಂಡು ಜೀವ ಉಳಿಸಿಕೊಂಡಿದ್ದಾರೆ. ಅನಂತರ ಸಹಾಯಕ್ಕಾಗಿ ಕೂಗಾಡುತ್ತಿದ್ದ ಪತಿಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಹಗ್ಗದ ಸಹಾಯದಿಂದ ಸುಮಾರು ಎರಡು ಗಂಟೆಗಳ ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಹೊರತೆಗೆಯುವಲ್ಲಿ ಯಶಸ್ವಿಯಾದರು.
ಈ ಘಟನೆಗೆ ನಿಖರ ಕಾರಣ ಏನು ಎಂಬುದರ ಬಗ್ಗೆ ಸ್ಪಷ್ಟತೆ ಬಂದಿಲ್ಲ. ದಂಪತಿ ಯಾರು, ಎಲ್ಲಿಯವರು ಎಂಬ ವಿವರಗಳೂ ಇನ್ನಷ್ಟೇ ಬೆಳಕಿಗೆ ಬರಬೇಕಿದೆ. ಸ್ಥಳೀಯ ಪೊಲೀಸರು ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…