ಹರಿಯಾಣದ ಗುರುಗ್ರಾಮದಲ್ಲಿ ಪತ್ನಿಯೊಬ್ಬರು ಕುಡಿದ ಮತ್ತಿನಲ್ಲಿದ್ದ ತನ್ನ ಪತಿ ಸರ್ಕಾರಿ ರೈಲ್ವೇ ಪೊಲೀಸ್ನ (ಜಿಆರ್ಪಿ) ಸಹಾಯಕ ಸಬ್ ಇನ್ಸ್ಪೆಕ್ಟರ್ (ಎಎಸ್ಐ) ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಮೃತರನ್ನು 49 ವರ್ಷದ ರಾಜ್ಬೀರ್ ಎಂದು ಗುರುತಿಸಲಾಗಿದೆ.
ಅವರು ರೇವಾರಿ ರೈಲು ನಿಲ್ದಾಣದ ಜಿಆರ್ಪಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ತಮ್ಮ ಪತ್ನಿ ಆರತಿ ಮತ್ತು ಮಗ ಅನು ಅಲಿಯಾಸ್ ಯಶ್ ಅವರೊಂದಿಗೆ ಗುರುಗ್ರಾಮ್ದ ಶಿಕೋಪುರ್ ಗ್ರಾಮದಲ್ಲಿ ವಾಸಿಸುತ್ತಿದ್ದರು. ಮುಂಜಾನೆ 5 ಗಂಟೆ ಸುಮಾರಿಗೆ ರಾಜ್ಬೀರ್ ಮತ್ತು ಆರತಿ ನಡುವೆ ತೀವ್ರ ವಾಗ್ವಾದ ಘಟನೆ ನಡೆದಾಗ. ಕುಡಿದ ಅಮಲಿನಲ್ಲಿದ್ದ ಪತ್ನಿ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದರು ಎನ್ನಲಾಗಿದೆ. ಪತಿ ರಾಜ್ ಬೀರ್ ಕೂಡ ಆರತಿಯ ಮೇಲೆ ಗುಂಡು ಹಾರಿಸಿದ್ದರಿಂದ ಆಕೆ ಗಾಯಗೊಂಡಿದ್ದಾಳೆ.
ಆಯುಧವು ಹಾಸಿಗೆಯ ಮೇಲೆ ಬಿದ್ದಿತು. ಪತ್ನಿ ಅದನ್ನು ಕಸಿದುಕೊಂಡು ರಾಜ್ಬೀರ್ ಮೇಲೆ ಮೂರು ಗುಂಡು ಹಾರಿಸಿದ್ದಾರೆ. ಕೂಡಲೇ ಪುತ್ರ ಯಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಅಷ್ಟರಲ್ಲಾಗಲೇ ರಾಜ್ಬೀರ್ ಮೃತಪಟ್ಟಿದ್ದಾರೆ. ಆದರೆ, ಆರತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆ ಮತ್ತು ಆಕೆಯ ಮಗನ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಅವರ ಮಗನ ಪಾತ್ರದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅಪರಾಧಕ್ಕೆ ಬಳಸಲಾದ ಆಯುಧವು ದೇಶ ನಿರ್ಮಿತ ಪಿಸ್ತೂಲ್ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ದೂರು ನೀಡಿರುವ ರಾಜ್ಬೀರ್ ಅವರ ಹಿರಿಯ ಸಹೋದರ ಸತ್ಬೀರ್ ಸಿಂಗ್, ಮೃತನ ಪತ್ನಿ ಮತ್ತು ಮಗನನ್ನು ಆರೋಪಿಗಳೆಂದು ಹೆಸರಿಸಿದ್ದಾರೆ. ಈ ಕೊಲೆಯು ಪಿತೂರಿಯಾಗಿದೆ ಎಂದು ಆರೋಪಿಸಿದ್ದಾರೆ. ಸೆಕ್ಟರ್-10ಎ ಪೊಲೀಸ್ ಠಾಣೆಯಲ್ಲಿ ಐಪಿಸಿ ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಆಯುಧವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…