Crime

ಪತಿಯನ್ನು ತರಕಾರಿ ತರಲು ಕಳುಹಿಸಿ ಪ್ರಿಯಕರನೊಂದಿಗೆ ಬೆಡ್ರೂಮ್ನಲ್ಲಿ ಪತ್ನಿ ರೋಮ್ಯಾನ್ಸ್; ಮುಂದೆ ನಡೆದದ್ದೇ ಗೌರ ದುರಂತ!

ಪತಿ ಕೊಡಲಿಯಿಂದ ಪತ್ನಿ ಹಾಗು ಪತ್ನಿ ಪ್ರಿಯಕರನನ್ನು ಕೊಚ್ಚಿ ಕೊಂದಿರುವ ಘಟನೆಯು ಮಧ್ಯಪ್ರದೇಶದ ದಾತಿಯಾ ಜಿಲ್ಲೆಯ ಖತಿ ಬಾಬಾ ಕಾಲೋನಿಯಲ್ಲಿ ನಡೆದಿದೆ. ಪ್ರಿಯಕರನೊಂದಿಗೆ ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯೇ ಇಬ್ಬರನ್ನು ಕೊಲೆ ಮಾಡಿದ್ದಾನೆ. ಕೈಯಲ್ಲಿ ಕೊಡಲಿಯನ್ನು ಹಿಡಿದುಕೊಂಡೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ತನ್ನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಂದಿರುವುದಾಗಿ ಆರೋಪಿ ರವಿಯು ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ.

ಖಾತಿ ಬಾಬಾ ಕಾಲೋನಿ ನಿವಾಸಿಯು ರವಿ ವಂಶಕರ್ ವೃತ್ತಿಯಲ್ಲಿ ಚಾಲಕನಾಗಿದ್ದನು. ಪತ್ನಿ ಪೂಜಾಳ ನಡವಳಿಕೆಯ ಬಗ್ಗೆ ಅನುಮಾನವಿದ್ದ ಕಾರಣ ಆಕೆಯ ಮೇಲೆ ಕಣ್ಣಿಟ್ಟಿದ್ದನು. ಹೀಗಿರುವಾಗ ಶುಕ್ರವಾರದಂದು ಆತನ ಪತ್ನಿ ಮಾರುಕಟ್ಟೆಯಿಂದ ತರಕಾರಿ ತರುವಂತೆ ಹೇಳಿದ್ದಾಳೆ. ಇತ್ತ ಪತ್ನಿಯು ಇಲ್ಲದ್ದನ್ನು ನೋಡಿ ಪೂಜಾ ತನ್ನ ಪ್ರಿಯಕರ ರವಿಗೆ ಕರೆ ಮಾಡಿ ಮನೆಗೆ ಬರುವಂತೆ ಹೇಳಿದ್ದಾನೆ. ಆದರೆ ತರಕಾರಿ ತರಲು ಮಾರುಕಟ್ಟೆಗೆ ಹೋಗಿದ್ದ ಗಂಡನಿಗೆ ಪೂಜಾಳ ಮೇಲೆ ಅನುಮಾನವಿದ್ದ ಕಾರಣ ಅರ್ಧ ದಾರಿಯಿಂದಲೇ ಮನೆಗೆ ವಾಪಾಸ್ಸಾಗಿದ್ದಾನೆ. ಆದರೆ ಪತಿ ರವಿಯು ಮನೆಗೆ ಹಿಂದಿರುಗಿದಾಗ ಪೂಜಾಳು ಪ್ರಿಯಕರನ ಜೊತೆಗೆ ಕೋಣೆಯಲ್ಲಿರುವುದನ್ನು ಕಂಡಿದ್ದಾನೆ. ಇದನ್ನು ಕಣ್ಣಾರೆ ಕಂಡ ಕೋಪದಿಂದ ಪತ್ನಿ ಪೂಜಾಳ ಬಳಿ ಬಾಗಿಲು ತೆರೆಯುವಂತೆ ಹೇಳಿದ್ದಾನೆ. ಆದರೆ ಹೆಂಡತಿ ಬಾಗಿಲು ತೆರೆಯದ ಕಾರಣ ರವಿಯ ಕೋಪವು ನೆತ್ತಿಗೇರಿದೆ.
ಮನೆಯ ಅಂಗಳದಲ್ಲಿಯೇ ಇದ್ದ ಕೊಡಲಿಯನ್ನು ಎತ್ತಿಕೊಂಡು ಜೋರಾಗಿ ಕೂಗಾಡಲು ಆರಂಭಿಸಿದ್ದಾನೆ. ಆ ಬಳಿಕ ಪೂಜಾಳ ಪ್ರಿಯಕರ ಬಾಗಿಲು ತೆರೆದಾಗ ರವಿ ಕೊಡಲಿಯಿಂದ ಆತನ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಪತ್ನಿ ಪೂಜಾಳ ತಪ್ಪಿಸಿಕೊಂಡು ಮನೆಯಿಂದ ಹೊರಗೆ ಬಂದಿದ್ದು, ಕೊಡಲಿಯಿಂದ ಆಕೆಯ ಕತ್ತು ಕಡಿದಿದ್ದಾನೆ. ಇಬ್ಬರೂ ಮನೆಯ ಅಂಗಳದಲ್ಲಿ ವಿಲವಿಲ ಒದ್ದಾಡಿ ಪ್ರಾಣಬಿಟ್ಟಿದ್ದಾರೆ.

