Latest

ಮಲೆ ಮಹದೇಶ್ವರ ವ್ಯನ್ಯಧಾಮದಲ್ಲಿ ಕಾಡು ಹಂದಿ ಬೇಟೆ: ಮಗ ಬಂಧನ, ತಂದೆಗಾಗಿ ಹುಡುಗಾಟ!

ಮಲೆ ಮಹದೇಶ್ವರ ವ್ಯನ್ಯಧಾಮದ ಪಚ್ಚೆದೊಡ್ಡಿ ಗಸ್ತಿನ ಅರಣ್ಯ ಪ್ರದೇಶದಲ್ಲಿ ಕಾಡು ಹಂದಿಯನ್ನು ಬೇಟೆಯಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಅಜ್ಜೀಪುರ ಗ್ರಾಮದ ಪಳನಿಸ್ವಾಮಿ ಎಂಬ ವ್ಯಕ್ತಿಯನ್ನು ಸೋಮವಾರ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.ಆರೋಪಿಯು ಕಾಡು ಹಂದಿಯನ್ನು ಬೇಟೆಗೆ ಹಿಡಿದು, ಅದನ್ನು ತನ್ನ ತೋಟದ ಮನೆಗೆ ತೆಗೆದುಕೊಂಡು ಮಾಂಸದ ಸಿದ್ಧತೆ ಮಾಡುತ್ತಿದ್ದ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ, ಹಂದಿ ಮಾಂಸ ಹಾಗೂ ಬೇಟೆಗೆ ಬಳಸಿದ ಮಾರಕ ಆಯುಧಗಳು ವಶಪಡಿಸಿಕೊಂಡು, ಅಪರಾಧ ಸಂಬಂಧಿತ ಸುಳಿವುಗಳನ್ನು ಗಳಿಸಬಹುದಾದ್ದಾಗಿದೆ.ಆರೋಪಿ ಪಳನಿಸ್ವಾಮಿಯ ತಂದೆ ವೆಂಕಟೇಶ್ ಪ್ರಸ್ತುತ ತಲೆಮರೆಸಿಕೊಂಡಿದ್ದು, ಆತನ ಬಂಧನದ ಅವಶ್ಯಕತೆಗಾಗಿ ಅರಣ್ಯ ಇಲಾಖೆ ಹುಡುಕಾಟದಲ್ಲಿ ತೊಡಗಿದೆ. ಪಳನಿಸ್ವಾಮಿಯನ್ನು ಕೋರ್ಟ್‌ಗೆ ಹಾಜರುಪಡಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.ಈ ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳು ಸಂದೀಪ್, ವಿನಾಯಕ್, ಹನೂರು ವಿಭಾಗದ ವನಪಾಲಕ ನಂದೀಶ್, ಐಸಿಟಿ ಉಪ ವಲಯ ಅರಣ್ಯಾಧಿಕಾರಿ ಗಿರೀಶ್, ಬೀಟ್ ಗಾರ್ಡ್‌ಗಳು ಭೀಮಸಿ, ಅನಿಲ್ ಕುಮಾರ್, ಚಿನ್ನಸ್ವಾಮಿ ಮತ್ತು ವಾಚರ್ ಪ್ರಭು, ಮತ್ತು ಆನೆ ಕಾರ್ಯಪಡೆ ಸಿಬ್ಬಂದಿ ಪ್ರಮುಖ ಪಾತ್ರವಹಿಸಿದ್ದರು.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago