ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಐದು ಮಂದಿ ಕಂದಾಯ ಇಲಾಖೆ ನೌಕರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತೆಯ ದೂರಿನಂತೆ, ಮಿನಿ ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಿರಿಯ ಸಹಾಯಕ ಮತ್ತು ನಾಲ್ವರು ಗ್ರಾಮ ಆಡಳಿತ ಅಧಿಕಾರಿಗಳು ಸೇರಿ ಆರೋಪಿಗಳು ಅನಾಚಾರ ಎಸಗಿದ್ದಾರೆ. ಸಿಂಧನೂರು ನಗರ ಶಹರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಮಗಳ ಮದುವೆಗೆ ಖರ್ಚು ಮಾಡಬೇಕಾಗಿ ಮಹಿಳೆ ತನ್ನ ಜಮೀನನ್ನು ಅಡಮಾನವಿಟ್ಟು ನಾಲ್ಕು ಲಕ್ಷ ರೂಪಾಯಿ ಸಾಲ ಪಡೆದಿದ್ದಳು. ಈ ಹಣವನ್ನು ಮರಳಿ ನೀಡಲು ಎಪಿಎಂಸಿ ಬಳಿ ಇರುವ ಖಾಸಗಿ ಕೊಠಡಿಗೆ ಹೋದ ಸಂದರ್ಭದಲ್ಲಿ ಆರೋಪಿಗಳು ಅವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರೆಂದು ಆರೋಪಿಸಲಾಗಿದೆ.
“ನನ್ನ ಹೆಸರಿನಲ್ಲಿ ಬೆಲೆಯ ಜಮೀನು ಇದ್ದದ್ದು ತಿಳಿದ ಆರೋಪಿಗಳು ಜಮೀನು ಖರೀದಿ ಹೆಸರಿನಲ್ಲಿ ಕರಾರು ಪತ್ರ ಬರೆಸಿ, ಸಾಲ ನೀಡಿದರು. ಕರಾರು ಪತ್ರದಲ್ಲಿ ತಮ್ಮನ್ನು ಕೃಷಿಕರೆಂದು ಗುರುತಿಸಿಕೊಂಡಿದ್ದರು, ಆದರೆ ಇವರು ಸರ್ಕಾರಿ ನೌಕರರು” ಎಂದು ಮಹಿಳೆ ದೂರು ದಾಖಲಿಸಿದ್ದಾರೆ.
ಹಣವನ್ನು ಹಿಂತಿರುಗಿಸಲು ಹೋದಾಗ, ಆರೋಪಿಗಳು ಅವಾಚ್ಯ ಪದಗಳನ್ನು ಬಳಸಿದ್ದಲ್ಲದೆ, ಲೈಂಗಿಕವಾಗಿ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ರಾಜಭಕ್ಷಿ ಎಂಬ ಕಿರಿಯ ಸಹಾಯಕ ಹಾಗೂ ಗ್ರಾಮ ಆಡಳಿತಾಧಿಕಾರಿಗಳಾದ ಮಲ್ಲಿಕಾರ್ಜುನ ಗಡೇದ್, ಬಂದೇನವಾಜ್ ನಿಡಗುಂದಿ, ಮೃತ್ಯುಂಜಯ ಮತ್ತು ಆನಂದ್ ಎಂಬವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತವಾದ ಕಾನೂನು ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…