Latest

ಸಿಂಧನೂರು ನಗರದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ – ಐದು ಮಂದಿ ಕಂದಾಯ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು

ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಐದು ಮಂದಿ ಕಂದಾಯ ಇಲಾಖೆ ನೌಕರರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂತ್ರಸ್ತೆಯ ದೂರಿನಂತೆ, ಮಿನಿ ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಿರಿಯ ಸಹಾಯಕ ಮತ್ತು ನಾಲ್ವರು ಗ್ರಾಮ ಆಡಳಿತ ಅಧಿಕಾರಿಗಳು ಸೇರಿ ಆರೋಪಿಗಳು ಅನಾಚಾರ ಎಸಗಿದ್ದಾರೆ. ಸಿಂಧನೂರು ನಗರ ಶಹರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಮಗಳ ಮದುವೆಗೆ ಖರ್ಚು ಮಾಡಬೇಕಾಗಿ ಮಹಿಳೆ ತನ್ನ ಜಮೀನನ್ನು ಅಡಮಾನವಿಟ್ಟು ನಾಲ್ಕು ಲಕ್ಷ ರೂಪಾಯಿ ಸಾಲ ಪಡೆದಿದ್ದಳು. ಈ ಹಣವನ್ನು ಮರಳಿ ನೀಡಲು ಎಪಿಎಂಸಿ ಬಳಿ ಇರುವ ಖಾಸಗಿ ಕೊಠಡಿಗೆ ಹೋದ ಸಂದರ್ಭದಲ್ಲಿ ಆರೋಪಿಗಳು ಅವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರೆಂದು ಆರೋಪಿಸಲಾಗಿದೆ.

“ನನ್ನ ಹೆಸರಿನಲ್ಲಿ ಬೆಲೆಯ ಜಮೀನು ಇದ್ದದ್ದು ತಿಳಿದ ಆರೋಪಿಗಳು ಜಮೀನು ಖರೀದಿ ಹೆಸರಿನಲ್ಲಿ ಕರಾರು ಪತ್ರ ಬರೆಸಿ, ಸಾಲ ನೀಡಿದರು. ಕರಾರು ಪತ್ರದಲ್ಲಿ ತಮ್ಮನ್ನು ಕೃಷಿಕರೆಂದು ಗುರುತಿಸಿಕೊಂಡಿದ್ದರು, ಆದರೆ ಇವರು ಸರ್ಕಾರಿ ನೌಕರರು” ಎಂದು ಮಹಿಳೆ ದೂರು ದಾಖಲಿಸಿದ್ದಾರೆ.

ಹಣವನ್ನು ಹಿಂತಿರುಗಿಸಲು ಹೋದಾಗ, ಆರೋಪಿಗಳು ಅವಾಚ್ಯ ಪದಗಳನ್ನು ಬಳಸಿದ್ದಲ್ಲದೆ, ಲೈಂಗಿಕವಾಗಿ ಕಿರುಕುಳ ನೀಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ರಾಜಭಕ್ಷಿ ಎಂಬ ಕಿರಿಯ ಸಹಾಯಕ ಹಾಗೂ ಗ್ರಾಮ ಆಡಳಿತಾಧಿಕಾರಿಗಳಾದ ಮಲ್ಲಿಕಾರ್ಜುನ ಗಡೇದ್, ಬಂದೇನವಾಜ್ ನಿಡಗುಂದಿ, ಮೃತ್ಯುಂಜಯ ಮತ್ತು ಆನಂದ್ ಎಂಬವರ ವಿರುದ್ಧ ಪೊಲೀಸ್ ಇಲಾಖೆ ಸೂಕ್ತವಾದ ಕಾನೂನು ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

38 minutes ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

40 minutes ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

41 minutes ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

43 minutes ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

45 minutes ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

46 minutes ago