Categories: CrimeLatest

ವಾಟ್ಸಾಪ್ ಸ್ಟೇಟಸ್‌ನಿಂದ ಬಯಲಾಯ್ತು ಪತ್ನಿಯ ಎರಡನೇ ಮದುವೆ; ಗಂಡನಿಗೆ ಶಾಕ್, ಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ!

ಹರಿಯಾಣದ ಹಿಸಾರ್ ಜಿಲ್ಲೆಯಲ್ಲಿ ನಡೆದಿರುವ ಒಂದು ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸುಮಾರು 20 ವರ್ಷಗಳ ವೈವಾಹಿಕ ಜೀವನ, ಇಬ್ಬರು ಮಕ್ಕಳು ಇದ್ದರೂ ಪತ್ನಿಯೊಬ್ಬಳು ಪ್ರಿಯಕರನೊಂದಿಗೆ ಎರಡನೇ ಮದುವೆಯಾಗಿರುವ ಆರೋಪ ಕೇಳಿಬಂದಿದೆ. ಈ ಪ್ರಕರಣದ ಕುತೂಹಲಕಾರಿ ಸಂಗತಿ ಎಂದರೆ, ಆ ಮದುವೆಯ ವಿಚಾರ ಗಂಡನಿಗೆ ತಿಳಿದದ್ದು ವಾಟ್ಸಾಪ್ ಸ್ಟೇಟಸ್ ಮೂಲಕ.

ಜಗಾನ್ ಗ್ರಾಮದ ನಿವಾಸಿ ಮನೀಶ್ ಕುಮಾರ್ ಅವರು 2006ರಲ್ಲಿ ರೇಖಾ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಇಬ್ಬರು ಪುತ್ರರಿದ್ದಾರೆ. 2023ರಲ್ಲಿ ಉದ್ಯೋಗದ ಕಾರಣದಿಂದ ಮನೀಶ್ ಭಿವಾನಿಗೆ ಸ್ಥಳಾಂತರಗೊಂಡಿದ್ದರು. ಈ ಅವಧಿಯಲ್ಲಿ ಸತೀಶ್ ಎಂಬ ವ್ಯಕ್ತಿ ಮನೆಗೆ ಆಗಾಗ್ಗೆ ಬರುತ್ತಿದ್ದನೆಂದು ಹೇಳಲಾಗಿದ್ದು, ಇದೇ ವೇಳೆ ರೇಖಾ ಮತ್ತು ಸತೀಶ್ ನಡುವೆ ಆತ್ಮೀಯತೆ ಬೆಳೆದಿತ್ತೆಂದು ಆರೋಪಿಸಲಾಗಿದೆ.

ಕಳೆದ ವರ್ಷದ ನವೆಂಬರ್‌ನಲ್ಲಿ ರೇಖಾ ತನ್ನ ತಂದೆ ಹಾಗೂ ಸಹೋದರನೊಂದಿಗೆ ಮನೆಯಿಂದ ತೆರಳಿದ್ದರು. ಪತ್ನಿಯ ಬಗ್ಗೆ ಮಾಹಿತಿ ಹುಡುಕುತ್ತಿದ್ದ ಮನೀಶ್‌ಗೆ ಡಿಸೆಂಬರ್ 1ರಂದು ಬಂಧುವೊಬ್ಬರ ವಾಟ್ಸಾಪ್ ಸ್ಟೇಟಸ್‌ನಲ್ಲಿ ಅಚ್ಚರಿಯ ದೃಶ್ಯ ಕಂಡುಬಂದಿತು. ಅದರಲ್ಲಿ ರೇಖಾ ಮತ್ತು ಸತೀಶ್ ರಾಜಸ್ಥಾನದ ದೇವಸ್ಥಾನವೊಂದರಲ್ಲಿ ಮದುವೆಯಾಗುತ್ತಿರುವ ಫೋಟೋ ಹಾಗೂ ವಿಡಿಯೊಗಳು ಇದ್ದವು ಎನ್ನಲಾಗಿದೆ.

ಈ ಮಾಹಿತಿ ತಿಳಿದ ತಕ್ಷಣ ಮನೀಶ್ ತನ್ನ ತಾಯಿ ಮತ್ತು ಇಬ್ಬರು ಮಕ್ಕಳೊಂದಿಗೆ ದೇವಸ್ಥಾನಕ್ಕೆ ತೆರಳಿದ್ದಾರೆ. ಅಲ್ಲಿ ರೇಖಾ ಹಾಗೂ ಸತೀಶ್ ಮದುವೆಯ ನಂತರ ಫೋಟೋಶೂಟ್‌ನಲ್ಲಿ ತೊಡಗಿದ್ದರೆಂದು ಆರೋಪಿಸಲಾಗಿದೆ. ಈ ಕುರಿತು ಪ್ರಶ್ನಿಸಿದಾಗ, ಅಲ್ಲಿದ್ದ ಕೆಲವರು ಜೀವ ಬೆದರಿಕೆ ಹಾಕಿ ತಮ್ಮನ್ನು ಅಲ್ಲಿಂದ ಕಳುಹಿಸಿದ್ದಾರೆ ಎಂದು ಮನೀಶ್ ದೂರಿದ್ದಾರೆ.

