Latest

ವಾಹನ ಓವರ್ ಟೇಕ್ ಮಾಡಿದ್ದಕ್ಕೆ ಮಹಿಳೆ ಮೇಲೆ ಚಾಲಕನಿಂದ ಹಲ್ಲೆ; ವಿಡಿಯೋ ವೈರಲ್

ವಾಹನವನ್ನು ಓವರ್ ಟೇಕ್ ಮಾಡಿದ ಕಾರಣಕ್ಕೆ ಮಹಿಳೆಯೊಬ್ಬರ‌ ಮೇಲೆ ವಾಹನ ಚಾಲಕ ನಡುರಸ್ತೆಯಲ್ಲೇ ಹಲ್ಲೆ ಮಾಡಿದ್ದಾನೆ. ಈ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ವಾಹನ ಚಾಲಕನ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮಹಿಳೆಯನ್ನು ಚಾಲಕ ಥಳಿಸಿರೋ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿರುವುದರಿಂದ ಅನೇಕರು ಚಾಲಕನನ್ನು ದೂಷಿಸುತ್ತಿದ್ದು ಆತನ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದಾರೆ. ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಶಿವಸೇನಾ ನಾಯಕಿ ಶಿಲ್ಪಾ ಬೋಡ್ಖೆ, ” ವಾಹನವನ್ನು ಹಿಂದಿಕ್ಕಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬರು ಮಹಿಳೆಯೊಬ್ಬರನ್ನು ಥಳಿಸಿದ ನಾಚಿಕೆಗೇಡಿನ ಘಟನೆಯೊಂದು ಭರ್ ಚೌಕ್‌ನಲ್ಲಿ ನಡೆದಿದೆ. ಗೃಹ ಸಚಿವ ದೇವೇಂದ್ರ ಫಡ್ನವೀಸ್ ಜಿ ಇದು ನಮ್ಮ ನಾಗ್ಪುರದಲ್ಲಿ ನಡೆದಿದೆ. ಈಗ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಎಲ್ಲೆಡೆ ಆಚರಿಸಲಾಯಿತು. ಇಲ್ಲಿ ಮಹಿಳೆಯರಿಗೆ ಗೌರವವನ್ನು ನೋಡಿ, ಅದು ಎಷ್ಟು ಸುರಕ್ಷಿತವಾಗಿದೆ ಎಂದು ನೋಡಿ” ಎಂದು ಟ್ವೀಟ್ ಮಾಡಿದ್ದಾರೆ.
ವರದಿಯೊಂದರ ಪ್ರಕಾರ, ಈ ಘಟನೆ ಜಾರಿಪಟ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಸ್ಕೂಟಿಯಲ್ಲಿದ್ದ ಮಹಿಳೆ ಮತ್ತು ಟ್ಯಾಕ್ಸಿ ಚಾಲಕನ ನಡುವೆ ವಾಗ್ವಾದ ನಡೆದಿದೆ. ಮಧ್ಯಾಹ್ನ 1 ಗಂಟೆಗೆ ಇಂದೋರಾ ಚೌಕ್‌ನಿಂದ ಭೀಮ್ ಚೌಕ್‌ಗೆ ಹೋಗುವ ರಸ್ತೆಯಲ್ಲಿ ಮಹಿಳೆ ಶಿವಶಂಕರ್ ಶ್ರೀವಾಸ್ತವ ಎಂದು ಗುರುತಿಸಲಾದ ಟ್ಯಾಕ್ಸಿ ಚಾಲಕನನ್ನು ಹಿಂದಿಕ್ಕಿದ್ದಾಳೆ ಎಂದು ವರದಿಯಾಗಿದೆ.
ಇದರಿಂದ ಕೆರಳಿದ ಟ್ಯಾಕ್ಸಿ ಚಾಲಕನು ಮಹಿಳೆಯನ್ನು ನಿಂದಿಸಿದನು. ಇದನ್ನು ಪ್ರಶ್ನಿಸಿದ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದನು. ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಾಲಕನನ್ನು ಬಂಧಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕೆರೆಗೆ ಬಿದ್ದು ಜೀವ ಕಳೆದುಕೊಂಡ ಮೂರು ವರ್ಷದ ಅವಳಿ ಮಕ್ಕಳು: ಯರಿ ನಾರಾಯಣಪುರದಲ್ಲಿ ದುರ್ಘಟನೆ, ಗ್ರಾಮದಲ್ಲಿ ಆಕ್ರಂದನ

ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…

2 hours ago

ಪ್ರಚಾರ ವಿವಾದಕ್ಕೆ ರಚಿತಾ ರಾಮ್ ಗಟ್ಟಿ ಪ್ರತಿಕ್ರಿಯೆ: ತಪ್ಪು ಮಾಡಿಲ್ಲ, ಕ್ಷಮೆ ಕೇಳುವುದಿಲ್ಲ!

ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…

2 hours ago

ಭಟ್ಕಳದಲ್ಲಿ ಜೂಜಾಟದ ಕ್ಲಬ್ ಮೇಲೆ ದಾಳಿ : 25 ಮಂದಿ ವಿರುದ್ಧ ಪೊಲೀಸ್ ಕ್ರಮ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್‌ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…

2 hours ago

30 ವರ್ಷದ ಹಿಂದಿನ ಲಂಚ ಪ್ರಕರಣ: ನಿವೃತ್ತಿಗೆ 10 ವರ್ಷವಾದ ಮೇಲೆ ಗ್ರಾಮ ಲೆಕ್ಕಾಧಿಕಾರಿಗೆ ಜೈಲುದಂಡ

ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…

6 hours ago

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

13 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

1 day ago