ರವಿ ರಕ್ತದಿಂದ ಕೂಡಿದ ಬಟ್ಟೆಯಲ್ಲೇ ಕೈಯಲ್ಲಿ ಕೊಡಲಿಯನ್ನು ಹಿಡಿದು ಪೊಲೀಸ್ ಠಾಣೆಯ ಮೆಟ್ಟಿಲೇರಿ ತಾನು ತನ್ನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದೇನೆ ಎಂದು ತಿಳಿಸುತ್ತಿದ್ದಂತೆ ಗಾಬರಿಗೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಕ್ಷಣವೇ ಪೊಲೀಸರ ತಂಡವು ಆತನ ಮನೆಗೆ ತೆರಳಿ ಮನೆಯ ಅಂಗಳದಲ್ಲಿ ಬಿದ್ದಿದ್ದ ಎರಡೂ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಆರೋಪಿಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಚಲಿಸುತ್ತಿದ್ದ ಬಸ್ಸಿನ ಕಿಟಕಿಯಿಂದ ತಲೆ ಹೊರಹಾಕಿದ ವಿದ್ಯಾರ್ಥಿಗೆ ಟಿಪ್ಪರ್ ಡಿಕ್ಕಿ: ರಸ್ತೆಗೆ ಬಿತ್ತು ರುಂಡ

ಹುಬ್ಬಳ್ಳಿ/ಕುಂದಗೋಳ: ಬಸ್‌ನಲ್ಲಿ ಪ್ರಯಾಣಿಸುವ ವೇಳೆ ಕಿಟಕಿಯಿಂದ ತಲೆ ಅಥವಾ ಕೈ ಹೊರಹಾಕುವುದು ಎಷ್ಟು ಅಪಾಯಕಾರಿ ಎಂಬುದನ್ನು ಧಾರವಾಡ ಜಿಲ್ಲೆಯ ಕುಂದಗೋಳ…

4 hours ago

ಇರಾಕ್ ಸಂಸದೆಯ ಮನೆಯಲ್ಲಿ 27 ಕೆಜಿ ಚಿನ್ನದ ಒಳಉಡುಪು, ₹927 ಕೋಟಿ ನಗದು ಜಪ್ತಿ ಎಂಬ ಸುದ್ದಿ ಫೇಕ್: ಫ್ಯಾಕ್ಟ್‌ಚೆಕ್‌ನಲ್ಲಿ ಬಯಲಾಯ್ತು ಸತ್ಯ

ಬಾಗ್ದಾದ್: ಇರಾಕ್‌ನ ಮಹಿಳಾ ಸಂಸದೆ ಹಿಂದ್ ಅಲ್-ಅಬ್ಬಾಸಿ ಅವರ ಮನೆಯಲ್ಲಿ ₹927 ಕೋಟಿ ಮೌಲ್ಯದ ನಗದು, 27 ಕಿಲೋಗ್ರಾಂ ಚಿನ್ನ…

4 hours ago

ಕ್ಯಾಫೆಯಲ್ಲಿ ಗ್ರಾಹಕರೊಂದಿಗೆ ದುರ್ವರ್ತನೆ ಆರೋಪ: ವೈರಲ್‌ ವಿಡಿಯೋ ಬೆನ್ನಲ್ಲೇ ಪುಣೆ ಪೊಲೀಸ್‌ PSI ಅಮಾನತು

ಪುಣೆ: ಮಹಾರಾಷ್ಟ್ರದ ಪುಣೆಯ ಡೆಕ್ಕನ್ ಪ್ರದೇಶದಲ್ಲಿರುವ ಜಿಪ್ಸಿಯಾ ಕ್ಯಾಫೆಯಲ್ಲಿ ಗ್ರಾಹಕರು ಹಾಗೂ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್…

6 hours ago

ನಕಲಿ ಔಷಧ ದಂಧೆ ತನಿಖೆ: ₹3 ಕೋಟಿ ಲಂಚ ಆರೋಪದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ದೀಪಕ್ ಗಹ್ಲಾವತ್ ಸಿಬಿಐ ಬಲೆಗೆ

ನವದೆಹಲಿ: ನಕಲಿ ಔಷಧ ತಯಾರಿಕಾ ದಂಧೆಗೆ ಸಂಬಂಧಿಸಿದ ಸಿಬಿಐ ತನಿಖೆಯಲ್ಲಿ ಅನುಕೂಲಕರ ಫಲಿತಾಂಶ ದೊರಕಿಸಿಕೊಡುವ ಭರವಸೆ ನೀಡಿ ₹3 ಕೋಟಿ…

6 hours ago

₹10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಹೆಸ್ಕಾಂ ಇಇ ಲೋಕಾಯುಕ್ತ ಬಲೆಗೆ

ಬಸವನಬಾಗೇವಾಡಿ: ಹೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ (ಇಇ) ಸಿದ್ರಾಮ ಬಿರಾದಾರ ಅವರು ಗುತ್ತಿಗೆದಾರನಿಂದ ₹10 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ…

8 hours ago

ಹೊಸ ಠಾಣೆಗೆ ಹೋಗುವ ಮಾರ್ಗದಲ್ಲೇ ಎಎಸ್‌ಐ ಹೃದಯಾಘಾತಕ್ಕೆ ಬಲಿ

ಬಾಗಲಕೋಟೆ: ಹೊಸ ಪೊಲೀಸ್ ಠಾಣೆಗೆ ಕರ್ತವ್ಯಕ್ಕೆ ಹಾಜರಾಗಲು ಹೊರಟಿದ್ದ ಎಎಸ್‌ಐ ಒಬ್ಬರು ಮಾರ್ಗಮಧ್ಯೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರ್ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ…

21 hours ago