ಇದರ ಜೊತೆಗೆ, ಪತ್ನಿ ಹಾಗೂ ಆಕೆಯ ಕುಟುಂಬದವರು ಸಂಚು ರೂಪಿಸಿ ತಮ್ಮ ಹೆಸರಿನ ಭೂಮಿ ಮತ್ತು ಮನೆಯನ್ನು ಮಾರಾಟ ಮಾಡಿಸಿ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಮನೀಶ್ ಆರೋಪಿಸಿದ್ದಾರೆ. ಈ ಎಲ್ಲ ಆರೋಪಗಳಿಗೆ ಸಂಬಂಧಿಸಿದಂತೆ ಅವರು ಮದುವೆಯ ಫೋಟೋ, ವಿಡಿಯೊ ಸೇರಿದಂತೆ ಲಭ್ಯವಿರುವ ದಾಖಲೆಗಳೊಂದಿಗೆ ಹಿಸಾರ್ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಪ್ರಕರಣವನ್ನು ಪರಿಗಣಿಸಿದ ನ್ಯಾಯಾಲಯವು ರೇಖಾ, ಸತೀಶ್ ಹಾಗೂ ಸಂಬಂಧಿತ ಕುಟುಂಬ ಸದಸ್ಯರಿಗೆ ನೋಟಿಸ್ ಜಾರಿಗೊಳಿಸಿದ್ದು, ನಿಗದಿತ ದಿನಾಂಕದೊಳಗೆ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ವಿವರಣೆ ಸಲ್ಲಿಸುವಂತೆ ಸೂಚಿಸಿದೆ. ಪ್ರಕರಣದ ತನಿಖೆ ಮುಂದುವರಿದಿದ್ದು, ನ್ಯಾಯಾಲಯದ ಮುಂದಿನ ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳುವ ಸಾಧ್ಯತೆಯಿದೆ.

ಭ್ರಷ್ಟರ ಬೇಟೆ

Recent Posts

ನಂಜನಗೂಡಿನಲ್ಲಿ ‘ನಕಲಿ ಮಂಗಳಮುಖಿ’: ಒಂದೆಡೆ ಎರಡು ಮಕ್ಕಳ ತಂದೆ…ಮತ್ತೊಂದೆಡೆ ಮಂಗಳಮುಖಿ…!

ನಂಜನಗೂಡು: ಮಂಗಳಮುಖಿಯ ವೇಷ ಧರಿಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್…

10 hours ago

ಸೌಮ್ಯ ಮದುವೆ ವೇದಿಕೆಯಲ್ಲೇ ಗಾಸಿಪ್‌ಗೆ ಬ್ರೇಕ್; ‘ನಾವು ಕೇವಲ ಆತ್ಮೀಯ ಸ್ನೇಹಿತರು’ ಎಂದ ಅಶ್ವತಿ ನಾಯರ್

ಕನ್ನಡ ಕಿರುತೆರೆಯ ಜನಪ್ರಿಯ ನಟಿ ವಿ.ಎಸ್. ಸೌಮ್ಯ ಅವರು ತಮ್ಮ ದೀರ್ಘಕಾಲದ ಸ್ನೇಹಿತ ಹಾಗೂ ಫಿಟ್ನೆಸ್ ಟ್ರೈನರ್ ಗೌತಮ್ ಅವರೊಂದಿಗೆ…

10 hours ago

ಮುಂಡಗೋಡಿನಲ್ಲಿ ಬಾಲ್ಯ ವಿವಾಹಕ್ಕೆ ಬ್ರೇಕ್: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ತ್ವರಿತ ಕಾರ್ಯಾಚರಣೆ, ಅಪ್ರಾಪ್ತೆಯ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನಲ್ಲಿ ನಡೆಯಲಿದ್ದ ಬಾಲ್ಯ ವಿವಾಹವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಸಮಯೋಚಿತವಾಗಿ ತಡೆಗಟ್ಟುವಲ್ಲಿ…

1 day ago

ಚಿಪ್ಪಿಕಲ್ಲು ದುರಂತದ ನೋವು ತಾಳಲಾರದೆ ಯುವಕ ಸಾವು; ತಾಯಿಯನ್ನು ಕಳೆದುಕೊಂಡ ಕುಟುಂಬಕ್ಕೆ ಮತ್ತೊಂದು ಆಘಾತ

ಭಟ್ಕಳ: ವೆಂಕಟಾಪುರ ನದಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸಂಭವಿಸಿದ್ದ ಚಿಪ್ಪಿಕಲ್ಲು ದುರಂತದಲ್ಲಿ ತಾಯಿಯನ್ನು ಕಳೆದುಕೊಂಡಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕುಟುಂಬದವರನ್ನು ಹಾಗೂ…

1 day ago

ಕೆಬಿಜೆಎನ್ಎಲ್ ಶಾಖಾ ಕಾಲುವೆ ಕಾಮಗಾರಿಯಲ್ಲಿ ಕಳಪೆ ಗುಣಮಟ್ಟದ ಆರೋಪ; ರೈತರ ಆಕ್ರೋಶ, ಹೋರಾಟದ ಎಚ್ಚರಿಕೆ

ವಿಜಯಪುರ: ರೈತರಿಗೆ ನೀರಾವರಿ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವ ಉದ್ದೇಶದಿಂದ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಅದರ ಭಾಗವಾಗಿ ಬಸವನ ಬಾಗೇವಾಡಿ…

2 days ago

₹79.36 ಲಕ್ಷ ವೆಚ್ಚದ ಲಿಂಗಣ್ಣ ಕಾಲೋನಿ ಪಾರ್ಕ್ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮೊದಲ ಹಂತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ಉದ್ದೇಶದಿಂದ ಬಳ್ಳಾರಿ ನಗರದ ಗಾಂಧಿನಗರ 22ನೇ ವಾರ್ಡ್‌ನ ಸೊಂತ ಲಿಂಗಣ್ಣ ಕಾಲೋನಿಯ…

2 days ago