Crime

ಪತಿಯನ್ನು ತರಕಾರಿ ತರಲು ಕಳುಹಿಸಿ ಪ್ರಿಯಕರನೊಂದಿಗೆ ಬೆಡ್ರೂಮ್ನಲ್ಲಿ ಪತ್ನಿ ರೋಮ್ಯಾನ್ಸ್; ಮುಂದೆ ನಡೆದದ್ದೇ ಗೌರ ದುರಂತ!

ಪತಿ ಕೊಡಲಿಯಿಂದ ಪತ್ನಿ ಹಾಗು ಪತ್ನಿ ಪ್ರಿಯಕರನನ್ನು ಕೊಚ್ಚಿ ಕೊಂದಿರುವ ಘಟನೆಯು ಮಧ್ಯಪ್ರದೇಶದ ದಾತಿಯಾ ಜಿಲ್ಲೆಯ ಖತಿ ಬಾಬಾ ಕಾಲೋನಿಯಲ್ಲಿ ನಡೆದಿದೆ. ಪ್ರಿಯಕರನೊಂದಿಗೆ ಪತ್ನಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಪತಿಯೇ ಇಬ್ಬರನ್ನು ಕೊಲೆ ಮಾಡಿದ್ದಾನೆ. ಕೈಯಲ್ಲಿ ಕೊಡಲಿಯನ್ನು ಹಿಡಿದುಕೊಂಡೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ತನ್ನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಂದಿರುವುದಾಗಿ ಆರೋಪಿ ರವಿಯು ಪೊಲೀಸರ ಮುಂದೆ ಹೇಳಿಕೊಂಡಿದ್ದಾನೆ.

ಖಾತಿ ಬಾಬಾ ಕಾಲೋನಿ ನಿವಾಸಿಯು ರವಿ ವಂಶಕರ್ ವೃತ್ತಿಯಲ್ಲಿ ಚಾಲಕನಾಗಿದ್ದನು. ಪತ್ನಿ ಪೂಜಾಳ ನಡವಳಿಕೆಯ ಬಗ್ಗೆ ಅನುಮಾನವಿದ್ದ ಕಾರಣ ಆಕೆಯ ಮೇಲೆ ಕಣ್ಣಿಟ್ಟಿದ್ದನು. ಹೀಗಿರುವಾಗ ಶುಕ್ರವಾರದಂದು ಆತನ ಪತ್ನಿ ಮಾರುಕಟ್ಟೆಯಿಂದ ತರಕಾರಿ ತರುವಂತೆ ಹೇಳಿದ್ದಾಳೆ. ಇತ್ತ ಪತ್ನಿಯು ಇಲ್ಲದ್ದನ್ನು ನೋಡಿ ಪೂಜಾ ತನ್ನ ಪ್ರಿಯಕರ ರವಿಗೆ ಕರೆ ಮಾಡಿ ಮನೆಗೆ ಬರುವಂತೆ ಹೇಳಿದ್ದಾನೆ. ಆದರೆ ತರಕಾರಿ ತರಲು ಮಾರುಕಟ್ಟೆಗೆ ಹೋಗಿದ್ದ ಗಂಡನಿಗೆ ಪೂಜಾಳ ಮೇಲೆ ಅನುಮಾನವಿದ್ದ ಕಾರಣ ಅರ್ಧ ದಾರಿಯಿಂದಲೇ ಮನೆಗೆ ವಾಪಾಸ್ಸಾಗಿದ್ದಾನೆ. ಆದರೆ ಪತಿ ರವಿಯು ಮನೆಗೆ ಹಿಂದಿರುಗಿದಾಗ ಪೂಜಾಳು ಪ್ರಿಯಕರನ ಜೊತೆಗೆ ಕೋಣೆಯಲ್ಲಿರುವುದನ್ನು ಕಂಡಿದ್ದಾನೆ. ಇದನ್ನು ಕಣ್ಣಾರೆ ಕಂಡ ಕೋಪದಿಂದ ಪತ್ನಿ ಪೂಜಾಳ ಬಳಿ ಬಾಗಿಲು ತೆರೆಯುವಂತೆ ಹೇಳಿದ್ದಾನೆ. ಆದರೆ ಹೆಂಡತಿ ಬಾಗಿಲು ತೆರೆಯದ ಕಾರಣ ರವಿಯ ಕೋಪವು ನೆತ್ತಿಗೇರಿದೆ.
ಮನೆಯ ಅಂಗಳದಲ್ಲಿಯೇ ಇದ್ದ ಕೊಡಲಿಯನ್ನು ಎತ್ತಿಕೊಂಡು ಜೋರಾಗಿ ಕೂಗಾಡಲು ಆರಂಭಿಸಿದ್ದಾನೆ. ಆ ಬಳಿಕ ಪೂಜಾಳ ಪ್ರಿಯಕರ ಬಾಗಿಲು ತೆರೆದಾಗ ರವಿ ಕೊಡಲಿಯಿಂದ ಆತನ ಮೇಲೆ ಹಲ್ಲೆ ನಡೆಸಿದ್ದಾನೆ. ಇತ್ತ ಪತ್ನಿ ಪೂಜಾಳ ತಪ್ಪಿಸಿಕೊಂಡು ಮನೆಯಿಂದ ಹೊರಗೆ ಬಂದಿದ್ದು, ಕೊಡಲಿಯಿಂದ ಆಕೆಯ ಕತ್ತು ಕಡಿದಿದ್ದಾನೆ. ಇಬ್ಬರೂ ಮನೆಯ ಅಂಗಳದಲ್ಲಿ ವಿಲವಿಲ ಒದ್ದಾಡಿ ಪ್ರಾಣಬಿಟ್ಟಿದ್ದಾರೆ.

ರವಿ ರಕ್ತದಿಂದ ಕೂಡಿದ ಬಟ್ಟೆಯಲ್ಲೇ ಕೈಯಲ್ಲಿ ಕೊಡಲಿಯನ್ನು ಹಿಡಿದು ಪೊಲೀಸ್ ಠಾಣೆಯ ಮೆಟ್ಟಿಲೇರಿ ತಾನು ತನ್ನ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕೊಲೆ ಮಾಡಿದ್ದೇನೆ ಎಂದು ತಿಳಿಸುತ್ತಿದ್ದಂತೆ ಗಾಬರಿಗೊಂಡ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಕ್ಷಣವೇ ಪೊಲೀಸರ ತಂಡವು ಆತನ ಮನೆಗೆ ತೆರಳಿ ಮನೆಯ ಅಂಗಳದಲ್ಲಿ ಬಿದ್ದಿದ್ದ ಎರಡೂ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ಆರೋಪಿಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

20 hours ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

20 hours ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

20 hours ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

20 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

20 hours ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

20 hours ago