ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಐದು ಮಂದಿ ಕಂದಾಯ ಇಲಾಖೆ ನೌಕರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ತೆಯ ದೂರಿನಂತೆ, ಮಿನಿ ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಿರಿಯ ಸಹಾಯಕ ಮತ್ತು ನಾಲ್ವರು ಗ್ರಾಮ ಆಡಳಿತ ಅಧಿಕಾರಿಗಳು ಸೇರಿ ಆರೋಪಿಗಳು ಅನಾಚಾರ ಎಸಗಿದ್ದಾರೆ. ಸಿಂಧನೂರು ನಗರ ಶಹರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಮಗಳ ಮದುವೆಗೆ ಖರ್ಚು ಮಾಡಬೇಕಾಗಿ ಮಹಿಳೆ ತನ್ನ ಜಮೀನನ್ನು ಅಡಮಾನವಿಟ್ಟು ನಾಲ್ಕು ಲಕ್ಷ ರೂಪಾಯಿ ಸಾಲ ಪಡೆದಿದ್ದಳು. ಈ ಹಣವನ್ನು ಮರಳಿ ನೀಡಲು ಎಪಿಎಂಸಿ ಬಳಿ ಇರುವ ಖಾಸಗಿ ಕೊಠಡಿಗೆ ಹೋದ ಸಂದರ್ಭದಲ್ಲಿ ಆರೋಪಿಗಳು ಅವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರೆಂದು ಆರೋಪಿಸಲಾಗಿದೆ.
“ನನ್ನ ಹೆಸರಿನಲ್ಲಿ ಬೆಲೆಯ ಜಮೀನು ಇದ್ದದ್ದು ತಿಳಿದ ಆರೋಪಿಗಳು ಜಮೀನು ಖರೀದಿ ಹೆಸರಿನಲ್ಲಿ ಕರಾರು ಪತ್ರ ಬರೆಸಿ, ಸಾಲ ನೀಡಿದರು. ಕರಾರು ಪತ್ರದಲ್ಲಿ ತಮ್ಮನ್ನು ಕೃಷಿಕರೆಂದು ಗುರುತಿಸಿಕೊಂಡಿದ್ದರು, ಆದರೆ ಇವರು ಸರ್ಕಾರಿ ನೌಕರರು” ಎಂದು ಮಹಿಳೆ ದೂರು ದಾಖಲಿಸಿದ್ದಾರೆ.
ಹಣವನ್ನು ಹಿಂತಿರುಗಿಸಲು ಹೋದಾಗ, ಆರೋಪಿಗಳು ಅವಾಚ್ಯ ಪದಗಳನ್ನು ಬಳಸಿದ್ದಲ್ಲದೆ, ಲೈಂಗಿಕವಾಗಿ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ರಾಜಭಕ್ಷಿ ಎಂಬ ಕಿರಿಯ ಸಹಾಯಕ ಹಾಗೂ ಗ್ರಾಮ ಆಡಳಿತಾಧಿಕಾರಿಗಳಾದ ಮಲ್ಲಿಕಾರ್ಜುನ ಗಡೇದ್, ಬಂದೇನವಾಜ್ ನಿಡಗುಂದಿ, ಮೃತ್ಯುಂಜಯ ಮತ್ತು ಆನಂದ್ ಎಂಬವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತವಾದ ಕಾನೂನು ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…