Crime

ನೀನೊಬ್ಬ ಗಂಡಸೇನಾ? ನಿನ್ನಿಂದ ನನ್ನ ಆಸೆ ತೀರಿಸಲು ಸಾಧ್ಯವಿಲ್ಲ ಎಂದ ಪತ್ನಿಯ ಕುತ್ತಿಗೆ ಹಿಸುಕಿ ಕೊಲೆ, ಮೂವರು ಮಕ್ಕಳು ಅನಾಥ

ವೇಲೂರು: ತಮಿಳುನಾಡಿನ ವೇಲೂರು ಜಿಲ್ಲೆಯಲ್ಲಿ ದಾಂಪತ್ಯ ಕಲಹದ ಅಂತ್ಯ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಪತ್ನಿಯೊಂದಿಗೆ ನಡೆದ ತೀವ್ರ ವಾಗ್ವಾದದ ಬಳಿಕ ಆವೇಶಗೊಂಡ ಪತಿಯೊಬ್ಬ ಆಕೆಯನ್ನು ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬಳಿಕ ಪ್ರಕರಣವನ್ನು ಮುಚ್ಚಿಹಾಕಲು ಪತ್ನಿ ಕಾಣೆಯಾಗಿದ್ದಾಳೆ ಎಂದು ನಾಟಕವಾಡಿದರೂ, ಮನೆಯಿಂದ ಬರುತ್ತಿದ್ದ ದುರ್ವಾಸನೆಯಿಂದ ಕೊಲೆ ಪ್ರಕರಣ ಬಯಲಾಗಿದೆ. ಈ ಘಟನೆಯಿಂದ ಮೂವರು ಮಕ್ಕಳು ತಾಯಿಯನ್ನು ಕಳೆದುಕೊಂಡು, ತಂದೆ ಜೈಲು ಸೇರಿದ ಕಾರಣ ಅನಾಥರಂತಾಗಿದ್ದಾರೆ.

ಬಂಧಿತನನ್ನು ವಿಜಯ್ ಕುಮಾರ್ (48) ಎಂದು ಗುರುತಿಸಲಾಗಿದ್ದು, ಮೃತ ಮಹಿಳೆ ಧನಲಕ್ಷ್ಮಿ (36) ಆಗಿದ್ದಾರೆ. 18 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಈ ದಂಪತಿಗೆ ಇಬ್ಬರು ಪುತ್ರಿಯರು ಹಾಗೂ ಒಬ್ಬ ಪುತ್ರ ಸೇರಿ ಮೂವರು ಮಕ್ಕಳಿದ್ದಾರೆ. ವಿಜಯ್ ಕುಮಾರ್ ಕಾರು ಚಾಲಕರಾಗಿ ಕೆಲಸ ಮಾಡುತ್ತಿದ್ದರೆ, ಧನಲಕ್ಷ್ಮಿ ಮನೆ ಕೆಲಸದ ಜೊತೆಗೆ ಹೊರಗಡೆಯೂ ಓಡಾಡುತ್ತಿದ್ದಳು. ಈ ನಡುವೆ ಧನಲಕ್ಷ್ಮಿಗೆ ಮತ್ತೊಬ್ಬ ಯುವಕನೊಂದಿಗೆ ಆತ್ಮೀಯ ಸಂಬಂಧವಿದೆ ಎಂಬ ಅನುಮಾನದಿಂದ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ.

ಘಟನೆ ನಡೆದ ದಿನವೂ ದಂಪತಿ ನಡುವೆ ತೀವ್ರ ವಾಗ್ವಾದ ನಡೆದಿತ್ತು. ಬಳಿಕ ರಾತ್ರಿ ಮನೆಗೆ ತಡವಾಗಿ ಬಂದ ಪತ್ನಿಯನ್ನು ಪ್ರಶ್ನಿಸಿದಾಗ ಇಬ್ಬರ ನಡುವೆ ಮಾತಿನ ಚಕಮಕಿ ಮತ್ತಷ್ಟು ಉಲ್ಬಣಗೊಂಡಿದೆ. ಈ ವೇಳೆ ಪತ್ನಿ ಅವಮಾನಕಾರಿ ಮಾತುಗಳನ್ನಾಡಿದ್ದರಿಂದ ಆವೇಶಗೊಂಡ ವಿಜಯ್ ಕುಮಾರ್ ಆಕೆಯ ಕುತ್ತಿಗೆ ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ನಂತರ ಶವವನ್ನು ಮನೆಯ ಅಡುಗೆಮನೆಯ ಮೇಲಿನ ಅಟ್ಟದಲ್ಲಿ ಅಡಗಿಸಿ, ಮರುದಿನ ಮಕ್ಕಳನ್ನು ಶಾಲೆಗೆ ಕಳುಹಿಸಿ, ಪತ್ನಿ ಕಾಣೆಯಾಗಿದ್ದಾಳೆ ಎಂದು ನೆರೆಹೊರೆಯವರಿಗೆ ಹೇಳಿದ್ದಾನೆ.

ಕೆಲ ದಿನಗಳ ಬಳಿಕ ಮನೆಯಿಂದ ತೀವ್ರ ದುರ್ವಾಸನೆ ಬರುತ್ತಿದ್ದರಿಂದ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮನೆಯ ಪರಿಶೀಲನೆ ನಡೆಸಿದಾಗ ಕೊಳೆತ ಸ್ಥಿತಿಯಲ್ಲಿದ್ದ ಧನಲಕ್ಷ್ಮಿಯ ಶವ ಪತ್ತೆಯಾಗಿದೆ. ಬಳಿಕ ವಿಜಯ್ ಕುಮಾರ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ದುರಂತದಲ್ಲಿ ತಾಯಿಯನ್ನು ಕಳೆದುಕೊಂಡು, ತಂದೆ ಜೈಲು ಸೇರಿದ ಪರಿಣಾಮ ಮೂವರು ಮಕ್ಕಳು ಸಂಕಷ್ಟದ ಪರಿಸ್ಥಿತಿಗೆ ತಳ್ಳಲ್ಪಟ್ಟಿದ್ದು, ಘಟನೆ ಸ್ಥಳೀಯರಲ್ಲಿ ತೀವ್ರ ನೋವು ಮೂಡಿಸಿದೆ.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

22 hours ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

22 hours ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

22 hours ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

22 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

22 hours ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

22 hours ago