ವಾಹನವನ್ನು ಓವರ್ ಟೇಕ್ ಮಾಡಿದ ಕಾರಣಕ್ಕೆ ಮಹಿಳೆಯೊಬ್ಬರ ಮೇಲೆ ವಾಹನ ಚಾಲಕ ನಡುರಸ್ತೆಯಲ್ಲೇ ಹಲ್ಲೆ ಮಾಡಿದ್ದಾನೆ. ಈ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ವಾಹನ ಚಾಲಕನ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮಹಿಳೆಯನ್ನು ಚಾಲಕ ಥಳಿಸಿರೋ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿರುವುದರಿಂದ ಅನೇಕರು ಚಾಲಕನನ್ನು ದೂಷಿಸುತ್ತಿದ್ದು ಆತನ ವಿರುದ್ಧ ಕ್ರಮಕ್ಕೆ ಒತ್ತಾಯಿಸುತ್ತಿದ್ದಾರೆ. ಈ ವಿಡಿಯೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಶಿವಸೇನಾ ನಾಯಕಿ ಶಿಲ್ಪಾ ಬೋಡ್ಖೆ, ” ವಾಹನವನ್ನು ಹಿಂದಿಕ್ಕಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬರು ಮಹಿಳೆಯೊಬ್ಬರನ್ನು ಥಳಿಸಿದ ನಾಚಿಕೆಗೇಡಿನ ಘಟನೆಯೊಂದು ಭರ್ ಚೌಕ್ನಲ್ಲಿ ನಡೆದಿದೆ. ಗೃಹ ಸಚಿವ ದೇವೇಂದ್ರ ಫಡ್ನವೀಸ್ ಜಿ ಇದು ನಮ್ಮ ನಾಗ್ಪುರದಲ್ಲಿ ನಡೆದಿದೆ. ಈಗ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಎಲ್ಲೆಡೆ ಆಚರಿಸಲಾಯಿತು. ಇಲ್ಲಿ ಮಹಿಳೆಯರಿಗೆ ಗೌರವವನ್ನು ನೋಡಿ, ಅದು ಎಷ್ಟು ಸುರಕ್ಷಿತವಾಗಿದೆ ಎಂದು ನೋಡಿ” ಎಂದು ಟ್ವೀಟ್ ಮಾಡಿದ್ದಾರೆ.
ವರದಿಯೊಂದರ ಪ್ರಕಾರ, ಈ ಘಟನೆ ಜಾರಿಪಟ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಸ್ಕೂಟಿಯಲ್ಲಿದ್ದ ಮಹಿಳೆ ಮತ್ತು ಟ್ಯಾಕ್ಸಿ ಚಾಲಕನ ನಡುವೆ ವಾಗ್ವಾದ ನಡೆದಿದೆ. ಮಧ್ಯಾಹ್ನ 1 ಗಂಟೆಗೆ ಇಂದೋರಾ ಚೌಕ್ನಿಂದ ಭೀಮ್ ಚೌಕ್ಗೆ ಹೋಗುವ ರಸ್ತೆಯಲ್ಲಿ ಮಹಿಳೆ ಶಿವಶಂಕರ್ ಶ್ರೀವಾಸ್ತವ ಎಂದು ಗುರುತಿಸಲಾದ ಟ್ಯಾಕ್ಸಿ ಚಾಲಕನನ್ನು ಹಿಂದಿಕ್ಕಿದ್ದಾಳೆ ಎಂದು ವರದಿಯಾಗಿದೆ.
ಇದರಿಂದ ಕೆರಳಿದ ಟ್ಯಾಕ್ಸಿ ಚಾಲಕನು ಮಹಿಳೆಯನ್ನು ನಿಂದಿಸಿದನು. ಇದನ್ನು ಪ್ರಶ್ನಿಸಿದ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದನು. ಮಹಿಳೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಚಾಲಕನನ್ನು ಬಂಧಿಸಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…